Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಬ್ಬು : ರೈತರ ಕಾಮಧೇನು- ಪುಸ್ತಕ ಲೋಕಾರ್ಪಣೆ

 

ಬೆಳಗಾವಿ :
ನಗರದ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಸಭಾಂಗಣದಲ್ಲಿ ದಿ.ವಿ.ಎಸ್.ಹಂಜಿಯವರ ಕಬ್ಬು ರೈತರ ಕಾಮಧೇನು ಪುಸ್ತಕ ಲೋಕಾರ್ಪಣೆ ಮಾಡಲಾಯಿತು.

ಡಾ.ಎ.ಪಿ ಬಿರಾದಾರ ಪಾಟೀಲ ಕೃತಿಯ ಕುರಿತು ಮಾತನಾಡಿ, ಕಬ್ಬು ಬೆಳೆಯುವ ಪ್ರತಿ ಹಂತಗಳು ಹಾಗೂ ಅದರ ಸಂಸ್ಕರಣೆ ಕುರಿತಂತೆ ಈ ಕೃತಿ ಸವಿವರ ಮಾಹಿತಿಯನ್ನು ಒಳಗೊಂಡಿದೆ ,ಇದರ ಸದುಪಯೋಗ ಕಬ್ಬು ಕೃಷಿಯಲ್ಲಿ ತೊಡಗಿಕೊಂಡ ಪ್ರತಿಯೊಬ್ಬರು ಈ ಕೃತಿಯನ್ನು ಸಂಪನ್ಮೂಲವಾಗಿ ಬಳಬಹುದಾದ ಸಂಗ್ರಹ ಯೋಗ್ಯ ಕೃತಿಯಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಡಾ.ಬಸವರಾಜ ಜಗಜಂಪಿ ಮಾತನಾಡಿ, ಪುಸ್ತಕ ಶಾಶ್ವತವಾಗಿ ಉಳಿಯುದರಿಂದ ಅವರ ಕೃಷಿ ಅನುಭವ ಕೃತಿ ರೂಪದಲ್ಲಿ ಆಸಕ್ತ ಕೃಷಿಕರಿಗೆ ದಾರಿದೀಪವಾಗಲಿದೆ ಎಂದರು.

ಡಾ.ಆರ್.ಬಿ.ಖಂಡಗಾವೆ ಮಾತನಾಡಿ, ಹಂಜಿಯವರ ಒಡನಾಟ ಹಾಗೂ ಕಬ್ಬಿನ ಬೆಳೆಯ ಕುರಿತು ಈ ಪುಸ್ತಕದಲ್ಲಿ ಸವಿವರ ನೀಡುವಲ್ಲಿ ಶ್ರಮವಹಿಸಿ ದಾಖಲಿಸಿದ್ದಾರೆ ಎಂದು ಹೇಳಿದರು.

ಡಾ.ಅಶೋಕ ಪಾಟೀಲ ಕೃತಿ ಬಿಡುಗಡೆಗೊಳಿಸಿ ಮಾತನಾಡಿ , ಕಬ್ಬು ಕೃಷಿಯಲ್ಲಿ ಅಧಿಕ ಇಳುವರಿ ಪಡೆಯಲು ಬೇಕಾಗುವ ಮಾರ್ಗಗಳನ್ನು ಲೇಖಕ ವೀರಭದ್ರಪ್ಪ ಹಂಜಿ ಅವರು ಸ್ವತಃ ಅನೇಕ ಪ್ರಯೋಗಗಳನ್ನು ಮಾಡಿ ಅದನ್ನು ಪುಸ್ತಕದಲ್ಲಿ ದಾಖಲಿಸಿದ್ದು ಸಾರ್ಥಕವಾಗಿದೆ ಎಂದು ಸ್ಮರಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ಸಂಜಯ ಹಂಜಿ, ತಂದೆಯವರ ಆಶೆಯದಂತೆ ಈ ಪುಸ್ತಕದ ಇಂದು ಪ್ರಕಟಗೊಂಡು ಲೋಕಾರ್ಪಣೆ ಆಗುತ್ತಿರುವ ಹಿನ್ನಲೆಯಲ್ಲಿ ಸಹಕರಿಸಿದ ಎಲ್ಲರನ್ನು ಸ್ಮರಿಸಿದರು.

ಲೇಖಕರ ಪರ ಅವರ ನಂದಾ ಹಂಜಿ ಮಾತನಾಡಿ, ಪತಿಯ ಸಾಹಿತ್ಯ ಪ್ರೇಮ ಹಾಗೂ ಸೇವಾಕ್ಷೇತ್ರದ ಅನುಭವಗಳನ್ನು ಹಂಚಿಕೊಂಡರು.

ಹಂಜಿ ಅವರ ಒಡನಾಡಿ, ಆರ್. ಬಿ.ಕಲ್ಯಾಣಿ ಹಾಗೂ ರೈತ ಧುರೀಣ ಪಿ.ಎಸ್.ಬೋಗುರ ಮಾತನಾಡಿ ಅವರ ಜೊತೆ ಕೆಲಸ ಮಾಡಿದ ತೃಪ್ತಿ ಇದೆ ಎಂದು ಹೇಳಿದರು.

ಕೃತಿಗೆ ಅಕ್ಷರ ಜೋಡಣೆ ಕಾರ್ಯವನ್ನು ಮಾಡಿದ ಆರ್. ಆರ್. ಪಾಟೀಲವರನ್ನು ಕಲ್ಯಾಣಿ ಸನ್ಮಾನಿಸಿಲಾಯಿತು. ಸಿದ್ದಾರ್ಥ ಹಂಜಿ ಪ್ರಾರ್ಥಿಸಿದರು. ಆಶಾ ಯಮಕನಮರಡಿ ನಿರೂಪಿಸಿದರು. ವಿನೋದ ಪಾಟೀಲ ವಂದಿಸಿದರು
ಹಂಜಿ ಪರಿವಾರದವರು, ಬಂಧು- ಮಿತ್ರರು ಹಾಗೂ qಅವರ ಅಭಿಮಾನಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ