Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವು

Advertisement

ಕಾರವಾರ: ಸ್ಕೂಟಿ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ(siddapur) ಮುಖ್ಯರಸ್ತೆಯ ಕನ್ನಳ್ಳಿ (ಮಳವತ್ತಿ) ಚೆಕ್‌ಪೋಸ್ಟ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.
ಮೃತ ಶಿಕ್ಷಕಿಯನ್ನು ಕೊಲಸಿರ್ಸಿ ಕ್ರಾಸ್ ನಿವಾಸಿ ಪೂರ್ಣಿಮಾ ಗಣಪತಿ ಭಟ್ (47) ಎಂದು ಗುರುತಿಸಲಾಗಿದೆ. ಇವರು ಸಿದ್ದಾಪುರ ಪಟ್ಟಣದ ಹೊಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (HPS ಹೊಸೂರು) ಸಹ-ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಸ್ತುತ ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಅವರು ಜನಗಣತಿ ಕಾರ್ಯದ ಮಾಹಿತಿ ನೀಡಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಶಿರಸಿ ಕಡೆಯಿಂದ ಸಿದ್ದಾಪುರದತ್ತ ಕಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್, ಪೂರ್ಣಿಮಾ ಅವರು ಚಲಾಯಿಸುತ್ತಿದ್ದ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ, ಗಂಭೀರ ಗಾಯಗಳಿಂದ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯರಿದ್ದಾರೆ...ಏನಿದರ ಅರ್ಥ ?ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅಮಾನತುಇರಾನ್‌-ಅಮೆರಿಕ ಶಾಂತಿ ಒಪ್ಪಂದಕ್ಕೆ ಪೆಜೆಶ್ಕಿಯಾನ್-ಟ್ರಂಪ್ ಸಹಿ ; ತಕ್ಷಣದಿಂದ ಹಾರ್ಮುಜ್ ಜಲಸಂಧಿ ಓಪನ್‌ ; 14 ಅಂಶಗಳ ಒಪ್ಪಂದದಲ್ಲಿ ಏನಿದೆ?ಜಿಂಕೆಯನ್ನೇ ನುಂಗಿದ ಹೆಬ್ಬಾವು !ಪುಸ್ತಕ ಅವಲೋಕನ ಕಾರ್ಯಕ್ರಮಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..! ಶತಮಾನದ ಇತಿಹಾಸ ಹೊಂದಿದೆ ಈ ಪ್ರತಿಷ್ಠಿತ ಶಾಲೆಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!