Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ : ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಸಿದ್ದರಾಮಯ್ಯ

 

ಚಾಮರಾಜನಗರ :
ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ.  ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದರು.

ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು.

ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೈ ಮಾದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿಗಳು ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಪಟ್ಟದ ಗುರುಸ್ವಾಮಿಗಳು, ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಅಧ್ಯಕ್ಷತೆಯನ್ನು ಹನೂರು ಶಾಸಕ ಎಂ.ಆರ್.ಮಂಜುನಾಥ್ ವಹಿಸಿದ್ದರು. ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಜಿಲ್ಲೆಯ ಶಾಸಕರು ಮತ್ತು ನಾಯಕರು ಉಪಸ್ಥಿತರಿದ್ದರು.

*ರಾಷ್ಟ್ರಪತಿ ಭವನ ಇನ್ನು ಮುಂದೆ ತಪೋಭವನ*

ಮಲೈ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಾದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು. ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ