Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ರಾಮಕೃಷ್ಣ ಮಿಶನ್ ಆಶ್ರಮದ 19 ನೇ ವಾರ್ಷಿಕೋತ್ಸವ ಶುಕ್ರವಾರ ಆರಂಭ

 

ಬೆಳಗಾವಿ :
ಬೆಳಗಾವಿ ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದ ವಿಶ್ವ ಭಾವೈಕ್ಯ ಮಂದಿರದ 19 ನೇ ವಾರ್ಷಿಕೋತ್ಸವ ಫೆ. 3 ರಿಂದ 5 ರವರೆಗೆ ನಡೆಯಲಿದೆ ಎಂದು ಆಶ್ರಮದ ಕಾರ್ಯದರ್ಶಿ ಸ್ವಾಮಿ ಆತ್ಮ ಪ್ರಾಣಾನಂದ ತಿಳಿಸಿದ್ದಾರೆ.

ಸ್ವಾಮಿ ವಿವೇಕಾನಂದರು ಪರಿವ್ರಾಜಕ ಸಂನ್ಯಾಸಿಯಾಗಿ ದೇಶವನ್ನು ಪರ್ಯಟನೆ ಮಾಡುತ್ತ 1892 ರ ಅಕ್ಟೋಬರ್ ತಿಂಗಳಲ್ಲಿ ಬೆಳಗಾವಿಗೆ ಆಗಮಿಸಿದ್ದರು. ಮೊದಲ ಮೂರು ದಿನಗಳ ಕಾಲ ಬೆಳಗಾವಿ ಸದಾಶಿವ ಭಾಟೆ ಎಂಬ ಖ್ಯಾತ ವಕೀಲರ ಮನೆಯಲ್ಲಿ ತಂಗಿದ್ದರು. ನಂತರ ಒಂಬತ್ತು ದಿನಗಳ ಕಾಲ ಕೋಟೆಯಲ್ಲಿ ಹರಿಪಾದ ಮಿತ್ರ ಎಂಬ ಅರಣ್ಯ ಅಧಿಕಾರಿಗಳ ಬಂಗಲೆಯಲ್ಲಿ ತಂಗಿದ್ದರು. ಸ್ವಾಮಿ ವಿವೇಕಾನಂದರು ಪಾವನಗೊಳಿಸಿದ ಈ ಭೂಮಿಯಲ್ಲಿ ರಾಮಕೃಷ್ಣ ಮಿಶನ್ ಆಶ್ರಮ 2000 ನೇ ಇಸವಿಯಲ್ಲಿ ಪ್ರಾರಂಭವಾಯಿತು. 2004 ರ ಜನವರಿಯಲ್ಲಿ ಭಗವಾನ್ ರಾಮಕೃಷ್ಣ ಪರಮಹಂಸರ ವಿಶ್ವಭಾವೈಕ್ಯ ಮಂದಿರವನ್ನು ಸ್ಥಾಪಿಸಿ ಉದ್ಘಾಟಿಸಲಾಯಿತು. ಈ ಸವಿನೆನಪಿಗಾಗಿ ಈಗ 19 ನೆಯ ವಾರ್ಷಿಕೋತ್ಸವವನ್ನು ಫೆಬ್ರವರಿ 3 ರಿಂದ 5 ರವರೆಗೆ ಆಚರಿಸಲಾಗುತ್ತಿದೆ.

ಸಾರ್ವಜನಿಕರಿಗಾಗಿ ರವಿವಾರ, ಫೆಬ್ರವರಿ 5 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:30 ರ ವರೆಗೆ ಆಯೋಜಿರುವ ಆಧ್ಯಾತ್ಮಿಕ ಸಮ್ಮೇಳನದಲ್ಲಿ ಮತ್ತು ಅದೇ ದಿನ ಸಂಜೆ 6 ರಿಂದ 8 ರವರೆಗೆ ಖ್ಯಾತ ಹಿಂದೂಸ್ತಾನಿ ಗಾಯಕರಾದ ಪಂಡಿತ್ ಜಯತೀರ್ಥ ಮೇವುಂಡಿಯವರು ನಡೆಸಿಕೊಡಲಿರುವ ಭಜನ ಸಂಧ್ಯಾ ಎಂಬ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳಗಾವಿಯ ಸಾರ್ವಜನಿಕರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಬೆಳಗಾವಿಯ ಕೋಟೆ ರಾಮಕೃಷ್ಣ ಮಿಷನ್ ಆಶ್ರಮದ ಕಾರ್ಯದರ್ಶಿಗಳು ವಿನಂತಿಸಿಕೊಂಡಿದ್ದಾರೆ.

ವಾರ್ಷಿಕೋತ್ಸವದ ಅಂಗವಾಗಿ ಫೆಬ್ರವರಿ 3 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:30 ರ ವರೆಗೆ ಸುಮಾರು 700 ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಯುವಸಮ್ಮೇಳನವನ್ನು ಮತ್ತು ಫೆ.4 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:30 ರ ವರೆಗೆ 700 ಶಿಕ್ಷಕರು ಮತ್ತು ಬಿ ಎಡ್ ಕಾಲೇಜು ವಿದ್ಯಾರ್ಥಿಗಳಿಗಾಗಿ ಶಿಕ್ಷಕರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ಈ ಎಲ್ಲಾ ಕಾರ್ಯಕ್ರಮಗಳ ಉದ್ದೇಶ ಶ್ರೀರಾಮಕೃಷ್ಣ, ಶ್ರೀಶಾರದಾದೇವಿ ಮತ್ತು ಸ್ವಾಮಿ ವಿವೇಕಾನಂದರ ಜೀವನ ಹಾಗೂ ಸಂದೇಶಗಳನ್ನು, ಉದಾತ್ತ ವೇದಾಂತ ಸಂದೇಶಗಳನ್ನು, ಭಾರತೀಯ ಶ್ರೇಷ್ಠ ಸಾಂಸ್ಕೃತಿಕ ಪರಂಪರೆಯನ್ನು ಜನಮಾನಸದಲ್ಲಿ ಬಿತ್ತುವುದು. ಈ ಉನ್ನತ ಚಿಂತನೆಗಳು ಜನರ ಜೀವನದಲ್ಲಿ ಶ್ರೇಯಸ್ಸನ್ನು ತಂದು, ಅವರ ಜೀವನ ಸುಖ-ಶಾಂತಿಯಿಂದ ಕೂಡಿ, ತನ್ಮೂಲಕ ಶ್ರೇಷ್ಠ ಸಮಾಜ ನಿರ್ಮಾಣವಾಗಲಿ ಎಂಬುದು ನಮ್ಮ ಆಶಯ ಎಂದು ರಾಮಕೃಷ್ಣ ಮಿಷನ್ ಆಶ್ರಮದ ಕಾರ್ಯದರ್ಶಿಗಳು ತಿಳಿಸಿದ್ದಾರೆ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ