Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

6 ತಿಂಗಳಿನಿಂದ ಪಡಿತರವನ್ನು ಪಡೆಯದೇ ಇರುವ ಪಡಿತರ ಚೀಟಿಗಳ ಅಮಾನತ್ತು

ಬೆಳಗಾವಿ: ಜಿಲ್ಲೆಯಲ್ಲಿ ಅಂತ್ಯೋಂದಯ ಮತ್ತು ಆದ್ಯತಾ ಪಡಿತರ ಚೀಟಿಗಳು ಸೇರಿ ಒಟ್ಟು ೧೧,೧೧೭ ಹಾಗೂ ಆದ್ಯತೇತರ ಪಡಿತರ ಚೀಟಿಗಳು ೧,೪೨೧ ಹೀಗೆ ಒಟ್ಟು ೧೨,೫೩೮ ಮೃತ ಫಲಾನುಭವಿಗಳಿದ್ದು, ಅವುಗಳ ವಿವರವನ್ನು ಕುಟುಂಬ ದತ್ತಾಂಶದಿಂದ ಪಡೆದು ಸದರಿ ಫಲಾನುಭವಿಗಳನ್ನು ವಾಸ್ತವಿಕತೆಯನ್ನು ಪರಿಶೀಲಿಸಿ ಇಲಾಖೆಯ ದತ್ತಾಂಶದಿಂದ ತೆಗೆದು ಹಾಕಿ ಪ್ರಗತಿ ಸಾಧಿಸಲಾಗಿದೆ.
ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಅಂತ್ಯೋಂದಯ ೫೫೭, ಆದ್ಯತಾ ಪಡಿತರ ಚೀಟಿಗಳು ೧೯೪೧೨ ಒಟ್ಟು ೧೯,೯೬೯ ಪಡಿತರ ಚೀಟಿದಾರರು ಕಳೆದ ೬ ತಿಂಗಳು (ನವೆಂಬರ್-೨೦೨೩) ರಿಂದ (ಏಪ್ರೀಲ್-೨೦೨೪) ವರೆಗೆ ಪಡಿತರವನ್ನು ಇಲಾಖೆಯ ನ್ಯಾಯ ಬೆಲೆ ಅಂಗಡಿಗಳಿಂದ ಪಡೆಯದೇ ಇದ್ದುದರಿಂದ ದಿನಾಂಕ. ೨೯-೦೭-೨೦೨೪ ರಂದು ಸರ್ಕಾರದ ಅಪರ ಕಾರ್ಯದರ್ಶಿ, ಹಣಕಾಸು ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ನಿರ್ಣಯಿಸಿದಂತೆ ಇಲಾಖೆಯ ದತ್ತಾಂಶದಿಂದ ಸದರಿ ಪಡಿತರ ಚೀಟಿಗಳ್ನು ಅಮಾನತ್ತುಗೊಳಿಸಲಾಗಿರುತ್ತದೆ.
ವಿವಿಧ ಇಲಾಖೆಯಲ್ಲಿ ಸರ್ಕಾರಿ ನೌಕರರು ಹಾಗೂ ಅನರ್ಹರು ಹೊಂದಿರುವ ಒಟ್ಟು ೪೫,೮೦೪ ಆದ್ಯತಾ ಪಡಿತರ ಚೀಟಿಗಳು ಆದ್ಯತೇತರ ಪಡಿತರ ಚೀಟಿಗಳಾಗಿ ಪರಿವರ್ತಿಸುವುದರೊಂದಿಗೆ ಸದರಿ ನೌಕರರಿಂದ, ಅನರ್ಹ ಪಡಿತರ ಚೀಟಿದಾರರಿಂದ ಸರ್ಕಾರದ ಲೆಕ್ಕಶೀರ್ಷಿಕೆಗೆ ಒಟ್ಟು ರೂ. ೧,೮೮,೭೫,೯೪೬ ಹಣವನ್ನು ದಂಡ ಭರಣಾ ಮಾಡಸಲಾಗಿದೆ. ಮುಂದುವರೆದು ಪ್ರಸ್ತುತ ಸರ್ಕಾರಿ ನೌಕರರು ಹಾಗೂ ಅನರ್ಹರು ಆದ್ಯತಾ ಪಡಿತರ ಚೀಟಿ ಹೊಂದಿದ್ದಲ್ಲಿ ದಾಖಲಾತಿಗಳೊಂದಿಗೆ ಆಯಾ ತಹಶೀಲ್ದಾರ ಕಚೇರಿಗೆ ಒಪ್ಪಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ