Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದಿಢೀರ್ ಬೆಳವಣಿಗೆ : ರಾಜಧಾನಿಯತ್ತ ನಕ್ಸಲರು

ಬೆಂಗಳೂರು: ಶರಣಾಗತಿ ಬಯಸಿರುವ ಆರು ನಕ್ಸಲರು ಇದೀಗ ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ಶರಣಾಗತಿಯಾಗಲು ಮುಂದಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತದ ಎದುರು ಶರಣಾಗತಿ ಕಾರ್ಯಕ್ರಮ ಇತ್ತು. ಆದರೆ ಈ ಕಾರ್ಯಕ್ರಮವನ್ನು ದಿಢೀರ್ ಬದಲಾವಣೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ ಎದುರು ಶರಣಾಗಲಿದ್ದಾರೆ. ಬಾಳೆಹೊನ್ನೂರಿನಿಂದ ನಕ್ಸಲಿಯರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ನನ್ನ ಸಮ್ಮುಖದಲ್ಲಿ ನಕ್ಸಲರು ಮುಖ್ಯ ವಾಹಿನಿಗೆ ಬರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಯಸಿದ್ದಾರೆ. ಆದ್ದರಿಂದ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಶಾಂತಿಗಾಗಿ ನಾಗರಿಕರ ವೇದಿಕೆಯ ಕೆ.ಎಲ್.ಅಶೋಕ್ ಹೇಳಿದ್ದಾರೆ.

ಈ ಮೊದಲು ನಕ್ಸಲರು ಮುಖ್ಯ ವಾಹಿನಿಗೆ ಸೇರುವ ಕಾರ್ಯಕ್ರಮ ಚಿಕ್ಕಮಗಳೂರಿನಲ್ಲಿ ಏರ್ಪಟ್ಟಿತ್ತು. ಆದರೆ ದಿಡೀರ್ ಬೆಂಗಳೂರಿಗೆ ವರ್ಗಾವಣೆಗೊಂಡಿದೆ. ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆ, ದಲಿತ ಸಂಘಟನೆಗಳ ಮುಖಂಡರು ನಕ್ಸಲರ ಕುಟುಂಬದವರು ಕಾದಿದ್ದರು. ಶೃಂಗೇರಿಯಿಂದ ಚಿಕ್ಕಮಗಳೂರು ಕಡೆಗೆ ಶರಣಾಗತಿ ಮತ್ತು ಪುನರ್ವಸತಿ ಸಮಿತಿ ಸದಸ್ಯರು ಆರು ನಕ್ಸಲರೊಂದಿಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ಸೂಚನೆ ಮೇರೆಗೆ ಪೊಲೀಸರು ಎಲ್ಲರನ್ನೂ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ