Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾಕುಂಭಮೇಳ ಇಂದೇ ತೆರೆ : ಅಮೃತ ಸ್ನಾನಕ್ಕೆ ಕೋಟ್ಯಂತರ ಭಕ್ತರ ಆಗಮನ

 

ಲಖನೌ: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ
ನಡೆಯುತ್ತಿರುವ ಜಗತ್ತಿನಲ್ಲೇ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮವಾದ ಮಹಾ ಕುಂಭಮೇಳವು ಮಹಾ ಶಿವರಾತ್ರಿಯ ದಿನವಾದ ಇಂದು (ಬುಧವಾರ) ಅಂತ್ಯಗೊಳ್ಳಲಿದೆ.

144 ವರ್ಷಕ್ಕೆ ಒಮ್ಮೆ ಮಹಾಕುಂಭಮೇಳ ನಡೆಯುತ್ತದೆ ಎನ್ನಲಾಗಿದೆ. ತ್ರಿವೇಣಿ ಸಂಗಮ ಸ್ಥಾನದಲ್ಲಿ ಈ ಬಾರಿಯ ಕೊನೆಯ 'ಅಮೃತ ಸ್ನಾನ' ಮಾಡಲು ದೇಶದಾದ್ಯಂತ ಜನರು ಪ್ರಯಾಗರಾಜ್‌ ನತ್ತ ಹರಿದುಬಂದಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ತ್ರಿವೇಣಿ ಸಂಗಮದಲ್ಲಿ ಮಾತ್ರವಲ್ಲದೆ ಇನ್ನಿತರ ಘಾಟ್‌ಗಳ ಬಳಿ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋಟ್ಯಂತರ ಜನರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಮಂಗಳವಾರ ಮಧ್ಯಾಹ್ನದಿಂದಲೇ ಸಾಗರೋಪಾದಿಯಲ್ಲಿ ಜನರು ಸಂಗಮಕ್ಕೆ ತೆರಳುವ ದೃಶ್ಯಗಳು ಕಂಡುಬಂದಿದ್ದವು.

ಅಂತಿಮ ದಿನದ 'ಅಮೃತ ಸ್ನಾನ'ಕ್ಕೆ ಮಾಡಿಕೊಳ್ಳಲಾದ ತಯಾರಿಗಳ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಂಗಳವಾರ ಪರಿಶೀಲನೆ ನಡೆಸಿದ್ದರು.

ಪ್ರಯಾಗರಾಜ್ ಮಾತ್ರವಲ್ಲದೇ ಅಯೋಧ್ಯೆ ಮತ್ತು ವಾರಾಣಸಿಯಲ್ಲಿಯೂ ಭಕ್ತರ ಸಂಖ್ಯೆ ಅತ್ಯಧಿಕವಾಗಿದೆ. ಆದ್ದರಿಂದ ಈ ಸ್ಥಳಗಳಲ್ಲಿಯೂ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ. ಶಿವರಾತ್ರಿ ಪ್ರಯುಕ್ತ ಅಧಿಕ ಭಕ್ತರು ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದಲ್ಲಿ 'ವಿಐಪಿ ದರ್ಶನ'ವನ್ನು ರದ್ದು ಮಾಡಲಾಗಿದೆ.

12 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳವು ಜನವರಿ 13ರಂದು ಪ್ರಾರಂಭವಾಗಿತ್ತು. ನಾಗಾ ಸಾಧುಗಳ ಭವ್ಯ ಮೆರವಣಿಗೆಗಳು ಮತ್ತು ಮೂರು 'ಅಮೃತ ಸ್ನಾನ'ಗಳು ನಡೆದಿವೆ. ಈ ಬಾರಿ ಕುಂಭಮೇಳಕ್ಕೆ 64 ಕೋಟಿ ಭಕ್ತರು ಬಂದಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

'ನಿರ್ದಿಷ್ಟ ಅವಧಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದಕ್ಕೆ ಬೃಹತ್ ಸಂಖ್ಯೆಯ ಜನರು ಸೇರಿದ್ದು ಶತಮಾನದ ಅಪರೂಪದ ಘಟನೆಗಳಲ್ಲಿ ಒಂದಾಗಿದೆ' ಎಂದು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ