Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ 8 ರಂದು ಶ್ರೀ ವೀರಭದ್ರೇಶ್ವರ ಜಯಂತಿ ಉತ್ಸವ

 

ಬೆಳಗಾವಿ :
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಅ. ೮ ರಂದು ಬೆಳಗ್ಗೆ ೧೧.೦೦
ಗಂಟೆಗೆ ನಗರದ ಗಾಂಧಿಭವನದಲ್ಲಿ ಶ್ರೀ ವೀರಭದ್ರೇಶ್ವರ ಜಯಂತಿ ಉತ್ಸವ
ಹಮ್ಮಿಕೊಳ್ಳಲಾಗಿದೆ.ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ
ಭಗವತ್ಪಾದರು, ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು, ಉಜ್ಜಯಿನಿ
ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಭಗವತ್ಪಾದರು, ನಿಡಸೋಸಿ ದುರದುಂಡೀಶ್ವರ
ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮತ್ತು
ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು, ಶಿರಹಟ್ಟಿ ಪಕೀರೇಶ್ವರ ದಿಂಗಾಲೇಶ್ವರ
ಜಗದ್ಗುರುಗಳು ಸಾನ್ನಿಧ್ಯ ವಹಿಸುವರು ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ
ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಬೆಳಗಾವಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರಿಂದು ೧೦೦ಕ್ಕೂ ಅಧಿಕ
ಮಠಾಧೀಶರ ನೇತೃತ್ವದಲ್ಲಿ ನಡೆಯುವ ಈ ಜಯಂತಿ ಕಾರ್ಯಕ್ರಮವನ್ನು ಕೆಎಲ್‌ಇ ಸಂಸ್ಥೆಯ
ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಉದ್ಘಾಟಿಸುವರು. ಮಾಜಿ ಸಚಿವ, ವಿಧಾನ ಪರಿಷತ್
ಸದಸ್ಯ ಪ್ರಕಾಶ ಹುಕ್ಕೇರಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಹಿಳಾ
ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಭಾಗವಹಿಸುವರು.
ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ,
ಮಂಗಳಾ ಅಂಗಡಿ, ಈರಣ್ಣ ಕಡಾಡಿ ಹಾಗೂ ಜಿಲ್ಲೆಯ ಶಾಸಕರು ಪಾಲ್ಗೊಳ್ಳುವರು.
ವೀರಭದ್ರೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸುಮಾರು ೫ ಸಾವಿರ ಜನರು ಪಾಲ್ಗೊಳ್ಳುವ
ನಿರೀಕ್ಷೆಯಿದೆ.
ಜಯಂತಿ ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ ೧೦ ಗಂಟೆಗೆ ವೀರರಾಣಿ ಕಿತ್ತೂರು ರಾಣಿ
ಚನ್ನಮ್ಮ ವೃತ್ತದಿಂದ ಶ್ರೀ ವೀರಭದ್ರೇಶ್ವರ ಮೂರ್ತಿಯ ಭವ್ಯ ಮೆರವಣಿಗೆ ಮುಖಾಂತರ
ಗಾಂಧಿಭವನಕ್ಕೆ ತೆರಳಲಿದೆ. ಈ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕುಂಭ
ಹೊತ್ತ ಸುಮಂಗಲೆಯರು, ಪುರೋಹಿತರು, ಅರ್ಚಕರು, ಪುರವಂತರು/ವೀರಗಾಸೆ ಕಲಾವಿದರು
ಒಟ್ಟಿಗೆ ಪಾಲ್ಗೊಳ್ಳುವರು. ವೀರಭದ್ರೇಶ್ವರ ಜಯಂತಿ ಉತ್ಸವವನ್ನು ಯಶಸ್ವಿಯಾಗಿಸುವ
ಹಿನ್ನೆಲೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ.
ಈ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಅಖಂಡ ವೀರಶೈವ ಲಿಂಗಾಯತ ಸಮುದಾಯಕ್ಕೆ ಕೇಂದ್ರದ
ಓಬಿಸಿ ಮೀಸಲಾತಿಗಾಗಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಪಾರಸು ಮಾಡುವಂತೆ
ಮಾಡಲಾಗುವುದು ಎಂದು ಕಿತ್ತೂರು ಕರ್ನಾಟಕ ಪ್ರದೇಶ ಅಧ್ಯಕ್ಷರಾದ ಉಮೇಶ್ ಬಾಳಿ ಅವರು
ತಿಳಿಸಿದರು,ಈ ಸಂಧರ್ಬದಲ್ಲಿ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಕಾರಂಜಿಮಠ ಬೆಳಗಾವಿ,
ಕಾರ್ಯಕ್ರಮದ ಉಸ್ತುವಾರಿ ವಹಿಸಿರುವ ಮಾಜಿ ಶಾಸಕ ವಿ.ಆಯ್.ಪಾಟೀಲ,ಗೋಕಾಕ ಮುಖಂಡ ಶ್ರೀ
ಅಶೋಕ ಪೂಜಾರಿ,ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ,ವೈದ್ಯಕೀಯ ಘಟಕ ಸುಭಾಶ
ಪಾಟೀಲ, ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ