Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜಕೀಯ ಪ್ರಚೋದನೆಗೆ ವಿದ್ಯಾರ್ಥಿಗಳು ಬಲಿಯಾಗಬೇಡಿ: ಬಿಜೆಪಿ ಮುಖಂಡ ಕಿರಣ ಜಾಧವ

ಬೆಳಗಾವಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸುವ ನೆಪದಲ್ಲಿ ಕೆಲವರು ದೇಶದ ಪ್ರಧಾನಮಂತ್ರಿಯವರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡ ಕಿರಣ ಜಾಧವ್ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕು ಇದೆ. ಆದರೆ, ವೈಯಕ್ತಿಕ ನಿಂದನೆ, ಅವಹೇಳನಕಾರಿ ಹೇಳಿಕೆಗಳು ಹಾಗೂ ದೇಶದ ಉನ್ನತ ಸಾಂವಿಧಾನಿಕ ಹುದ್ದೆಗಳ ಬಗ್ಗೆ ಅಗೌರವ ತೋರುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ ಎಂದು ತಿಳಿಸಿದ್ದಾರೆ.

ನೀಟ್ ಪರೀಕ್ಷೆಯ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಶೀಘ್ರದಲ್ಲೇ ಕೌನ್ಸಿಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯ, ಉನ್ನತ ಶಿಕ್ಷಣ ಹಾಗೂ ವೃತ್ತಿಜೀವನದತ್ತ ಹೆಚ್ಚಿನ ಗಮನಹರಿಸಬೇಕು. ಪಾಲಕರು ಕೂಡ ಮಕ್ಕಳನ್ನು ರಾಜಕೀಯ ಪ್ರಚೋದನೆಗಳಿಂದ ದೂರವಿರಿಸಿ, ಅವರ ಶಿಕ್ಷಣ ಮತ್ತು ಭವಿಷ್ಯಕ್ಕೆ ಆದ್ಯತೆ ನೀಡುವಂತೆ ಮಾರ್ಗದರ್ಶನ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಪ್ರಯತ್ನಗಳು ಆತಂಕಕಾರಿ ಬೆಳವಣಿಗೆಯಾಗಿವೆ. ಯಾವುದೇ ನ್ಯಾಯಯುತ ಬೇಡಿಕೆಗಳಿದ್ದರೂ ಅವುಗಳನ್ನು ಕಾನೂನುಬದ್ಧ ಹಾಗೂ ಶಾಂತಿಯುತ ರೀತಿಯಲ್ಲಿ ಮಂಡಿಸಬೇಕು. ದೇಶವಿರೋಧಿ ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗಿಯಾಗಬಾರದು ಎಂದು ಅವರು ಕರೆ ನೀಡಿದ್ದಾರೆ.

ಉತ್ತಮ ಶಿಕ್ಷಣ ಪಡೆದು ಜವಾಬ್ದಾರಿಯುತ ನಾಗರಿಕರಾಗಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವುದು ಯುವಜನರ ಪ್ರಮುಖ ಕರ್ತವ್ಯವಾಗಿದೆ. ವಿದ್ಯಾರ್ಥಿಗಳನ್ನು ತಪ್ಪು ದಾರಿಗೆಳೆಯುವ ಹಾಗೂ ರಾಜಕೀಯ ಉದ್ದೇಶಕ್ಕಾಗಿ ಅವರ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಯಾವುದೇ ಪ್ರಯತ್ನ ಖಂಡನೀಯ ಎಂದು ಕಿರಣ ಜಾಧವ್ ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜಕೀಯ ಪ್ರಚೋದನೆಗೆ ವಿದ್ಯಾರ್ಥಿಗಳು ಬಲಿಯಾಗಬೇಡಿ: ಬಿಜೆಪಿ ಮುಖಂಡ ಕಿರಣ ಜಾಧವನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆಇನ್ಫೋಸಿಸ್‌ಗೆ ನೂತನ ಸಾರಥಿ: ಸಲೀಲ್ ಪಾರೇಖ್ ಸ್ಥಾನಕ್ಕೆ ಆಶಿಶ್ ಕುಮಾರ ದಾಸ್ ಸಿಇಒ ಆಗಿ ನೇಮಕಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು