Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭೋವಿ ಮಠದಲ್ಲಿ ಮುಖ್ಯಮಂತ್ರಿಗಳಿಗೆ ಊಟ ಬಡಿಸಿದ ಸ್ವಾಮೀಜಿ

 

ಬಾಗಲಕೋಟೆ :
ಭೋವಿ ಅಧ್ಯಯನ ಪೀಠ ಮಾಡುವುದಕ್ಕೆ ಮತ್ತು ಸಮುದಾಯದ ಒಬ್ಬರನ್ನು KPSC ಸದಸ್ಯರನ್ನಾಗಿಸುವುದಕ್ಕೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಬಾಗಲಕೋಟೆಯಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಭೋವಿ ಜನಾಂಗದ ಕಸುಬಾದ ಕಲ್ಲು ಹೊಡೆಯುವ ಮೂಲಕ ಭೋವಿ ಸಮುದಾಯದ ಕುಲಗುರು ಶರಣಬಸವ ಅಪ್ಪಂಗಳ್ ಅವರ ಕುಟೀರವನ್ನು ಉದ್ಘಾಟಿಸಿ, ಶಿಲಾಮಂಟಪದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಭೋವಿ ಅಭಿವೃದ್ಧಿ ನಿಗಮ ಮಾಡುವ ಭರವಸೆ ನಾನು ನೀಡಿದ್ದೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಅಭಿವೃದ್ಧಿ ನಿಗಮ ಮಾಡಿದೆ. ಈಗಲೂ ನಿಮ್ಮ ಬೇಡಿಕೆ ಈಡೇರಿಸಲು ನಾನು ಸಿದ್ದ ಎಂದು ಭರವಸೆ ನೀಡಿದರು.

ಭೋವಿ ಸಮಾಜದ ಹಿತ ಕಾಯುವ ಪಕ್ಷ ನಮ್ಮದು. ನಾನು ಸಮುದಾಯಕ್ಜೆ ಆರ್ಥಿಕ ಶಕ್ತಿ ನೀಡುತ್ತೇನೆ. ನಿಮ್ಮ ಆಶೀರ್ವಾದ ನಮಗಿರಲಿ. ನಾನು ಸಿದ್ದರಾಮೇಶ್ವರರ ವಚನಗಳಲ್ಲಿ, ಆಶಯಗಳಲ್ಲಿ ನಂಬಿಕೆ ಇಟ್ಟುಕೊಂಡಿದ್ದೇನೆ ಎಂದರು.

ಬಸವಣ್ಣನವರಿಗಿಂತ ಮೊದಲು ಧರ್ಮ ಬೋಧನೆ ಜನರ ಭಾಷೆಯಲ್ಲಿ ಆಗುತ್ತಿರಲಿಲ್ಲ. ಶರಣರು ಬಂದ ಬಳಿಕ ಜನರ ಭಾಷೆಯಲ್ಲಿ ಧಾರ್ಮಿಕ ಬೋಧನೆ ಶುರುವಾಯಿತು. ಜನರಿಗಾಗಿ ಧರ್ಮ ಇರುವುದು. ಧರ್ಮಕ್ಕಾಗಿ ನಾವು ಇರುವುದಲ್ಲ ಎಂದು ಸ್ಪಷ್ಟಪಡಿಸಿ ಮೌಡ್ಯ ಕಂದಾಚಾರಗಳ, ಜಾತಿಯನ್ನು ಬಿಡಬೇಕು ಎನ್ನುವುದು ಶರಣರ , ವಚನಕಾರರ ಆಶಯವಾಗಿತ್ತು. ಇದನ್ನು ಆಚರಿಸುವವರೇ ನಿಜ ಶರಣರು ಎಂದರು.

ಲಿಂಗೈಕ್ಯ ಶ್ರೀ ಶರಣಬಸವ ಸ್ವಾಮಿಗಳ ಸಂಸ್ಮರಣೋತ್ಸವದ ಅಂಗವಾಗಿ ಬಾಗಲಕೋಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭೋವಿ ಜನಸಮುದ ಸಮಾವೇಶದಲ್ಲಿ ಸಾಂಕೇತಿಕವಾಗಿ ಸುತ್ತಿಗೆ ಹಿಡಿದು ಕಲ್ಲು ಒಡೆಯುವ ಮೂಲಕ ಉದ್ಘಾಟಿಸಿದರು.

ಭೋವಿ ಗುರುಪೀಠದ ಶ್ರೀ ನಿರಂಜನ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೋವಿ ಸೇರಿದಂತೆ ಮುಂತಾದ ಸಮುದಾಯಗಳಿಗೆ ನೀಡಿರುವ ಅಪಾರ ಕೊಡಿಗೆಗಳನ್ನು ಪಟ್ಟಿ ಮಾಡಿ ಇಡಿ ಸಮುದಾಯದ ಪರವಾಗಿ ಧನ್ಯವಾದ ಅರ್ಪಿಸಿದರು.

ಶಾಸಕ ಮಾನಪ್ಪ ವಜ್ಜಲ್ ಸೇರಿದಂತೆ ಹಲವಾರು ಶಾಸಕರು, ಮಾಜಿ ಶಾಸಕರು ಮತ್ತು ಭೋವಿ , ಕೊರಮ, ಕೊರಚ ಸಮುದಾಯಗಳ ಮುಖಂಡರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಗುರು ಕುಟೀರಕ್ಕೆ ಭೇಟಿ ನೀಡಿದಾಗ ಶ್ರೀಗಳೇ ತಮ್ಮ ಕೈಯಾರೆ ಮುಖ್ಯಮಂತ್ರಿಗಳಿಗೆ ಊಟ ಬಡಿಸಿದರು. ಅಲ್ಲೇ ಪ್ರಸಾದ ಸೇವಿಸುವ ಮೂಲಕ ವೇದಿಕೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದ್ದಾಗಿ ಶ್ರೀಗಳು ಬೃಹತ್ ಸಭೆಗೆ ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ