Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿವಿಧ ಸಮುದಾಯಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಶೇಷ ಸನ್ಮಾನ

 

ಬೆಳಗಾವಿ ಸುವರ್ಣಸೌಧ : ನೇಕಾರರ
ಬಹುದಿನಗಳ ಬೇಡಿಕೆ ಈಡೇರಿಸಿ ಐತಿಹಾಸಿಕ ನಿರ್ಣಯ ತೆಗೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಳಗಾವಿಯ ಸುವರ್ಣಸೌಧದ ಸಭಾಂಗಣದಲ್ಲಿ ಡಿ.19ರಂದು ವಿಶೇಷ ಅಭಿನಂದನಾ ಸಮಾರಂಭ ನಡೆಯಿತು.
ಬೆಳಗಾವಿ ನಗರ ಸೇರಿದಂತೆ ಸುತ್ತಲಿನ ತಾಲೂಕುಗಳ
ನೇಕಾರ, ಕುರುವಿನಶೆಟ್ಟಿ, ದೇವಾಂಗ, ಹಟಗರ ದೇವಾಂಗ ಸಮಾಜ, ಸಕ್ಕುಸಾಯಿ ಸಮಾಜ, ನಾಮದೇವ ಸಿಂಪಿ, ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಮುಖ್ಯಮಂತ್ರಿಗಳಿಗೆ ಶಾಲುಹೊದಿಸಿ, ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು.

ಮುಜರಾಯಿ ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಮಾನ್ಯ ಅಟಲ್ ಬಿಹಾರಿ ವಾಜಪೇಯಿ ಅವರ ನಂತರ ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಬಿ.ಎಸ್.ಯಡಿಯೂರಪ್ಪ ಅವರ ನಂತರ ಬಸವರಾಜ ಬೊಮ್ಮಾಯಿ ಅವರು ನಾಡಿನ ಸರ್ವಾಂಗಿಣ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷರು ಆಗಿರುವ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಅವರು ಮಾತನಾಡಿ, ನೇಕಾರರು ಜನರ ಮಾನ ಕಾಪಾಡುವ ಮಹತ್ವದ ಕಾರ್ಯ ಮಾಡುತ್ತಾರೆ. ರೈತ ಮತ್ತು ನೇಕಾರ ಇಬ್ಬರು ರಾಜ್ಯದ ಎರಡು ಕಣ್ಣುಗಳಿದ್ದಂತೆ. ಇದನ್ನರಿತು ರಾಜ್ಯ ಸರ್ಕಾರವು
ರಿಯಾಯಿತಿ ದರದಲ್ಲಿ ಸಾಲ ಸೌಲಭ್ಯ, ವಿದ್ಯುತ್ ಸೌಕರ್ಯ, ನೇಕಾರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ, ನೇಕಾರರು ಸೇರಿದಂತೆ 60 ವರ್ಷ ಮೇಲ್ಪಟ್ಟವರಿಗೆ
ಸಂಧ್ಯಾಸುರಕ್ಷಾ ಸೇರಿದಂತೆ ಇನ್ನೂ ನಾನಾ ಯೋಜನೆಗಳನ್ನು ಜಾರಿ ಮಾಡಿದೆ. ನೇಕಾರ ಸಮುದಾಯದವರು ಮುಂದಿಟ್ಟಂತೆ
ಶೇ.95.09ರಷ್ಟು ಬೇಡಿಕೆಗಳನ್ನು ರಾಜ್ಯ ಸರ್ಕಾರ
ಈಡೇರಿಸಿದೆ ಎಂದು ತಿಳಿಸಿದರು.
ರಾಮದುರ್ಗ ಮತಕ್ಷೇತ್ರದ ಶಾಸಕ ಮಹಾದೇವಪ್ಪ ಅವರು ಮಾತನಾಡಿ, ಕೋರೊನಾ ಬಂದ ಕಷ್ಟದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೇಕಾರರ ಬೇಡಿಕೆಗಳಿಗೆ ಸ್ಪಂದನೆ ನೀಡಿದ್ದಾರೆ ಎಂದರು.
ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ,ಕಿತ್ತೂರ ಶಾಸಕ ಮಹಾಂತೇಶ ದೊಡ್ಡಗೌಡ, ಶಾಸಕ ದೊಡ್ಡನಗೌಡ ಪಾಟೀಲ ಅವರು ಮಾತನಾಡಿದರು.

ಜಲ ಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಅರಗ ಜ್ಞಾನೇಂದ್ರ, ಲೋಕೋಪಯೋಗಿ ಇಲಾಖೆಯ ಸಚಿವ ಸಿ.ಸಿ.ಪಾಟೀಲ, ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ, ಜವಳಿ ನಿಗಮದ ಉಪಾಧ್ಯಕ್ಷ ಸುರೇಶ ಕಿತ್ತೂರ, ನೇಕಾರ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರಾದ
ದುಂಡಪ್ಪ ಮಾಚಕನೂರ ಬನಹಟ್ಟಿ, ಶಂಕರ ಟೀರಕಿ, ಪ್ರಭು ಕರಲಟ್ಟಿ, ಗಂಗಪ್ಪ ಮಲಜಗಿ, ಆನಂದ ಕಂಪು, ಮಲ್ಲಪ್ಪ ಸಂಗಾನಟ್ಟಿ, ಜಿ.ಎಸ್.ಗೊಂಬಿ, ಎಂ.ಪಿ.ಬಂಗೋಳಿ, ಚಂದ್ರಕಾಂತ ಹಾಸಿಲಕರ, ಮೋಹನ ಹಾಗೂ ಇತರರು ಇದ್ದರು.

ಬೆಳಗಾವಿ, ನಿಪ್ಪಾಣಿ, ತೇರದಾಳ, ಇಲಕಲ್, ಕಿತ್ತೂರ ಕ್ಷೇತ್ರಗಳ ನೇಕಾರ ಸಮದಾಯದ ಹಿರಿಯರು, ಮಹಿಳೆಯರು, ಯುವಕರು ಮತ್ತು ಇನ್ನಿತರರು ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ