ಮೂಡಲಗಿ (ಬೆಳಗಾವಿ): ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶದಲ್ಲಿ 624 ಅಂಕ ಪಡೆದಿದ್ದ ಇಲ್ಲಿನ ಚೈತನ್ಯ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ವಿವೇಕ ಸುಳ್ಳನ್ನವರ ಈಗ ಮರುಮೌಲ್ಯಮಾಪನದಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.
ಮರುಮೌಲ್ಯಮಾಪನದಲ್ಲಿ ಒಂದು ಅಂಕ ಪಡೆಯುವ ಮೂಲಕ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ.
ಇದೇ ಶಾಲೆಯ ಸೌಮ್ಯ ಸಿದ್ದಪ್ಪ ಪೂಜಾರಿ ಎಂಬ ವಿದ್ಯಾರ್ಥಿನಿ 619 ಅಂಕ ಪಡೆದುಕೊಂಡಿದ್ದು, ಮರು ಮೌಲ್ಯಮಾಪನದಲ್ಲಿ 625 ಕ್ಕೆ 622 ಅಂಕಗಳಿಂದ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾಳೆ.
