Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ರೈತರ ಹಿತ ಕಾಯುವುದು ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ

 

ಮಂಡ್ಯ :
ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥಾದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಮಾತನಾಡಿದರು.‌

ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5000 ಕ್ಯೂಸೆಕ್ಸ್ ನೀರು ಬಿಡಲು ಹೇಳಿದರು, ಬಳಿಕ 3000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ. ಈಗ ನೆನ್ನೆ ದಿನ 2600 ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ. ಆದರೆ ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ. ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟೆ ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ನಿಮ್ಮ ಹಿತ ಕಾಯಲು ಹಿಂದೆ ಬೀಳುವುದಿಲ್ಲ. ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ. ನಾವು ಕೇವಲ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವವರಲ್ಲ ಎಂದು ಸ್ಪಷ್ಟವಾಗಿ ನುಡಿದರು.

ರೈತರ ಹಿತ ಕಾಯಲು ಗಂಭೀರವಾದ, ಪ್ರಾಯೋಗಿಕವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ರೂ ಬಿಡುಗಡೆ ಮಾಡಿದ್ದೇವೆ. ನಾವು ನಿಮ್ಮ ಪರವಾಗಿ ಇರುವವರು. ಅನುಮಾನ ಬೇಡವೇ ಬೇಡ ಎಂದರು.

ಕೃಷಿ ಸಚಿವರಾದ ಚಲುವರಾಯಸ್ವಾಮಿ, ಶಾಸಕರಾದ ರವಿ ಗಣಿಗ, ದಿನೇಶ್ ಗೂಳಿಗೌಡ, ನರೇಂದ್ರಸ್ವಾಮಿ ಸೇರಿದಂತೆ ಹಲವು ಮಂದಿ ನಾಯಕರು ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ