Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ-ರಾಜ್ಯದ ದಾವಣಗೆರೆ, ಬಾಗಲಕೋಟೆಗೆ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನವದೆಹಲಿ: ಚುನಾವಣಾ ಆಯೋಗವು ಇಂದು, ಭಾನುವಾರ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕಗಳನ್ನು ಘೋಷಿಸಿದೆ. ಉಳಿದ ಎಲ್ಲಾ ರಾಜ್ಯಗಳಲ್ಲಿ ಚುನಾವಣೆಗಳು ಒಂದೇ ಹಂತದಲ್ಲಿ ನಡೆಯಲಿದ್ದರೆ, ಪಶ್ಚಿಮ ಬಂಗಾಳ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ.
ಅಸ್ಸಾಂ, ಕೇರಳ ಮತ್ತು ಪುದುಚೇರಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ತಮಿಳುನಾಡಿಗೆ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಎರಡು ಹಂತದ ಚುನಾವಣೆ ನಡೆಯಲಿದ್ದು, ಮೊದಲನೇ ಹಂತದ ಮತದಾನ ಏಪ್ರಿಲ್ 23ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಏಪ್ರಿಲ್ 29 ರಂದು ನಡೆಯಲಿದೆ. ಈ ಎಲ್ಲಾ ರಾಜ್ಯಗಳ ಚುನಾವಣೆಯ ಮತ ಎಣಿಕೆ ಮೇ 4 ರಂದು ನಡೆಯಲಿದೆ. ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬರುತ್ತದೆ.
ಚುನಾವಣೆ ನಡೆಯುವ ರಾಜ್ಯಗಳು
ಪಶ್ಚಿಮ ಬಂಗಾಳ: 294 ಕ್ಷೇತ್ರಗಳು – ಮತದಾನ ಏಪ್ರಿಲ್ 23 ಮತ್ತು 29
ತಮಿಳುನಾಡು: 234 ಕ್ಷೇತ್ರಗಳು – ಮತದಾನ ಏಪ್ರಿಲ್ 23
ಅಸ್ಸಾಂ: 126 ಕ್ಷೇತ್ರಗಳು – ಮತದಾನ ಏಪ್ರಿಲ್ 9
ಕೇರಳ: 140 ಕ್ಷೇತ್ರಗಳು – ಮತದಾನ ಏಪ್ರಿಲ್ 9
ಪುದುಚೆರಿ: 30 ಕ್ಷೇತ್ರಗಳು – ಮತದಾನ ಏಪ್ರಿಲ್ 9
ಈ ಚುನಾವಣೆಯ ಐದು ರಾಜ್ಯಗಳ ಒಟ್ಟು 824 ಕ್ಷೇತ್ರಗಳಲ್ಲಿ ನಡೆಯಲಿದೆ. ಒಟ್ಟಾರೆಯಾಗಿ ಸುಮಾರು 17.4 ಕೋಟಿ ಜನರು ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅಸ್ಸಾಂನಲ್ಲಿ 2.50 ಕೋಟಿ, ಕೇರಳದಲ್ಲಿ 2.70 ಕೋಟಿ, ಪುದುಚೇರಿಯಲ್ಲಿ 9.44 ಲಕ್ಷ, ತಮಿಳುನಾಡಿನಲ್ಲಿ 5.67 ಕೋಟಿ ಮತ್ತು ಪಶ್ಚಿಮ ಬಂಗಾಳದಲ್ಲಿ 6.44 ಕೋಟಿ ಮತದಾರರು ಮತಚಲಾಯಿಸಲು ಅರ್ಹರಾಗಿದ್ದಾರೆ.

ಕರ್ನಾಟಕ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಮಾರ್ಚ್‌ 23 ಕೊನೆಯ ದಿನಾಂಕವಾಗಿದ್ದು, ನಾಮಪತ್ರ ಹಿಂಪಡೆಯಲು ಮಾರ್ಚ್‌ 26 ಕೊನೆಯ ದಿನವಾಗಿದೆ. ಏಪ್ರಿಲ್‌ 9ರಂದು ವೋಟಿಂಗ್‌ ನಡೆಯಲಿದ್ದು, ಬಳಿಕ ಮೇ 4ರಂದು ಮತ ಎಣಿಕೆ ನಡೆಯಲಿದೆ.

ಎಚ್.ವೈ.ಮೇಟಿ ನಿಧನರಾದ ಕಾರಣ ಬಾಗಲಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ಇದೀಗ ಚುನಾವಣೆ ನಡೆಯಲಿದೆ. ದೇಶದ ಅತ್ಯಂತ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣೆಗೆರೆ ದಕ್ಷಿಣ ಕ್ಷೇತ್ರಕ್ಕೂ ಬೈ ಎಲೆಕ್ಷನ್‌ ನಡೆಯಲಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆ