Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು

ಹುಬ್ಬಳ್ಳಿ : ಶಬರಿಮಲೆ ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಲವಯವು ಕರ್ನಾಟಕದಿಂದ ವಿಶೇಷ ಬಸ್​ ಓಡಿಸಲು ನಿರ್ಧರಿಸಿದೆ. ಮೂರು ತಿಂಗಳು ರೈಲು ಓಡಲಿದೆ. ಈ ಕುರಿತು ನೈಋತ್ಯ ರೈಲ್ವೆ ವಲಯವು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ತಿಳಿಸಿದೆ.

ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ.

ರೈಲು ಸಂಖ್ಯೆ 07371 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 19 ರಿಂದ 2025ರ ಜನವರಿ 14ರವರೆಗೆ ಸಂಚರಿಸಲಿದೆ.
ರೈಲು ಸಂಖ್ಯೆ 07372 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 20 ರಿಂದ 2025ರ ಜನವರಿ 15ರವರೆಗೆ ಸಂಚರಿಸಲಿದೆ.
2 ಎಸಿ ಟು ಐಉರ್​, 2 ಎಸಿ ತ್ರಿ ಟೈಯರ್​, 6 ಸ್ಲೀಪರ್​ ಕ್ಲಾಸ್​, 6 ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು 2 ಎಸ್​ಎಲ್​ಆರ್​ಡಿ ಸೇರಿದಂತೆ 18 ಬೋಗಿಗಳನ್ನು ಹೊಂದಿರಲಿದೆ.

ವಾರಕ್ಕೊಮ್ಮೆ ವಿಶೇಷ ರೈಲು
ಹೆಚ್ಚುವರಿಯಾಗಿ ಇನ್ಮುಂದೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಾರಕ್ಕೊಮ್ಮೆ ಒಂದು ವಿಶೇಷ ರೈಲು ಸಂಚರಲಿಸಲಿದೆ. ಈ ರೈಲು ಹುಬ್ಬಳ್ಳಿಯಿಂದ ಪ್ರತಿ ಮಂಗಳವಾರ ಹೊರಟು ಮರುದಿನ ಬುಧವಾರ ಕೊಟ್ಟಾಯಂ ತಲುಪಲಿದೆ.

ರೈಲು ಸಂಖ್ಯೆ 07371 ಹುಬ್ಬಳ್ಳಿ-ಕೊಟ್ಟಾಯಂ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯಾಹ್ನ 3:15ಕ್ಕೆ ಎಸ್​ಎಸ್​ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬುಧವಾರ ಮಧ್ಯರಾತ್ರಿ 12ಕ್ಕೆ ಕೊಟ್ಟಾಯಂ ತಲುಪಲಿದೆ.
ರೈಲು ಸಂಖ್ಯೆ 07372 ಕೊಟ್ಟಾಯಂ-ಹುಬ್ಬಳ್ಳಿ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯರಾತ್ರಿ 12:50ಕ್ಕೆ ಕೊಟ್ಟಾಯಂನಿಂದ ಹೊರಟು ಮರುದಿನ ಬುಧವಾರ ಮಧ್ಯಾಹ್ನ 03:00ಕ್ಕೆ ಹುಬ್ಬಳ್ಳಿ ತಲುಪಲಿದೆ.
ಈ ರೈಲು ಎಸಿ ಟು ಟೈಯರ್​​, ಎಸಿ ತ್ರೀ ಟೈಯರ್​​, ಸ್ಲೀಪರ್​​ ಕ್ಲಾಸ್​, ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು ಎಸ್​ಎಲ್​ಆರ್​ಡಿ ಬೋಗಿಗಳನ್ನು ಹೊಂದಿದೆ.
ಟ್ವಿಟರ್​ ಪೋಸ್ಟ್​
ಪ್ರಯಾಣಿಕರ ವಿಶೇಷ ಗಮನಕ್ಕೆ:
ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆ.#SWRupdates #SpecialTrains #Sabarimala pic.twitter.com/8ubWQ80P0C

— South Western Railway (@SWRRLY) November 13, 2024

ಎಲ್ಲೆಲ್ಲಿ ನಿಲುಗಡೆ?
ಎಸ್​ಎಸ್​ಎಸ್​ ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸಿಕೆರೆ, ತುಮಕೂರು, ಚಿಕ್ಕಬಣಾವರ, ಎಸ್​ಎಂಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್​, ತಿರುಪ್ಪೂರು, ಪೋದನೂರು, ಪಾಲಕ್ಕಾಡ್​, ತ್ರಿಶೂರ್​, ಅಲುವ, ಎರ್ನಾಕುಲಂ ಟೌನ್​, ಎಟ್ಟುಮನೂರ್​ ಮತ್ತು ಕೊಟ್ಟಾಯಂ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ರೈಲುಗಳಗಳ ನಿಲುಗಡೆಗಳು ಮತ್ತು ಸಮಯಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ ಆದ www.enquiry.indianrail.gov.in ಗೆ ಅಥವಾ NTES ಆ್ಯಪ್​ ಮೂಲಕ ಅಥವಾ 139ಕ್ಕೆ ಡಯಲ್​ ಮಾಡುವ ಮೂಲಕ ತಿಳಿದುಕೊಳ್ಳಬಹುದು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ