Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಸ್ರುಲ್ಲಾಗಂಜ್ ಪಟ್ಟಣದ ಹೆಸರನ್ನು ಭೈರುಂಡಾ ಎಂದು ಬದಲಾಯಿಸಿದ ಸರ್ಕಾರ

 

ಭೋಪಾಲ್ :
ಭಾರತದಲ್ಲಿ ಪಟ್ಟಣ, ನಗರ ಸೇರಿದಂತೆ ಪ್ರಮುಖ ಸ್ಥಳಗಳ ಹೆಸರು ಬದಲಾಯಿಸುವ ಪ್ರಕ್ರಿಯೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಭಾರಿ ಪರ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಯುಪಿ ಈ ವಿಚಾರದಲ್ಲಿ ತಣ್ಣಾಗಾಗಿದೆ. ಆದರೆ ಮಧ್ಯಪ್ರದೇಶ ಸರ್ಕಾರ ಕಳೆದೆರಡು ವರ್ಷದಿಂದ ಕೆಲ ಪಟ್ಟಣಗಳ ಹೆಸರು ಬದಲಾಯಿಸಿದೆ. ಇಂದು ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚವ್ಹಾಣ್ ಎರಡು ಪಟ್ಟಣದ ಹೆಸರನ್ನು ಮರುನಾಮಕರಣಗೊಳಿಸಿದ್ದಾರೆ. ನಸರುಲ್ಲಾಗಂಜ್ ಪಟ್ಟಣವನ್ನು ಬೈರುಂಡಾ ಎಂದು ಮರುನಾಮಕರಣ ಮಾಡಲಾಗಿದೆ. ಇತ್ತ ಹಿಶಂಗಬಾದ್ ಪಟ್ಟಣವನ್ನು ನರ್ಮದಾಪುರ ಎಂದು ಮರುನಾಮಕರಣ ಮಾಡಲಾಗಿದೆ.

ಕಳೆದ ವರ್ಷದ ಮಧ್ಯ ಪ್ರದೇಶ ಸರ್ಕಾರ ಎರಡು ಪಟ್ಟಣದ ಹೆಸರು ಬದಲಿಸಲು ಕೇಂದ್ರ ಸರ್ಕಾರದಿಂದ ಅನುಮತಿ ಪಡೆದಿತ್ತು. ಇಂದು ಮಧ್ಯಪ್ರದೇಶ ಸರ್ಕಾರ ನೋಟಿಫಿಕೇಶನ್ ಹೊರಡಿಸಲಾಗಿದೆ. ಈ ವರ್ಷದ ಅಂತ್ಯದಲ್ಲಿ ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಯಲಿದೆ.

 

 

ಫೆಬ್ರವರಿ ತಿಂಗಳಲ್ಲಿ ಮಧ್ಯಪ್ರದೇಶ ಸರ್ಕಾರ ಭಾರಿ ವಿರೋಧದ ನಡುವೆ ಇಸ್ಲಾಂನಗರ ಗ್ರಾಮವನ್ನು ಜಗದೀಶಪುರ ಎಂದು ಬದಲಾಯಿಸಿತ್ತು.ಭೋಪಾಲ್ ನಗರದಿಂದ 12 ಕಿಲೋಮೀಟರ್ ದೂರದಲ್ಲಿದ್ದ ಈ ಗ್ರಾಮ 308 ವರ್ಷಗಳ ಹಿಂದೆ ಇಸ್ಲಾಂ ದಾಳಿಗೆ ಒಳಪಟ್ಟಿತ್ತು. ಹೀಗಾಗಿ ದಾಳಿ ಬಳಿಕ ಜಗದೀಶಪುರ ಎಂಬ ಹೆಸರನ್ನು ಬದಲಾಯಿಸಿ ಇಸ್ಲಾಂ ನಗರ ಎಂದು ಹೆಸರಿಡಲಾಗಿತ್ತು.

ನಗರ ಪಟ್ಟಣಗಳ ಹೆಸರು ಬದಲಾಯಿಸುವ ಕುರಿತು ಸುಪ್ರೀಂ ಕೋರ್ಟ್ ಈಗಾಗಲೇ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಕುರಿತು ದಾಖಲಾಗಿದ್ದ ಅರ್ಜಿ ವಜಾ ಮಾಡಿ ಸೂಚನೆ ನೀಡಿತ್ತು.

ನಗರಗಳ ಹೆಸರು ಬದಲಿಸಲು ಕೋರಿದ್ದ ಅರ್ಜಿ ವಜಾ ಆಕ್ರಮಣಕಾರರ ಹೆಸರು ಇರುವ ಊರುಗಳು ಹಾಗೂ ಐತಿಹಾಸಿಕ ಸ್ಥಳಗಳ ಹೆಸರನ್ನು ಬದಲಿಸಿ ಮರುನಾಮಕರಣ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ವಜಾ ವಜಾಗೊಳಿಸಿದೆ.

‘ಕ್ರೂರ ವಿದೇಶಿ ಆಕ್ರಮಣಕಾರರ’ ಹೆಸರಿನ ’ಪ್ರಾಚೀನ ಐತಿಹಾಸಿಕ ಸಾಂಸ್ಕೃತಿಕ ಧಾರ್ಮಿಕ ಸ್ಥಳ’ಗಳ’ ಮೂಲ ಹೆಸರುಗಳನ್ನು ಕಂಡುಹಿಡಿಯಲು ‘ಮರುನಾಮಕರಣ ಆಯೋಗ’ ರಚಿಸಲು ಆದೇಶಿಸಬೇಕು ಎಂದು ಬಿಜೆಪಿ ನಾಯಕ ಅಶ್ವಿನಿ ಕುಮಾರ್‌ ಉಪಾಧ್ಯಾಯ ಅವರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾ ಕೆ.ಎಂ.ಜೋಸೆಫ್‌ ಮತ್ತು ನ್ಯಾ ಬಿ.ವಿ.ನಾಗರತ್ನ ಅವರ ಪೀಠವು ಅರ್ಜಿದಾರರ ಮೇಲೆ ಕಿಡಿಕಾರಿ, ‘ಇಂಥ ವಿಷಯಗಳು ದೇಶ ಕುದಿಯುವಂತೆ ಮಾಡುತ್ತವೆ. ಸಮಸ್ಯೆಗಳನ್ನು ಜೀವಂತಗೊಳಿಸುತ್ತವೆ. ದೇಶದ ಇತಿಹಾಸವು ಅದರ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯನ್ನು ಕಾಡಬಾರದು’ ಎಂದು ಹೇಳಿತು. ‘ಹಿಂದೂ ಧರ್ಮವು ಒಂದು ಧರ್ಮವಲ್ಲ. ಆದರೆ ಒಂದು ಜೀವನ ವಿಧಾನವಾಗಿದೆ. ಹಿಂದೂ ಧರ್ಮದಲ್ಲಿ ಯಾವುದೇ ಮತಾಂಧತೆ ಇಲ್ಲ. ಕೇವಲ ಅಸೌಹಾರ್ದತೆ ಉಂಟುಮಾಡುವ ಹಿಂದಿನ ವಿಷಯಗಳನ್ನು ಕೆದಕಬೇಡಿ. ದೇಶವನ್ನು ಕುದಿಯಲು ಬಿಡಲಾಗದು’ ಎಂದಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ