Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿದ್ದು ಸ್ಪರ್ಧೆಗೆ ಅಚ್ಚರಿ ಕ್ಷೇತ್ರದ ಹೆಸರು !

ಬೆಂಗಳೂರು :ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪರ್ಧೆಗೆ ಇದೀಗ ಹೊಸ ಕ್ಷೇತ್ರದ ಹೆಸರು ತೇಲಿ ಬಂದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ವಿಧಾನಸಭಾ ಮತಕ್ಷೇತ್ರದ ಹೆಸರು ಇದೀಗ ಮುಂಚೂಣಿಯಲ್ಲಿದೆ. ಸಿದ್ದರಾಮಯ್ಯ ಅವರು ಇದುವರೆಗೆ ಕೋಲಾರ ಮತಕ್ಷೇತ್ರದಿಂದ ಸ್ಪರ್ಧೆ ನಡೆಸುತ್ತಾರೆ ಎಂಬ ಛಾಯೆ ದಟ್ಟವಾಗಿತ್ತು. ಆದರೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ನೀಡಿರುವ ಸಲಹೆ ಮೇರೆಗೆ ಅವರು ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದರು.

ಆಗ ಸುಪುತ್ರ ಪ್ರತಿನಿಧಿಸುತ್ತಿದ್ದ ವರುಣ ಹೆಸರು ಮುಂಚೂಣಿಯಲ್ಲಿತ್ತು‌. ಆದರೆ ಇದೀಗ ಅವರು ಕೊಪ್ಪಳ ಜಿಲ್ಲೆಯ ಕುಷ್ಟಗಿಯನ್ನು ಆರಿಸಿಕೊಳ್ಳಲು ಮುಂದಾಗಿದ್ದಾರೆ. ಅದಕ್ಕೆ ಪೂರಕವಾಗಿ ಅವರ ಬೆಂಬಲಿಗರು ಕ್ಷೇತ್ರಾದ್ಯಂತ ಸಂಚಾರ ನಡೆಸಿದ್ದಾರೆ.

ಅದರಲ್ಲೂ ಪ್ರಮುಖವಾಗಿ ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಸತೀಶ ಜಾರಕಿಹೊಳಿ ಅವರು ಸಿದ್ದರಾಮಯ್ಯ ಪರವಾಗಿ ಕ್ಷೇತ್ರದಲ್ಲಿ ಬಹು ಹಿಂದೆ ಸಂಚಲನ ಮೂಡಿಸಿದ್ದಾರೆ.

ಸಿದ್ದರಾಮಯ್ಯ ಅವರ ಅತ್ಯಪ್ತ ಸತೀಶ ಜಾರಕಿಹೊಳಿ ಅವರು ವಾರಕ್ಕೊಮ್ಮೆ ಕುಷ್ಟಗಿ ಮತಕ್ಷೇತ್ರಕ್ಕೆ ಭೇಟಿ ನೀಡಿ ಗಮನ ಸೆಳೆಯುತ್ತಿದ್ದಾರೆ. ಕಳೆದು ಸಲ ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆಗೆ ನಿಂತಾಗ ಸತೀಶ್ಲ ಜಾರಕಿಹೊಳಿ ಅವರು ಹೆಗಲಿಗೆ ಹೆಗಲು ಕೊಟ್ಟು ಗೆಲುವಿಗೆ ಶ್ರಮಿಸಿದ್ದರು. ಈ ಬಾರಿ ಕೊನೆ ಗಳಿಗೆಯಲ್ಲಿ ಕುಷ್ಟಗಿಗೆ ಬಂದರು ಬರಬಹುದು ಎಂಬ ಲೆಕ್ಕಾಚಾರದೊಂದಿಗೆ ಸಿದ್ದರಾಮಯ್ಯ ಪರವಾಗಿ ಸತೀಶ ಜಾರಕಿಹೊಳಿ ಕುಷ್ಟಗಿ ಮತಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬಂದಿದ್ದವು. ಸಿದ್ದರಾಮಯ್ಯ ಅವರು ಬೇರೆ ಕ್ಷೇತ್ರವನ್ನು ಆಯ್ದುಕೊಳ್ಳುವ ಅನಿವಾರ್ಯತೆ ಎದುರಾಗಿದ್ದು ಸತೀಶ ಜಾರಕಿಹೊಳಿ ಅವರು ಮಾಡಿರುವ ಕೆಲಸಗಳು ಇದೀಗ ನೆರವಿಗೆ ಬರುವ ಸಾಧ್ಯತೆ ಇದೆ.

ಸತೀಶ ಜಾರಕಿಹೊಳಿ ಅವರು ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ಶಾಲಾ ಮಕ್ಕಳಿಗೆ ತಮ್ಮ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಡೆಸ್ಕ್ ವಿತರಿಸಿದ್ದಾರೆ. ರಾಜಕೀಯ ಲೆಕ್ಕಾಚಾರದ ಲಾಭ ಇದರ ಹಿಂದೆ ಇದೆ ಎಂದು ಆ ಸಂದರ್ಭದಲ್ಲಿ ರಾಜಕೀಯ ತಜ್ಞರು ಊಹಿಸಿದ್ದರು. ಸತೀಶ ಜಾರಕಿಹೊಳಿ ಅವರು ಈ ಕ್ಷೇತ್ರದ ಮೇಲೆ ಹೆಚ್ಚಿನ ಬಲವು ಆಗಾಗ ತೋರುತ್ತಿರುವುದು ಕಂಡುಬಂದಿದ್ದು ಇದೀಗ ಸಿದ್ದರಾಮಯ್ಯ ಇಲ್ಲಿ ಸ್ಪರ್ಧೆಗೆ ಮುಂದಾದರೆ ಅವರಿಗೆ ಪೂರಕವಾಗುವ ಸಾಧ್ಯತೆ ಹೆಚ್ಚಿದೆ.

ಸಿದ್ದರಾಮಯ್ಯ ಅವರಿಗೆ
ಕೊಪ್ಪಳಕ್ಕಿಂತ ಕುಷ್ಟಗಿ ಮತಕ್ಷೇತ್ರದಲ್ಲಿ ಗೆಲುವು ನಿರಾಯಾಸ ಎನ್ನುವ ಲೆಕ್ಕಾಚಾರವಿದೆ. ಕುರುಬ ಸಮುದಾಯದ ಮತಗಳು ಅತ್ಯಂತ ಗಣನೀಯ ಪ್ರಮಾಣದಲ್ಲಿವೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಬಿಜೆಪಿ ಅಭ್ಯರ್ಥಿಯಾಗಿರುವ ದೊಡ್ಡನಗೌಡ ಪಾಟೀಲ ಕೊನೆಗಳಿಗೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದು ಸಿದ್ದರಾಮಯ್ಯ ಪರ ಕೆಲಸ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಆದ್ದರಿಂದ ಸಿದ್ದರಾಮಯ್ಯ ಅವರಿಗೆ ಕುಷ್ಟಗಿ ಮತಕ್ಷೇತ್ರ ಅತ್ಯಂತ ಸುರಕ್ಷಿತ ಎಂದು ಭಾವಿಸಲಾಗುತ್ತಿದೆ.
ಒಟ್ಟಾರೆ, ಸಿದ್ದರಾಮಯ್ಯ ಅವರ ವಿಧಾನಸಭಾ ಚುನಾವಣಾ ಸ್ಪರ್ಧೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ