Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದಿ. 26 ಬಸವ ಜಯಂತಿ ಮೆರವಣಿಗೆ : ಬೆಳಗಾವಿ ಸಂಚಾರ ಮಾರ್ಗ ಬದಲಾವಣೆ; ಸಾರ್ವಜನಿಕರ ಗಮನಕ್ಕೆ 

Advertisement

ಜನ ಜೀವಾಳ ಜಾಲ ಬೆಳಗಾವಿ : ವಿಶ್ವಗುರು ಬಸವೇಶ್ವರ ಜಯಂತಿ ಅಂಗವಾಗಿ ದಿನಾಂಕ: 26/04/2026 ರಂದು ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಿಂದ ಕಾಕತಿ ವೇಸ್ ರಸ್ತೆ, ಶನಿವಾರ ಕೂಟ, ಗಣಪತಿ ಗಲ್ಲಿ, ಮಾರುತಿ ಗಲ್ಲಿ. ಕಿರ್ಲೋಸ್ಕರ್ ರಸ್ತೆ, ಧರ್ಮವೀರ ಸಂಭಾಜಿ ವೃತ್ತ, ಕಾಲೇಜ್ ರಸ್ತೆ ಮೂಲಕ ಲಿಂಗರಾಜ್ ಕಾಲೇಜ್ ಮೈದಾನದವರೆಗೆ ಮೆರವಣಿಗೆ ಜರುಗಲಿರುತ್ತದೆ.

ಸಾರ್ವಜನಿಕ ಸುಗಮ ಸಂಚಾರ ವ್ಯವಸ್ಥೆ ಕುರಿತು ದಿನಾಂಕ: 26/04/2026 ರಂದು ಸಾಯಂಕಾಲ 04.00 ಗಂಟೆಯಿಂದ ಮೆರವಣಿಗೆ ಮುಕ್ತಾಯದವರೆಗೆ ಈ ಕೆಳಗಿನಂತೆ ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳಲು ಕೋರಲಾಗಿದೆ.

1) ಕಿಲ್ಲಾ ಕೆರೆ ಅಶೋಕ ಪಿಲ್ಲರ ವೃತ್ತ-ಆರ್‌ಟಿಓ ಸರ್ಕಲ್-ಚನ್ನಮ್ಮ ಸರ್ಕಲ್ ಮಾರ್ಗವಾಗಿ ಕಾಲೇಜ್ ರಸ್ತೆ ಮುಖಾಂತರ ಖಾನಾಪೂರ ಕಡಗೆ ಸಾಗುವ ವಾಹನಗಳು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಎಸ್.ಪಿ. ಆಫೀಸ್ ರಸ್ತೆ ಮಾರ್ಗವಾಗಿ ಕೃಷ್ಣದೇವರಾಯ (ಕೋಲ್ಲಾಪುರ) ವೃತ್ತ, ವಾಯ್-ಜಂಕ್ಷನ್, ಸದಾಶಿವ ನಗರ ಲಕ್ಷ್ಮೀ ಕಾಂಪ್ಲೆಕ್ಸ್, ವಿಶ್ವೇಶ್ವರಯ್ಯ ನಗರ ಬಾಚಿ ಕ್ರಾಸ್, ಗಾಂಧಿ ಸರ್ಕಲ್ (ಅರಗನ ತಲಾಬ), ಶೌರ್ಯ ಚೌಕ (ಮಿಸ್ಟ್ರಿ ಆಸ್ಪತ್ರೆ ಸರ್ಕಲ್), ಕೇಂದ್ರಿಯ ವಿದ್ಯಾಲಯ ನಂ.2. ಶರ್ಕತ್ ಪಾರ್ಕ. ಗ್ಲೋಬ್ ಥಿಯೇಟರ್ ಸರ್ಕಲ್ ಮೂಲಕ ಖಾನಾಪೂರ ರಸ್ತೆಗೆ ಸೇರಿ ಮುಂದೆ ಸಾಗುವುದು.

2) ಖಾನಾಪೂರ ಕಡೆಯಿಂದ ಕಾಂಗ್ರೆಸ್ ರಸ್ತೆ ಮಾರ್ಗವಾಗಿ ಬೆಳಗಾವಿ ನಗರಕ್ಕೆ ಪ್ರವೇಶಿಸುವ ವಾಹನಗಳು ಹಾಗೂ ಗೋಗಟೆ ಸರ್ಕಲ್ ರೈಲ್ವೆ # ಓವರ್ ರಸ್ತೆ ಮುಖಾಂತರ ಬೆಳಗಾವಿ ನಗರಕ್ಕೆ ಪ್ರವೇಶಿಸುವ ವಾಹನಗಳು ಗ್ಲೋಬ್ ಥಿಯೇಟರ್ ಸರ್ಕಲ್ ದಲ್ಲಿ ಎಡತಿರುವ ಪಡೆದುಕೊಂಡು ಗವಳಿ ಗಲ್ಲಿ ಕ್ರಾಸ್, ಶರ್ಕತ್ ಪಾರ್ಕ, ಕೇಂದ್ರಿಯ ವಿದ್ಯಾಲಯ ನಂ.2. ಶೌರ್ಯ ಚೌಕ (ಮಿಳ್ಳಿ ಆಸ್ಪತ್ರೆ ಸರ್ಕಲ್), ಗಾಂಧಿ ಸರ್ಕಲ್ (ಅರಗನ ತಲಾಬ), ಗಣೇಶ ಮಂದಿರ, ಹಿಂಡಲಗಾ ರಸ್ತೆ, ಹನುಮಾನ ನಗರ ಡಬಲ್ ರೋಡ್ ಮೂಲಕ ಬಾಕ್ಷಾಯಿಟ್ ರಸ್ತೆ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಸೇರುವುದು.

3) ಮೆರವಣಿಗೆ ಮಾರ್ಗದಲ್ಲಿ ಎರಡು ಕ್ಯಾರೇಜ್ ವೇ ಇದ್ದ ಕಡೆಗಳಲ್ಲಿ ಒಂದು ಮಾರ್ಗವನ್ನು ಹಾಗೂ ಒಂದು ಕ್ಯಾರೇಜ್ ವೇ ಇದ್ದ ರಸ್ತೆಯನ್ನು ಸಂಪೂರ್ಣವಾಗಿ ಮೆರವಣಿಗೆಗೆ ಉಪಯೋಗಿಸಲಾಗುವುದು.

4) ໖: 26/04/2026 d ย 04.00 ៨ សំដ ಮುಕ್ತಾಯದವರೆಗೆ ಎಲ್ಲ ದಿಕ್ಕುಗಳಿಂದ ನಗರ ಪ್ರವೇಶಿಸುವ ಭಾರಿ ವಾಹನಗಳನ್ನು ನಗರದಲ್ಲಿ ಸಂಚರಿಸುವುದನ್ನು ನಿಷೇಧಿಸಲಾಗಿದೆ.

5) ರಾಣಿ ಚನ್ನಮ್ಮ ವೃತ್ತದಿಂದ ಕಾಕತಿ ವೇಸ್ ರಸ್ತೆ, ಶನಿವಾರ ಕೂಟ, ಗಣಪತಿ ಗಲ್ಲಿ, ಮಾರುತಿ ಗಲ್ಲಿ, ಕಿರ್ಲೋಸ್ಕರ್ ರಸ್ತೆ, ಧರ್ಮವೀರ ಸಂಭಾಜಿ ವೃತ್ತ, ಕಾಲೇಜ್ ರಸ್ತೆಯಲ್ಲಿ ದಿನಾಂಕ: 26/04/2026 ರಂದು ಸಾಯಂಕಾಲ 04.00 ಗಂಟೆಯಿಂದ ಮೆರವಣಿಗೆ ಮುಕ್ತಾಯದವರೆಗೆ ಎಲ್ಲ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
10.31 ಲಕ್ಷ ರೂ.ಹೆರಾಯಿನ್ ವಶಪಡಿಸಿಕೊಂಡು ಮೂವರ ಬಂಧಿಸಿದ ಬೆಳಗಾವಿ ಪೊಲೀಸರು ಕಾರು ಚಾಲನೆ ಮಾಡಿದ ಬಾಲಕನ ತಪ್ಪಿಗೆ ಪಾಲಕರಿಗೆ  ದಂಡ ವಿಧಿಸಿದ ಪೊಲೀಸರುಮಳೆಯ ಅಬ್ಬರಕ್ಕೆ ವಿಭೂತಿ ಜಲಪಾತ ಬಂದ್‌: ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧಶಕ್ತಿ ಯೋಜನೆ'ಗೆ ಶೀಘ್ರ ಸ್ಮಾರ್ಟ್ ಕಾರ್ಡ್ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಚುನಾವಣಾ ತಂತ್ರಗಾರ ಸುನೀಲ್ ಕನುಗೋಳು ನೇಮಕದೀದಿ ಪಕ್ಷದಲ್ಲಿ ‘ಮಹಾಬಂಡಾಯ’ | ಸ್ಪೀಕರ್‌ಗೆ 20 ಟಿಎಂಸಿ ಸಂಸದರ ಪತ್ರ ; ಪ್ರತ್ಯೇಕ ಪಕ್ಷ ರಚಿಸುವ ಸಾಧ್ಯತೆ ; ಎನ್‌ಡಿಎ ಒಕ್ಕೂಟ ಸೇರಲು ಸಜ್ಜು ಎರಡನೇ ಹಂತದ ಸಚಿವ ಸಂಪುಟ ರಚನೆ ವೇಳೆ ಗಾಣಿಗ ಸಮಾಜದ ಹಿರಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಅವಕಾಶ ನೀಡಲು ಗಾಣಿಗ ಮುಖಂಡರ ಮನವಿಬಣ್ಣದ ಕುಂಚದಿಂದ ಕ್ಯಾಮೆರಾದ ಕಣ್ಣಿನವರೆಗೆ  ಕರ್ನಾಟಕ ಛಾಯಾ ರತ್ನ ಪಿ.ಕೆ. ಬಡಿಗೇರ ಅವರ ಸಾಧನೆಯ ಬೆಳಕುಈಜು ಬಾರದ ಅಣ್ಣ-ತಮ್ಮ ನೀರುಪಾಲುಈಜಲು ಹೋದ ಬಾಲಕ ಸಾವು