Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೊಸ ಜಿಲ್ಲೆಗಳ ರಚನೆಗೆ ಸಿದ್ದರಾಮಯ್ಯ ಅತ್ಯಾಸಕ್ತಿ : ರಾಜ್ಯೋತ್ಸವಕ್ಕೆ ಕೈ ಕೊಡುಗೆ ?

 

ಬೆಂಗಳೂರು :
ರಾಜ್ಯದ ದೊಡ್ಡ ದೊಡ್ಡ ಪಟ್ಟಣಗಳನ್ನು ಕೇಂದ್ರವಾಗಿರಿಸಿಕೊಂಡು ಹೊಸ ಜಿಲ್ಲೆ ರಚಿಸಬೇಕು ಎಂಬ ಬೇಡಿಕೆ ಇಂದು ನಿನ್ನೆಯದಲ್ಲ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಅತ್ಯಾಸಕ್ತಿ ವಹಿಸಿರುವುದು
ಸಂಚಲನಕ್ಕೆ ಕಾರಣವಾಗಿದ್ದು ಕರ್ನಾಟಕ ರಾಜ್ಯೋತ್ಸವ ವೇಳೆಗೆ ನೂತನ ಜಿಲ್ಲೆಗಳ ರಚನೆ ಬಹುತೇಕ ಖಚಿತ ಎನಿಸಿದೆ.

ರಾಜ್ಯದ ಕೆಲವು ನಗರಗಳು ಜಿಲ್ಲಾ ಕೇಂದ್ರವನ್ನು ಮೀರಿ ಬೆಳೆಯುತ್ತಿವೆ. ಅಂತಹ ನಗರಗಳನ್ನು ಜಿಲ್ಲೆ ಮಾಡಬೇಕು ಎಂಬ ಬೇಡಿಕೆ ಇದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಜಿಲ್ಲೆಗಳ ಸಂಖ್ಯೆ ತೀರಾ ಕಡಿಮೆ ಇದೆ. ಹೊಸದಾಗಿ ಉದಯಿಸಿರುವ ಪಕ್ಕದ ತೆಲಂಗಾಣದಲ್ಲಿ 30ಕ್ಕೂ ಹೆಚ್ಚು ಜಿಲ್ಲೆಗಳಿವೆ. ರಾಜಸ್ಥಾನದಲ್ಲಿ 50ಕ್ಕೂ ಹೆಚ್ಚು ಜಿಲ್ಲೆಗಳಿವೆ.
ಅದರಲ್ಲೂ ಕರ್ನಾಟಕದಲ್ಲಿ ಉತ್ತರ ಕರ್ನಾಟಕಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕದಲ್ಲಿ ಜಿಲ್ಲೆಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿವೆ. ಅನುದಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಉತ್ತರ ಕರ್ನಾಟಕಕ್ಕೆ ತೀರಾ ಅನ್ಯಾಯವಾಗುತ್ತಿದೆ. ಈ ಅಸಮತೋಲನ ಹೋಗಲಾಡಿಸಲು ರಾಜ್ಯ ಸರಕಾರ ಹೊಸ ಜಿಲ್ಲೆಗಳ ರಚನೆಗೆ ಆದ್ಯತೆ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಚಿಕ್ಕೋಡಿ, ಗೋಕಾಕ, ಅಥಣಿ, ಬೈಲಹೊಂಗಲ, ಸಿರಸಿ, ಕುಂದಾಪುರ, ಪುತ್ತೂರು, ಸಾಗರ/ ಶಿಕಾರಿಪುರ, ಇಂಡಿ, ಹುಣಸೂರು, ಜಮಖಂಡಿ, ಸಿಂಧನೂರು, ಸೇಡಂ, ತಿಪಟೂರು, ಗಂಗಾವತಿ (ಕಿಷ್ಕಿಂದಾ) ಸೇರಿದಂತೆ ಹಲವು ಹೊಸ ಜಿಲ್ಲೆಗಳ ಬೇಡಿಕೆ ಆಗಾಗ ಮೊಳಗುತ್ತಿದೆ.

ಸಿದ್ದರಾಮಯ್ಯ ಒಲವು :
ಪಾವಗಡ, ಶಿರಾ, ಕೊರಟಗೆರೆ, ಮಧುಗಿರಿ ಸೇರಿ ಹೊಸ ಜಿಲ್ಲೆ ರಚಿಸಲು ಸರಕಾರ ಮುಂದಾಗಿದೆ ಎಂಬ ಮಾಹಿತಿ ಇದೆ.

ಈ ಮೊದಲು ಶಿರಾವನ್ನು ಕೇಂದ್ರವಾಗಿಟ್ಟುಕೊಂಡು ಹೊಸ ಜಿಲ್ಲೆ ಮಾಡಬೇಕು ಎಂಬ ಬೇಡಿಕೆ ಇತ್ತು. ಆದರೆ ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಧುಗಿರಿ ಜಿಲ್ಲೆ ರಚನೆ ಬಗ್ಗೆ ಮಾತನಾಡಿರುವುದು ಹೊಸ ಜಿಲ್ಲೆಗಳ ಬಗ್ಗೆ ಸರಕಾರ ಮುತುವರ್ಜಿ ವಹಿಸಿರುವ ಸಂಕೇತವಾಗಿದೆ.
ಮಧುಗಿರಿ ಉಪವಿಭಾಗದ ನಾಲ್ಕು ತಾಲೂಕುಗಳನ್ನು ಒಳಗೊಂಡು ಮಧುಗಿರಿ ಜಿಲ್ಲೆ ರಚಿಸುವಂತೆ ಸಚಿವ ಪರಮೇಶ್ವರ್ ಮತ್ತು ಕೆ.ಎನ್. ರಾಜಣ್ಣ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ