Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಿವರಾತ್ರಿ ಮುಹೂರ್ತ : 770 ಲಿಂಗಗಳ ದೇವಸ್ಥಾನ ಉದ್ಘಾಟನೆ ಸೌಭಾಗ್ಯ

ವಿಜಯಪುರ: ನಗರದ 770 ಲಿಂಗಗಳ ದೇವಸ್ಥಾನ ಪ್ರಮುಖ ಆಕರ್ಷಣೆಯಾಗಿದೆ.

1954 ರಲ್ಲಿ ಬಂಥನಾಳ ಶ್ರೀ ಸಂಗನಬಸವ ಮಹಾಶಿವಯೋಗಿಗಳ ದಿವ್ಯ ಸಂಕಲ್ಪದಂತೆ ವಿಜಯಪುರ ನಗರದಲ್ಲಿ 770 ಅಮರ ಗಣಾಧೀಶ್ವರರ (ಅಮರಗಣಂಗಳ) ಸ್ಮಾರಕ ಲಿಂಗಗಳ ದೇವಾಲಯದ ಪ್ರತಿಷ್ಠಾಪನೆ ನಡೆದಿತ್ತು. ನಂತರ 1960 ರಲ್ಲಿ 770 ಅಮರ ಗಣಾಧೀಶ್ವರರ ದೇವಾಲಯ ವಿಜೃಂಭಣೆಯಿಂದ ಲೋಕಾರ್ಪಣೆಯಾಗಿತ್ತು. ಅಂದಿನ ಮೈಸೂರು ಮಹಾರಾಜರು, ಬಬಲೇಶ್ವರ ಶಾಂತವೀರ ಮಹಾಸ್ವಾಮೀಜಿ, ಚಿತ್ರದುರ್ಗ, ಸಿದ್ದಗಂಗಾ ಮತ್ತು ಸುತ್ತೂರು ಸೇರಿದಂತೆ ವಿವಿಧ ಮಠಾಧೀಶರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

12 ನೇ ಶತಮಾನದಲ್ಲಿ 770 ಅಮರಗಣಂಗಳ ಅಂದರೆ ಶರಣರು ಬಸವೇಶ್ವರ ಜೊತೆಗೂಡಿ ಸಾಮಾಜಿಕ ಮೌಡ್ಯಗಳನ್ನು ಹೋಗಲಾಡಿಸಿ, ಸಮಾನತೆಗಾಗಿ ಶ್ರಮಿಸಿದ್ದರು. ಈ ಹಿನ್ನಲೆ ಸಮಾಜಕ್ಕೆ ಅವರು ನೀಡಿದ ಕೊಡುಗೆಯ ಸ್ಮರಣಾರ್ಥ ಅವರ ಹೆಸರಿನಲ್ಲಿಯೇ 770 ದಂಪತಿ, ತಲಾ 151 ರೂಪಾಯಿ ಭಕ್ತಿ ಸಮರ್ಪಿಸಿ ಲಿಂಗ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡಿದ್ದರು.

ಕಳೆದ ವರ್ಷ ಮಹಾಶಿವರಾತ್ರಿ ಸಂದರ್ಭದಲ್ಲಿಈ 770 ಲಿಂಗಗಳ ದೇವಸ್ಥಾನ ದರ್ಶನಕ್ಕೆ ಆಗಮಿಸಿದ್ದ ಬಿಎಲ್ಇ ಸಂಸ್ಥೆ ಅಧ್ಯಕ್ಷ ಹಾಗೂ ಹಾಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌
ದೇವಸ್ಥಾನ ಪುನರುಜ್ಜೀವನ ಅಗತ್ಯವಿರುವುದನ್ನು ಮನಗಂಡು ದುರಸ್ಥಿಗೆ ಕ್ರಮ ಕೈಗೊಂಡಿದ್ದರು. ಬಿ ಎಲ್ ಡಿ ಇ ಡೀಮ್ಸ್ ವಿವಿಯಿಂದ 1.51 ಕೋಟಿ ವೆಚ್ಚದಲ್ಲಿ ದೇವಸ್ಥಾನದ ಮೇಲ್ಪಾವಣಿ ಹಾಗೂ ಗೋಡೆಗಳನ್ನು ನವೀಕರಣ ಮಾಡಿಸಿದ್ದಾರೆ. ಒಳಾಂಗಣದಲ್ಲಿ ಪೂಜಾ ಕಟ್ಟೆಯ ಮೇಲೆ ಪ್ರತಿಷ್ಠಾಪಿಸಲಾಗಿದ್ದ ಎಲ್ಲ 770 ಲಿಂಗಗಳನ್ನು ಬದಲಾವಣೆ ಮಾಡಲಾಗಿದೆ. ನವೀಕೃತಗೊಂಡ 770 ಲಿಂಗಗಳ ದೇವಸ್ಥಾನ ಉದ್ಘಾಟನೆಯಾಗಲಿದೆ. ಎಂ.ಬಿ. ಪಾಟೀಲ್ ಉದ್ಘಾಟನೆ ನೆರವೇರಿಸಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ