Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿರಿಯ ರಾಜಕಾರಣಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಲು ಗಾಯಕ ಅಶೋಕ ಕಾಂಬಳೆ ಮನವಿ 

ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಕರ್ನಾಟಕ ರಾಜ್ಯ ಕಂಡ ಧೀಮಂತ ರಾಜಕೀಯ ನಾಯಕ, ಕರ್ನಾಟಕ ರಾಜ್ಯದ ತುಂಬಾ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಜನಪ್ರಿಯ ರಾಜಕಾರಣಿ, ಪಕ್ಷ ಸಂಘಟನಾ ಚತುರ, ರೈತರು, ಬಡವರು, ನೋಂದವರ ಪರ ಬೆನ್ನೆಲುಬಾಗಿ ನಿಂತು ಅವರ ಅಭಿವೃದ್ದಿಗಾಗಿ ಹಗಲಿರುಳು ದುಡಿಯುವ ಜನನಾಯಕ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಗಾಯಕ, ಉಪನ್ಯಾಸಕ ಅಶೋಕ ಕೆ. ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಲಕ್ಷ್ಮಣ ಸವದಿ ಅವರಿಗೆ ಎಲ್ಲ ರೀತಿಯಲ್ಲೂ ಜನಬೆಂಬಲ ಇದೆ ಅಥಣಿ ಕ್ಷೇತ್ರದಲ್ಲಿ ಅಭಿವೃದ್ದಿಗೆ ಪೂರಕವಾದ ಹಲವು ಕಾರ್ಯಗಳನ್ನು ಮಾಡಿದ್ದಾರೆ ಹೀಗಾಗಿ  ರಾಜ್ಯ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಲ್ಲಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಹಿರಿಯ ರಾಜಕಾರಣಿ ಲಕ್ಷ್ಮಣ ಸವದಿ ಅವರು
 ವಿವಿಧ ಖಾತೆಗಳ ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ತಮ್ಮ ಅಧಿಕಾರಾವಧಿಯಲ್ಲಿ ಅತ್ಯುತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಸಹಕಾರಿ ಸಚಿವರಾಗಿ ರೈತರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಒಬ್ಬ ಒಳ್ಳೆಯ ರಾಜಕಾರಣಿ ಹಾಗೂ ಅನುಭವಿ ನಾಯಕರಾಗಿದ್ದಾರೆ. ಹಿಂದುಳಿದವರು, ಬಡವರು, ದೀನ ದಲಿತರು, ರೈತರ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ತಮ್ಮದೇ ಆದ ಸಂಘಟನಾತ್ಮಕ ಚತುರತೆ, ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಹಿರಿಯ ನಾಯಕರಾಗಿದ್ದು, ಇವರಿಗೆ ಕಾಂಗ್ರೆಸ್ ಪಕ್ಷವು ಗೌರವ ನೀಡಿ  ಸಚಿವ ಸ್ಥಾನ ನೀಡಬೇಕು. ರಾಜ್ಯದಲ್ಲಿಯೇ ಅತಿ ಹೆಚ್ಚು ಮತ ಪಡೆದವರಲ್ಲಿ 2ನೇ ಸ್ಥಾನಕ್ಕಿದ್ದಾರೆ. ಸುಮಾರು 76000 ಮತಗಳ ಅಂತರದಿಂದ ಗೆಲುವು ಮೂಲಕ ಅವರ ಶಕ್ತಿಯನ್ನು ಪ್ರದರ್ಶಿಸಿದ್ದಾರೆ. ಇಷ್ಟು ದಿನ ಅವರಿಗೆ ಸಚಿವ ಸ್ಥಾನ ನೀಡಲೇ ಬೇಕೆಂದು ರಾಜ್ಯದ ವಿವಿಧೆಡೆಯಿಂದ ಅವರ ಅಭಿಮಾನಿಗಳು ಪ್ರಭಟನೆ ನಡೆಸುತ್ತಿದ್ದರು. ಅವರ ಪರವಾಗಿ ಎಲ್ಲೆಡೆ ಈಗ ಡಿಕೆ ಶಿವಕುಮಾರ ನೇತೃತ್ವದ ಸರ್ಕಾರದಲ್ಲಿ ಇನ್ನೂ 20 ಜನ ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಲಾಗಿದೆ. ಶಾಸಕ ಲಕ್ಷ್ಮಣ ಸವದಿ ಅವರಿಗೆ ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯರು ನೀಡಿದ ಭರವಸೆಯಂತೆ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ