Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆದಿವಾಸಿ ಬುಡಕಟ್ಟುಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರತ್ಯೇಕ ಸಭೆ : ಸಿದ್ದರಾಮಯ್ಯ

 


ಬೆಂಗಳೂರು :
ಕಾಡು/ ಕಾಡಂಚಿನ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟುಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕೊಡಗು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ದಕ್ಶಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಹಾಗೂ ಬುಡಕಟ್ಟು ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ರಾಜ್ಯದ, ಕಾಡು, ಕಾಡಂಚಿನ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟುಗಳ ಒಕ್ಕೂಟದ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದರು.

ರಾಜ್ಯದಲ್ಲಿ 51 ಆದಿವಾಸಿ ಜನಾಂಗಗಳಿದ್ದು, ಸೋಲಿಗ , ಜೇನುಕುರುಬ ಸೇರಿದಂತೆ 12 ಬುಡಕಟ್ಟು ಜನಾಂಗಗಳು ಸೌಲಭ್ಯ ವಂಚಿತವಾಗಿವೆ. ಅವರಲ್ಲಿ ಹಲವರಿಗೆ ಯೋಜನೆಗಳ ಸೌಲಭ್ಯ ಪಡೆಯಲು ಅಗತ್ಯವಿರುವ ದಾಖಲೆಗಳು ಕೂಡ ಇಲ್ಲದ ಪರಿಸ್ಥಿತಿ ಇದೆ. ಶಿಬಿರಗಳನ್ನು ಆಯೋಜಿಸಿ ಆಧಾರ್ ಮುಂತಾದ ದಾಖಲೆಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ನಿಯೋಗವು ಮನವಿ ಮಾಡಿತು.

ಎಎನ್ಎಮ್, ನರ್ಸಿಂಗ್, ಮುಂತಾದ ಶಿಕ್ಷಣ ಪಡೆದಿರುವ ಬುಡಕಟ್ಟು ಜನಾಂಗಗಳ ಮೊದಲ ಪೀಳಿಗೆಗೆ ಆರೋಗ್ಯ ಇಲಾಖೆಯಲ್ಲಿ ಕೆಲಸ ನೀಡುವ ಬಗ್ಗೆ ಹಾಗೂ ಪ್ರಸ್ತುತ ಅರಣ್ಯ ಇಲಾಖೆಯ ಅರಣ್ಯ ಹುದ್ದೆಗಳಿಗೆ ಅರಣ್ಯವಾಸಿಗಳಿಗೆ ನೀಡಲು ಮರುಆದೇಶ ಹೊರಡಿಸುವ ಬಗ್ಗೆ ಮನವಿ ಮಾಡಲಾಯಿತು.

ರಾಜ್ಯದಲ್ಲಿನ 115 ಆಶ್ರಮ ಶಾಲೆಗಳಲ್ಲಿ ಖಾಯಂ ಶಿಕ್ಷಕರಿಲ್ಲ. ಆದಿವಾಸಿ ಸಮುದಾಯಕ್ಕೆ ಸೇರಿದ ಬಿಎಡ್ ಶಿಕ್ಷಣ ಪಡೆದಿರುವವರನ್ನೇ ಈ ಶಾಲೆಗಳಿಗೆ ನೇಮಕ ಮಾಡುವಂತೆ ಮುಖ್ಯಮಂತ್ರಿಗಳನ್ನು ಕೋರಲಾಯಿತು.

ಆದಿವಾಸಿ ಬುಡಕಟ್ಟುಗಳ ಒಕ್ಕೂಟದ ಡಾ: ರತ್ನಮ್ಮ ಮತ್ತು ತಂಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಹಾಗೂ ಬುಡಕಟ್ಟು ಜನಾಂಗಗಳ ಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ