Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸುಖಾ ಸುಮ್ಮನೆ ಎಲ್ಲರಿಗೂ ಚಪ್ಪಾಳೆ ತಟ್ಟಬೇಡಿ ಎಂದ ಸಿಎಂ

 

ಬೆಂಗಳೂರು :
ಕನಕದಾಸರು ಆಕಸ್ಮಿಕವಾಗಿ ಕುರುಬರಾಗಿ ಹುಟ್ಟಿದ ವಿಶ್ವಶ್ರೇಷ್ಠ ಮಾನವೀಯ ಚೈತನ್ಯರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ದಾಸಪಂಥಕ್ಕೆ ಪ್ರವೇಶಿಸುವ ಮೊದಲು ಕನಕರು ಪಾಳೇಗಾರರಾಗಿದ್ದರು. ಆದಿಕೇಶವನ ಭಕ್ತರಾಗಿ ದಾಸರಾಗಿ, ದಾಸಶ್ರೇಷ್ಠರೂ ಆದರು. ಆದರೆ ಕನಕದಾಸರ ಕೀರ್ತನೆಗಳಲ್ಲಿ ಅತ್ಯುನ್ನತ ಮಾನವೀಯ ಮೌಲ್ಯಗಳಿವೆ ಎಂದು ವಿವರಿಸಿದರು.

ನಾನು ಕುರುಬನಾಗಿ ಜನಿಸಿದ್ದೇನೆ. ನೀವುಗಳೂ ಕುರುಬ ಸಮುದಾಯದಲ್ಲಿ ಜನಿಸಿರಬಹುದು. ಹಾಗಂದ ಮಾತ್ರಕ್ಕೆ ಕುರುಬರಾಗೇ ಸಾಯಬೇಕಾ? ಅಪ್ಪಟ ಮನುಷ್ಯರಾಗಿ ಸಾಯಬೇಕು ಅಲ್ವಾ ಎಂದರು.

ಕನಕದಾಸರನ್ನು ಶೂದ್ರ ಜಾತಿಯವ ಎನ್ನುವ ಕಾರಣಕ್ಕೆ ಕೃಷ್ಣನ ದರ್ಶನಕ್ಕೆ ಬಿಡಲಿಲ್ಲ. ಕುವೆಂಪು ಅವರು ಹೇಳಿದಂತೆ ನಾವೆಲ್ಲಾ ವಿಶ್ವ ಮಾನವರಾಗಲು ಸಾಧ್ಯವಾಗದಿದ್ದರೂ ವಿಶ್ವ ಮಾನವರಾಗುವ ಮಾರ್ಗದಲ್ಲಿ ಸಾಗಬೇಕು. ಆ ಮೂಲಕ ನಾವೆಲ್ಲಾ ನಮ್ಮ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಕನಕದಾಸರ 500 ನೇ ಜಯಂತಿಯನ್ನು ಮಾಡಿದ್ದು ನಾನೇ. ಅಲ್ಲಿಯವರೆಗೂ 400 ನೇ ಜಯಂತಿಯನ್ನು ಯಾರೂ ಆಚರಿಸಿರಲಿಲ್ಲ.

ಸುಖಾ ಸುಮ್ಮನೆ ಎಲ್ಲರಿಗೂ ಚಪ್ಪಾಳೆ ತಟ್ಟಬೇಡಿ. ನಿಮ್ಮಲ್ಲೊಂದು ತತ್ವ ಇರಲಿ. ಮೂರು ವರ್ಷಗಳಿಂದ ಕನಕಶ್ರೀ ಪ್ರಶಸ್ತಿಯನ್ನೇ ಕೊಟ್ಟಿಲ್ಲ. ಆದರೂ ಅವರಿಗೂ ಚಪ್ಪಾಳೆ ತಟ್ಟೋದು, ಇಲ್ಲಿ ಬಂದು ನನಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ನಿಮಗೆ ಸ್ಪಷ್ಟತೆ ಇರಲಿ. ಕನಕದಾಸರು ಒಂದು ಜಾತಿಗೆ ಸೇರಿದವರಲ್ಲ. ಕುರುಬ ಜಾತಿಯವರನ್ನು ಮೆಚ್ಚಿಸಲು ಕನಕ ಜಯಂತಿ ಮಾಡುತ್ತಿಲ್ಲ. ಕನಕದಾಸರು ವಿಶ್ವ ಮಾನವರಾಗಿದ್ದರು. ಅವರ ತತ್ವಾದರ್ಶಗಳನ್ನು ಪಾಲಿಸಿ ವಿಶ್ವ ಮಾನವರಾಗೋಣ ಎಂದು ಆಶಿಸಿದರು.

*ಜಾತಿ ಗಣತಿ ಆರಂಭಿಸಿದ್ದೇ ನಾನು*

ಪ್ರತಿಯೊಂದು ಜಾತಿ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯುವುದಕ್ಕೆ ಮತ್ತು ಸಂವಿಧಾನದ ಆಶಯಗಳನ್ನು ಕಾರ್ಯಕ್ರಮಗಳ ಮೂಲಕ ಎಲ್ಲಾ ಸಮುದಾಯಗಳಿಗೂ ತಲುಪಿಸುವುದಕ್ಕಾಗಿ ನಾನೇ ಜಾತಿಗಣತಿ ಆರಂಭಿಸಿದೆ ಎಂದು ವಿವರಿಸಿದರು.

ಅಂಬೇಡ್ಕರ್ ಅವರು ಹೇಳಿದ್ದ ಎಚ್ಚರಿಕೆ ಮಾತುಗಳನ್ನು ಮರೆಯಬಾರದು. ಜಾತಿ ಗಣತಿಗೆ ಕಾಂಗ್ರೆಸ್ ಬದ್ದವಾಗಿದೆ. ಇಡೀ ದೇಶದಲ್ಲಿ ಜಾರಿ ಮಾಡಲು ಕಾಂಗ್ರೆಸ್ ಬದ್ದವಾಗಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಂತ ಶ್ರೇಷ್ಠ ಕನಕದಾಸ ಜಯಂತಿಯನ್ನು ಉದ್ಘಾಟಿಸಿ ಸಮಾಜ ಸೇವಕ ದಿವಂಗತ ಲಿಂಗಪ್ಪ ಅವರಿಗೆ ಮರಣೋತ್ತರ ಕನಕಶ್ರೀ ಪ್ರಶಸ್ತಿಯನ್ನು ವಿತರಿಸಿ ಮಾತನಾಡಿದರು.

ಕನಕದಾಸರ ಕುರಿತ ಸಾಹಿತ್ಯ ಕೃಷಿ ಮಾಡದಿದ್ದರೂ ಕನಕದಾಸರ ತತ್ವಾದರ್ಶಗಳನ್ನು ಪಾಲಿಸುತ್ತಾ, ಜನ ಸೇವಕರಾಗಿದ್ದ ಲಿಂಗಪ್ಪ ಅವರನ್ನು ಕನಕಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಅತ್ಯಂತ ಸೂಕ್ತ ಎಂದು ಮೆಚ್ಚುಗೆ ಸೂಚಿಸಿ ಲಿಂಗಪ್ಪ ಅವರ ಕುಟುಂಬಕ್ಕೆ ಅಭಿನಂದನೆ ಸಲ್ಲಿಸಿದರು.

ತಿಂಥಣಿಯ ಕನಕಗುರು ಪೀಠದ ಸಿದ್ದರಾಮಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಮಾಜಿ ಸಚಿವ ಎಚ್. ಎಂ. ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ