Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಾತ್ರೆ ನಂತರ ಪಾತ್ರೆ ತೊಳೆದ ಗವಿಮಠದ ಸ್ವಾಮೀಜಿ

Advertisement
ಕೊಪ್ಪಳ :

ಕೊಪ್ಪಳದ ಗವಿಸಿದ್ದೇಶ್ವರ ಮಹಾದಾಸೋಹಕ್ಕೆ ತೆರೆ ಬಿದ್ದ ಬಳಿಕ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ.

ಈ ಕಾರ್ಯಕ್ಕೆ ನೂರಾರು ಭಕ್ತರು ಕೈಜೋಡಿಸಿದ್ದಾರೆ. ಈ ವೇಳೆ ಸ್ವತಃ ಗವಿಸಿದ್ದೇಶ್ವರ ಶ್ರೀಗಳೇ ಮುಸುರೆ ತಿಕ್ಕಿ ಪಾತ್ರೆ ತೊಳೆದಿದ್ದು, ಈ ಫೋಟೋ ಭಾರೀ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಶ್ರೀಗಳ ಸರಳತೆಯನ್ನು ಕೊಂಡಾಡಿದ್ದಾರೆ. ಯಾವಾಗಲೂ ಏನಾದರೊಂದು ಕಾಯಕದಲ್ಲಿ ತೊಡಗುವ ಶ್ರೀಗಳು, ಪ್ರತಿ ಬಾರಿ ಜಾತ್ರೋತ್ಸವದಲ್ಲೂ ಸಾಮಾನ್ಯರಂತೆ ಎಲ್ಲ ಸೇವೆಗಳಲ್ಲಿ ಭಾಗಿಯಾಗುತ್ತಾರೆ.

ದಕ್ಷಿಣ ಭಾರತದ ಕುಂಭಮೇಳವೆಂದೇ ಖ್ಯಾತವಾಗಿರುವ ಜಾತ್ರಾ ಮಹೋತ್ಸವವು ದಾಸೋಹ, ಜಾಗೃತಿ ಮತ್ತು ಸರ್ವಧರ್ಮ ಸಮನ್ವಯದ ಸಮಾಗಮನ. ಧಾರ್ಮಿಕ ಆಚರಣೆಗಳೊಂದಿಗೆ ಪ್ರತಿ ಜಾತ್ರೆಯಲ್ಲಿಯು ಭಕ್ತರಲ್ಲಿ, ಅಭಿಮಾನಿಗಳಲ್ಲಿ ಹಾಗೂ ಜನರಲ್ಲಿ ವಿಶಿಷ್ಟ ರೀತಿಯ ಜಾಗೃತಿ ಮೂಡಿಸುತ್ತ ಜಾತ್ರೆಗೊಂದು ಹೊಸರೂಪ-ಹೊಸಮೆರುಗು ನೀಡುವ ಮೂಲಕ ಶ್ರೀ ಮಠವು ದೇಶ, ವಿದೇಶಗಳ ಗಮನ ಸೆಳೆದಿದೆ.

ಶ್ರೀ ಗವಿಸಿದ್ದೇಶ್ವರ ಮಠ ಅಥವಾ ಗವಿಮಠವು ಕೊಪ್ಪಳದ ಪೂರ್ವ ಬೆಟ್ಟದ ಮೇಲಿರುವ ಸುಮಾರು ಒಂದು ಸಾವಿರ ವರ್ಷಗಳ ಭವ್ಯ ಇತಿಹಾಸ ಹೊಂದಿ ಇಂದಿಗೂ ಜನಮಾನಸದಲ್ಲಿ ಭಕ್ತಿ, ಭಾವ, ಅಭಿಮಾನಗಳನ್ನು ಉಳಿಸಿಕೊಂಡು ಬೆಳೆಸಿಕೊಂಡು ಮುನ್ನೆಡೆಯುತ್ತಿರುವ ಮಹಾಸಂಸ್ಥಾನ. ತ್ರಿವಿಧ ದಾಸೋಹದ (ಅನ್ನ, ಅರಿವು, ಆಧ್ಯಾತ್ಮ) ಗಂಗೋತ್ರಿ. ಕರ್ನಾಟಕದ ಅಗ್ರಮಾನ್ಯ ಮಠ ಪರಂಪರೆಯ ಸಂಸ್ಥಾನಗಳಲ್ಲಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠವು ಒಂದು.

ಜಾತ್ರೆಯ ವಿಶೇಷ ದಾಸೋಹಕ್ಕಾಗಿ ಸುತ್ತಮತ್ತಲಿನ ಗ್ರಾಮಸ್ಥರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ದವಸ-ಧಾನ್ಯ, ಹಣ, ರೊಟ್ಟಿ, ಮೊದಲಾದ ರೂಪದಲ್ಲಿ ದಾನ ಹರಿದುಬರುತ್ತದೆ.

ಪ್ರತಿವರ್ಷವು ಜಾತ್ರೆಯಲ್ಲಿ ಸಮಾಜಿಕ ಅರಿವು ಮೂಡಿಸಿ ಜನರನ್ನು ಜಾಗೃತಗೊಳಿಸುವ ವಿಶಿಷ್ಟ ಕಾರ್ಯಕ್ರಮ ನಡೆಯುತ್ತದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ