Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

SSLC, PUC ಪರೀಕ್ಷೆ : ಭಾರೀ ಬದಲಾವಣೆಗೆ ತಯಾರಿ

 

ಬೆಂಗಳೂರು :
ರಾಜ್ಯದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್.ಎಸ್.ಎಲ್. ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು 2023-24 ನೇ ಶೈಕ್ಷಣಿಕ ಸಾಲಿನಿಂದ ತರಲು ತೀರ್ಮಾನಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪೂರಕ ಪರೀಕ್ಷೆ ಎಂಬುದರ ಬದಲಾಗಿ ವಾರ್ಷಿಕ ಪರೀಕ್ಷೆ 1,2 ಮತ್ತು 3ನೇ ಹಂತದ ಪರೀಕ್ಷೆ ಎಂದು ಆಯೋಜಿಸಲು ನಿರ್ಧಾರ ಮಾಡಲಾಗಿದೆ.

ಹಾಲಿ ಪರೀಕ್ಷಾ ಪದ್ಧತಿಯಲ್ಲಿ ವಿದ್ಯಾರ್ಥಿಗಳಿಗೆ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪದ್ಧತಿಯ ಪರೀಕ್ಷೆಯು ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಮತ್ತು ಪರೀಕ್ಷಾ ಆತಂಕವನ್ನು ಸೃಷ್ಟಿಸುತ್ತಿದೆ. ಆದರಿಂದ ವಿದ್ಯಾರ್ಥಿಗಳ ಜ್ಞಾನಧಾರಣೆ ಅರ್ಥಪೂರ್ಣ ಕಲಿಕೆ, ಶೈಕ್ಷಣಿಕ ವಗತಿ ಕುಂಠಿತವಾಗುತ್ತಿದೆ. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಯು ಗಳಿಸಿದ ಅಂಕಗಳಿಂದ ತೃಪ್ತರಾಗದಿದ್ದರೆ, ವಾರ್ಷಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ತಿರಸ್ಕರಿಸಲು ಅವಕಾಶವಿದೆ.

 

ಈಗಿನ ಪರೀಕ್ಷೆ ವಿದ್ಯಾರ್ಥಿ ಸ್ನೇಹಿಯಾಗಿಲ್ಲ: ಹಿಂದಿನ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸದೇ, ಪೂರಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಮಾತ್ರ ವಿದ್ಯಾರ್ಥಿಯ ಅಂಕಗಳೆಂದು ಪರಿಗಣಿಸಲಾಗುತ್ತಿದೆ. ಈ ವ್ಯವಸ್ಥೆಯು ವಿದ್ಯಾರ್ಥಿ ಸ್ನೇಹಿಯಾಗಿರುವುದಿಲ್ಲ, ಏಕೆಂದರೆ ಎರಡು ಪರೀಕ್ಷೆಗಳಲ್ಲಿ ತನ್ನ ಅತ್ಯುತ್ತಮ ಅಂಕವನ್ನು ಉಳಿಸಿಕೊಳ್ಳಲು ವಿದ್ಯಾರ್ಥಿಗೆ ಯಾವುದೇ ಆಯ್ಕೆಯಿರುವುದಿಲ್ಲ. ನಾವು ಸುಧಾರಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡರೆ, 1, 2, ಮತ್ತು 3 ಪರೀಕ್ಷೆಗಳಲ್ಲಿ ಗಳಿಸಿದ ವಿಷಯವಾರು ಅಂಕವನ್ನು ಉಳಿಸಿಕೊಳ್ಳಲು ಅವಕಾಶವನ್ನು ಒದಗಿಸಿದಂತಾಗುತ್ತದೆ. ಮುಂದಿನ ವ್ಯಾಸಂಗಕ್ಕೆ ಅಥವಾ ಉದ್ಯೋಗಕ್ಕೆ ಆಯ್ಕೆ ಪ್ರಕ್ರಿಯೆಗಳಲ್ಲಿ ಉತ್ತಮ ಅವಕಾಶಗಳನ್ನು ಒದಗಿಸಿದಂತಾಗುತ್ತದೆ.

ಕಲಿಕೆ ವೇಗಕ್ಕೆ ಹೊಂದಿಕೊಳ್ಳಲು ಅನುಕೂಲ: ವಿದ್ಯಾರ್ಥಿಗಳ ಕಲಿಕೆಯ ವೇಗ ಮತ್ತು ಶೈಲಿಯು ವಿಭಿನ್ನವಾಗಿದ್ದು, 1, 2, ಮತ್ತು 3 ಪರೀಕ್ಷೆಗಳನ್ನು ನಡೆಸುವುದರಿಂದ ಅವರ ಕಲಿಕೆಯ ವೇಗಕ್ಕೆ ಹೊಂದಿಕೊಳ್ಳಲು ಮತ್ತು ಸಮಯದ ನಿರ್ಬಂಧಗಳಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು. ಜೊತೆಗೆ, ಪೂರಕ ಪರೀಕ್ಷೆ ಎಂಬ ಹೆಸರಿನ ಬದಲಿಗೆ 'ವಾರ್ಷಿಕ ಪರೀಕ್ಷೆ 1, 2 ಮತ್ತು 3' ಎಂದು ಹೆಸರಿಸುವುದರೊಂದಿಗೆ ಮೂರು ಅವಕಾಶಗಳನ್ನು ಒದಗಿಸುವ ಮೂಲಕ ವಿದ್ಯಾರ್ಥಿಯ ಒಟ್ಟಾರೆ ಕಾರ್ಯಕ್ಷಮತೆಯನ್ನು ಮತ್ತು ಸಕಾರಾತ್ಮಕ ಮನೋಭಾವವನ್ನು ಉತ್ತೇಜಿಸಿದಂತಾಗುತ್ತದೆ.

 

ಈ ಕೆಳಕಂಡ ಅಂಶಗಳನ್ನು ಪರಿಗಣಿಸಿ ಮಂಡಲಿಯಿಂದ ವಾರ್ಷಿಕ 3 ಪರೀಕ್ಷೆಗಳನ್ನು ನಡೆಸಲಾಗುವುದು.
1. ಈ ಸುಧಾರಣಾ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪಷ್ಟ ಮಾರ್ಗಸೂಚಿಯನ್ನು ಸುತ್ತೋಲೆಯ ಮೂಲಕ ಮಂಡಲಿಯಿಂದ ನೀಡಲಾಗುವುದು.
2 ಈ ಮೂರು ಪರೀಕ್ಷೆಗಳಲ್ಲಿ, ವಿಷಯ ಮತ್ತು ಕಠಿಣತೆಯ ಮಟ್ಟದಲ್ಲಿ ಏಕರೂಪತೆಯನ್ನು ಕಾಯ್ದುಕೊಳ್ಳಲಾಗುವುದು.
3. ಈ ಮೂರು ಪ್ರಯತ್ನಗಳಲ್ಲಿ ಗಳಿಸಿದ ಅಂಕಗಳಲ್ಲಿ, ವಿಷಯವಾರು ಅತ್ಯುತ್ತಮವಾದುದನ್ನು ಆಯ್ಕೆಮಾಡಿಕೊಳ್ಳಲು ಅವಕಾಶ ನೀಡಲಾಗುವುದು.
4. ಮುಂದಿನ ಶೈಕ್ಷಣಿಕ ವರ್ಷದಲ್ಲಿ ತಡವಾಗಿ ದಾಖಲಾಗುವ ಪ್ರಥಮ ಪಿ.ಯು.ಸಿ. ಅಥವಾ ಪದವಿ ವಿದ್ಯಾರ್ಥಿಗಳಿಗೆ ಸೇತುಬಂಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ