Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ : ರೈಲ್ವೆ ಪ್ರಯಾಣಿಕರಿಗೆ ವಿಶೇಷ ಸೂಚನೆ

 

ಬೆಳಗಾವಿ: ಪ್ರಯಾಣಿಕರ ಅನುಕೂಲಕ್ಕಾಗಿ, ಬೆಳಗಾವಿ ಮತ್ತು ಮೀರಜ್ ನಿಲ್ದಾಣಗಳ ನಡುವಿನ ಕಾಯ್ದಿರಿಸದ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಗಿದೆ.

ರೈಲುಗಳ ಸಂಖ್ಯೆ 07301/07302 ಬೆಳಗಾವಿ-ಮೀರಜ್-ಬೆಳಗಾವಿ ಮತ್ತು 07303/07304 ಬೆಳಗಾವಿ-ಮಿರಜ್- ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲುಗಳ ಸಂಚಾರವನ್ನು ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಗಿದೆ. ಇದಕ್ಕೂ ಮೊದಲು ಈ ರೈಲುಗಳ ಸಂಚಾರವನ್ನು ಜನವರಿ 31, 2025 ರವರೆಗೆ ಓಡಿಸಲು ಸೂಚಿಸಲಾಗಿತ್ತು. ಈ ರೈಲುಗಳು ಅಸ್ತಿತ್ವದಲ್ಲಿರುವ ಸಮಯ ಮತ್ತು ನಿಲುಗಡೆಗಳೊಂದಿಗೆ ಚಲಿಸುತ್ತವೆ.

ರೈಲು ಸಂಚಾರ ಭಾಗಶಃ ರದ್ದು ಮುಂದುವರಿಕೆ

ಕ್ಯಾಸಲ್ ರಾಕ್-ಲೋಂಡಾ ನಿಲ್ದಾಣಗಳ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಮತ್ತು ಎಂಜಿನಿಯರಿಂಗ್ ಕಾಮಗಾರಿ ಸಲುವಾಗಿ ಲೋಂಡಾ ಮತ್ತು ಕ್ಯಾಸಲ್ ರಾಕ್ ನಿಲ್ದಾಣಗಳ ನಡುವೆ ರೈಲು ಸಂಖ್ಯೆ 17333/17334 ರ ಭಾಗಶಃ ರದ್ದತಿಯನ್ನು ವಿಸ್ತರಿಸಲಾಗುತ್ತಿದೆ.

ಫೆಬ್ರವರಿ 28, 2025 ರವರೆಗೆ, ರೈಲು ಸಂಖ್ಯೆ 17333 ಮೀರಜ್-ಕ್ಯಾಸಲ್ ರಾಕ್ ಡೈಲಿ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಲೋಂಡಾವರೆಗೂ ಮಾತ್ರ ಸಂಚರಿಸಲಿದೆ. ಲೋಂಡಾ ಮತ್ತು ಕ್ಯಾಸಲ್ ರಾಕ್ ನಿಲ್ದಾಣಗಳ ನಡುವಿನ ಪ್ರಯಾಣ ರದ್ದುಗೊಳಿಸಲಾಗಿದೆ.

ಫೆಬ್ರವರಿ 28, 2025 ರವರೆಗೆ, ರೈಲು ಸಂಖ್ಯೆ 17334 ಕ್ಯಾಸಲ್ ರಾಕ್-ಮೀರಜ್ ಡೈಲಿ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಕ್ಯಾಸಲ್ ರಾಕ್ ನಿಲ್ದಾಣದ ಬದಲು ಲೋಂಡಾ ನಿಲ್ದಾಣದಿಂದ ಹೊರಡಲಿದೆ. ಕ್ಯಾಸಲ್ ರಾಕ್ ಮತ್ತು ಲೋಂಡಾ ನಿಲ್ದಾಣಗಳ ನಡುವಿನ ಪ್ರಯಾಣ ರದ್ದುಗೊಂಡಿದೆ. ಈ ಮೊದಲು, ಈ ರೈಲುಗಳನ್ನು ಜನವರಿ 31, 2025 ರವರೆಗೆ ಭಾಗಶಃ ರದ್ದುಗೊಳಿಸಲು ಸೂಚಿಸಲಾಗಿತ್ತು, ಅದನ್ನು ಈಗ ವಿಸ್ತರಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ