Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ

ಚೆನ್ನೈ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ತೀವ್ರ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದ್ದು, ತಮಿಳುನಾಡು ಬಿಜೆಪಿಯ ಪ್ರಭಾವಿ ನಾಯಕ ಕೆ. ಅಣ್ಣಾಮಲೈ ಅವರು ಶುಕ್ರವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಹಾಗೂ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಬಿಜೆಪಿ ಮುಖ್ಯಸ್ಥ ನಿತಿನ್ ನಬಿನ್ ಅಂಗೀಕರಿಸಿದ್ದಾರೆ.

ಅಣ್ಣಾಮಲೈ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಬಿಜೆಪಿ ಹೈಕಮಾಂಡ್ ಕೊನೆಯ ಕ್ಷಣದವರೆಗೂ ತೀವ್ರ ಪ್ರಯತ್ನ ನಡೆಸಿತ್ತಾದರೂ, ಅದು ವಿಫಲವಾಗಿದೆ. ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಹಿರಿಯ ನಾಯಕರು ಸಾಕಷ್ಟು ಪ್ರಯತ್ನ ನಡೆಸಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಳೆದ ಮಂಗಳವಾರ ದೆಹಲಿಗೆ ಭೇಟಿ ನೀಡಿದ್ದ ಅಣ್ಣಾಮಲೈ ಅವರು ಬಿಜೆಪಿ ಮುಖ್ಯಸ್ಥ ನಿತಿನ್ ನಬಿನ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ ಅವರ ಜೊತೆ ಸರಣಿ ಸಭೆಗಳನ್ನು ನಡೆಸಿದ್ದರು.
ಈ ಸಭೆಗಳಲ್ಲಿ ತಮಿಳುನಾಡಿನ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ಹಿರಿಯ ನಾಯಕರಿಗೆ ವಿವರಿಸಿದ್ದ ಅಣ್ಣಾಮಲೈ, ತಾವು ಪಕ್ಷದಿಂದ ದೂರ ಸರಿಯಲು ಇರುವ ಮುಖ್ಯ ಕಾರಣಗಳನ್ನು ಮುಕ್ತವಾಗಿ ಹಂಚಿಕೊಂಡಿದ್ದರು. ಅಲ್ಲದೆ, ತಾವು ರಾಜೀನಾಮೆ ನೀಡುವ ನಿರ್ಧಾರವನ್ನು ಮೌಖಿಕವಾಗಿ ಹಿರಿಯ ನಾಯಕರಿಗೆ ತಿಳಿಸಿದ್ದರು ಎನ್ನಲಾಗಿದೆ.

ತಮಿಳುನಾಡಿನಲ್ಲಿ ಬಿಜೆಪಿಗೆ ಭಾರಿ ಧಕ್ಕೆ
ಅಣ್ಣಾಮಲೈ ಅವರ ಈ ನಿರ್ಗಮನವು ತಮಿಳುನಾಡಿನಲ್ಲಿ ತನ್ನ ನೆಲೆಯನ್ನು ಗಟ್ಟಿಗೊಳಿಸಲು ನೋಡುತ್ತಿದ್ದ ಬಿಜೆಪಿಯ ಮಹತ್ವಾಕಾಂಕ್ಷೆಗೆ ಬಿದ್ದ ದೊಡ್ಡ ಪೆಟ್ಟು ಎಂದೇ ವಿಶ್ಲೇಷಿಸಲಾಗುತ್ತಿದೆ. ತಮಿಳುನಾಡು ಬಿಜೆಪಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ, ಅಣ್ಣಾಮಲೈ ಅವರು ರಾಜ್ಯದಲ್ಲಿ ಪಕ್ಷದ ಅತ್ಯಂತ ಪ್ರಮುಖ ಮುಖವಾಗಿ ಹೊರಹೊಮ್ಮಿದ್ದರು. ಅಷ್ಟೇ ಅಲ್ಲದೆ, ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಿ, ದ್ರಾವಿಡ ರಾಜಕಾರಣದ ಕೋಟೆಯಲ್ಲಿ ಕಮಲ ಅರಳಿಸಲು ತೀವ್ರ ಶ್ರಮಿಸಿದ್ದರು.
ಅವರ ಆಕ್ರಮಣಕಾರಿ ಪ್ರಚಾರ ಶೈಲಿ, ರಾಜಕೀಯ ವಿರೋಧಿಗಳ ವಿರುದ್ಧದ ನೇರ ವಾಗ್ದಾಳಿ ಮತ್ತು ರಾಜ್ಯಾದ್ಯಂತ ಅವರು ನಡೆಸಿದ ವ್ಯಾಪಕ ಪಾದಯಾತ್ರೆಗಳು ತಮಿಳುನಾಡಿನಲ್ಲಿ ಬಿಜೆಪಿಯನ್ನು ಒಂದು ಪ್ರಬಲ ಶಕ್ತಿಯಾಗಿ ಗುರುತಿಸುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು.

ತಮಿಳುನಾಡಿನಲ್ಲಿ ಬಿಜೆಪಿ  ಮತಗಳಿಕೆ ಹೆಚ್ಚಿಸಿದ್ದ ಅಣ್ಣಾಮಲೈ
ಅಣ್ಣಾಮಲೈ ಅವರ ಸಮರ್ಥ ನಾಯಕತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಮತಗಳಿಕೆ ಕೇವಲ 3.6%ರಷ್ಟು ಇತ್ತು. ಅಣ್ಣಾಮಲೈ ನಾಯಕತ್ವದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಇದು ಭಾರಿ ಪ್ರಮಾಣದಲ್ಲಿ ಅಂದರೆ 11.2%ರಷ್ಟಕ್ಕೆ ಏರಿಕೆಯಾಗಿತ್ತು. ಇದು ತಮಿಳುನಾಡಿನ ಲೋಕಸಭಾ ಚುನಾವಣಾ ಇತಿಹಾಸದಲ್ಲೇ ಬಿಜೆಪಿಯ ಅತ್ಯುತ್ತಮ ಸಾಧನೆಯಾಗಿದೆ.
ಪಕ್ಷದ ಮತಗಳಿಕೆ ಗಣನೀಯವಾಗಿ ಹೆಚ್ಚಾಗಿದ್ದರೂ, ಬಿಜೆಪಿಗೆ ಒಂದೂ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಮಲೈ ಅವರೂ ಸಾಕಷ್ಟು ಮತಗಳನ್ನು ಪಡೆದರೂ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಈಗ ಅವರು ಬಿಜೆಪಿಗೆ ರಾಜೀನಾಮೆ ನೀಡಿರುವುದು ತಮಿಳುನಾಡಿನಲ್ಲಿ ಬಿಜೆಪಿಗೆ ದೊಡ್ಡ ನಷ್ಟ ಎಂದು ವಿಶ್ಲೇಷಿಸಲಾಗುತ್ತಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಹುಕೋಟಿ ವಂಚನೆ : ನೀಲಣ್ಣವರ, ಆಪ್ತರ ನಿವಾಸಗಳ ಮೇಲೆ ಇಡಿ ದಾಳಿSIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶಈ ನಿಗೂಢ ಬಾವಿಯಲ್ಲಿ ಮತ್ತೆ ಅಚ್ಚರಿ ; ಸಮುದ್ರದ ಅಲೆಯಂತೆ ತನ್ನಷ್ಟಕ್ಕೆ ತಾನೇ ಏರಿಳಿಯುವ ನೀರು..!ವಿಭಾಗೀಯ ಕಚೇರಿಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲು ಕ್ರಮ ಕೈಕೊಂಡವರು ಅರಸುಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು...!ಯುವಜನತೆ  ಪಠ್ಯ ಮತ್ತು ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ : ಕುಲಪತಿ ತ್ಯಾಗರಾಜಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ  ಲಕ್ಷ್ಮೀ ಇದ್ದರೆ DK ಸಂಪುಟಕ್ಕೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿ