Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಿಂಚಣಿ ಕುರಿತು ಕೇಂದ್ರದಿಂದ ಕೊನೆಗೂ ನಿಲುವು ಬದಲು ?

 

ದೆಹಲಿ :
ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ, ಸೇವಾವಧಿಯ ಕಡೆಯ ವೇತನದ ಕನಿಷ್ಠ ಶೇಕಡ 40–45ರಷ್ಟು ಮೊತ್ತವನ್ನು ಖಾತರಿ ಪಿಂಚಣಿಯಾಗಿ ನೀಡುವ ಸಾಧ್ಯತೆ ಇದೆ.

ಈಗ ಜಾರಿಯಲ್ಲಿ ಇರುವ, ಬಂಡವಾಳ ಮಾರುಕಟ್ಟೆ ಆಧಾರಿತ ಎನ್‌ಪಿಎಸ್ ಬದಲಿಗೆ, ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಮತ್ತೆ ಜಾರಿಗೆ ತರಲು ಕೆಲವು ರಾಜ್ಯ ಸರ್ಕಾರಗಳು ಮುಂದಾಗಿವೆ. ಹೀಗಾಗಿ, ಈಗಿನ ಪಿಂಚಣಿ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ತರುವ ಆಲೋಚನೆಯು ಕೇಂದ್ರಕ್ಕೆ ಇದೆ ಎಂದು ಮೂಲಗಳು ಹೇಳಿವೆ.

ಆದರೆ, ಇಂಥದ್ದೊಂದು ತೀರ್ಮಾನ ಆಗಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯವು ಪ್ರತಿಕ್ರಿಯೆ ನೀಡಿದೆ. ಎನ್‌ಪಿಎಸ್ ಹಾಗೂ ಒಪಿಎಸ್‌ ಬಗ್ಗೆ ಪರಿಶೀಲಿಸುತ್ತಿರುವ ಸಮಿತಿಯು ‘ಸಂಬಂಧಪಟ್ಟವರ ಜೊತೆ ಸಮಾಲೋಚನೆ ನಡೆಸುತ್ತಿದೆ. ಸಮಿತಿಯು ಇನ್ನೂ ಯಾವುದೇ ತೀರ್ಮಾನಕ್ಕೆ ಬಂದಿಲ್ಲ’ ಎಂದು ಸಚಿವಾಲಯ ಹೇಳಿದೆ.

ಎನ್‌ಪಿಎಸ್ ವ್ಯವಸ್ಥೆಯಲ್ಲಿ ನೌಕರರು ಹಾಗೂ ಉದ್ಯೋಗದಾತರು ಪಿಂಚಣಿಗಾಗಿ ಮೀಸಲಿಡುವ ಹಣವನ್ನು ಬಂಡವಾಳ ಮಾರುಕಟ್ಟೆಯಲ್ಲಿ ತೊಡಗಿಸಲಾಗುತ್ತದೆ. ಮಾರುಕಟ್ಟೆಯ ಏರಿಳಿತಗಳಿಗೆ ಅನುಗುಣವಾಗಿ ಪಿಂಚಣಿಯ ಮೊತ್ತ ನಿರ್ಧಾರವಾಗುತ್ತದೆ.

ಆದರೆ ಹಳೆಯ ಪಿಂಚಣಿ ವ್ಯವಸ್ಥೆಯಲ್ಲಿ, ಕೊನೆಯ ವೇತನದ ಶೇಕಡ 50ರಷ್ಟು ಮೊತ್ತವನ್ನು ಪಿಂಚಣಿಯಾಗಿ ನೀಡಲಾಗುತ್ತದೆ. ಹಳೆಯ ವ್ಯವಸ್ಥೆಯಲ್ಲಿ ನೌಕರರು ಪಿಂಚಣಿಗೆ ತಮ್ಮ ವೇತನದಿಂದ ಯಾವುದೇ ಕೊಡುಗೆ ನೀಡಬೇಕಿಲ್ಲ.

ಹೊಸ ಪಿಂಚಣಿ ವ್ಯವಸ್ಥೆಯಲ್ಲಿ ಬದಲಾವಣೆ ತಂದು, ಪಿಂಚಣಿಯಾಗಿ ಖಾತರಿ ಮೊತ್ತವನ್ನು ನೀಡುವ ಆಲೋಚನೆ ಕೇಂದ್ರಕ್ಕಿದೆ. ‍ಪಿಂಚಣಿಗಾಗಿ ನೌಕರರು ಹಾಗೂ ಉದ್ಯೋಗದಾತರಿಂದ ಕೊಡುಗೆಯನ್ನು ಪಡೆಯುವ ಉದ್ದೇಶ ಕೂಡ ಕೇಂದ್ರಕ್ಕೆ ಇದೆ ಎಂದು ಮೂಲಗಳು ವಿವರಿಸಿವೆ. ಹೀಗೆ ಮಾಡಿದಾಗ, ಕೆಲವು ರಾಜ್ಯಗಳು ವ್ಯಕ್ತಪಡಿಸಿರುವ ಕಳವಳಕ್ಕೂ ಸ್ಪಂದಿಸಿದಂತೆ ಆಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ ಹಳೆಯ ಪಿಂಚಣಿ ವ್ಯವಸ್ಥೆಗೆ ಮರಳುವ ಪ್ರಶ್ನೆ ಇಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈಗಿನ ಪಿಂಚಣಿ ವ್ಯವಸ್ಥೆಯಲ್ಲಿ ಈ ಬದಲಾವಣೆಗಳನ್ನು ಮಾಡಿದಲ್ಲಿ, ಸರ್ಕಾರಗಳಿಗೆ ಆರ್ಥಿಕ ಹೊರೆ ದೊಡ್ಡ ಮಟ್ಟದಲ್ಲಿ ಇರುವುದಿಲ್ಲ ಎನ್ನಲಾಗಿದೆ.

ಎನ್‌ಪಿಎಸ್‌ ಅಡಿಯಲ್ಲಿ, ಈಗಿನ ಲೆಕ್ಕಾಚಾರದ ಪ್ರಕಾರ, ನೌಕರರು ನಿವೃತ್ತಿಯ ನಂತರದಲ್ಲಿ ಅವರ ಕಡೆಯ ವೇತನದ ಶೇ 38ರಷ್ಟನ್ನು ಪಿಂಚಣಿಯಾಗಿ ಪಡೆಯುತ್ತಾರೆ. ಸರ್ಕಾರವು, ಕಡೆಯ ವೇತನದ ಶೇ 40ರಷ್ಟು ಮೊತ್ತವನ್ನು ಪಿಂಚಣಿಯಾಗಿ ನೀಡುವ ಖಾತರಿ ನೀಡಿದಲ್ಲಿ, ವ್ಯತ್ಯಾಸದ ಮೊತ್ತವನ್ನು (ಈಗಿನ ಲೆಕ್ಕಾಚಾರದ ಪ್ರಕಾರ ಶೇ 2ರಷ್ಟು) ತುಂಬಿಸಿಕೊಡಬೇಕಾಗುತ್ತದೆ.

ಆದರೆ, ಬಂಡವಾಳ ಮಾರುಕಟ್ಟೆಯಿಂದ ಸಿಗುವ ಲಾಭ ಕಡಿಮೆ ಆದಲ್ಲಿ, ಸರ್ಕಾರ ಬೊಕ್ಕಸದಿಂದ ಕೊಡಬೇಕಿರುವ ಮೊತ್ತವು ಹೆಚ್ಚಾಗುತ್ತದೆ. ‘ಹಳೆಯ ಪಿಂಚಣಿ ವ್ಯವಸ್ಥೆಗೆ ಮರಳುವುದಕ್ಕಿಂತ ಈ ವ್ಯವಸ್ಥೆಯು ಹಣಕಾಸಿನ ಲೆಕ್ಕಾಚಾರದಲ್ಲಿ ಹೆಚ್ಚು ಸೂಕ್ತ’ ಎಂದು ಮೂಲಗಳು ಹೇಳಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ