Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

2022ರ ಆದೇಶ ಹಿಂಪಡೆದ ಸರ್ಕಾರ ; ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ

ಬೆಂಗಳೂರು: ಕರ್ನಾಟಕ ಸರ್ಕಾರವು ಫೆಬ್ರವರಿ 2022 ರಲ್ಲಿ ಶಾಲಾ ಸಮವಸ್ತ್ರಗಳ ಕುರಿತು ತನ್ನ ಆದೇಶವನ್ನು ಹಿಂತೆಗೆದುಕೊಂಡಿದೆ ಮತ್ತು ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಗದಿತ ಸಮವಸ್ತ್ರಗಳ ಜೊತೆಗೆ ಸಾಂಪ್ರದಾಯಿಕ ಮತ್ತು ಧರ್ಮ ಆಧಾರಿತ ಚಿಹ್ನೆಗಳನ್ನು ಸೀಮಿತ ಶ್ರೇಣಿಯಲ್ಲಿ ಧರಿಸಲು ವಿದ್ಯಾರ್ಥಿಗಳಿಗೆ ಅನುಮತಿ ನೀಡುವ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಸರ್ಕಾರದ ಹೊಸ ಆದೇಶದ ಪ್ರಕಾರ, ಶಾಲಾ ಮಂಡಳಿಗಳು ನಿಗದಿಪಡಿಸಿದ ಸಮವಸ್ತ್ರ ಕಡ್ಡಾಯವಾಗಿದ್ದರೂ, ಅದರೊಂದಿಗೆ ಕೆಲವು ನಿರ್ದಿಷ್ಟ ಧಾರ್ಮಿಕ ಗುರುತುಗಳನ್ನು ಧರಿಸಲು ಅನುಮತಿ ನೀಡಲಾಗಿದೆ.
ವಿದ್ಯಾರ್ಥಿಗಳು ಸಮವಸ್ತ್ರದ ಜೊತೆಗೆ ಹಿಜಾಬ್‌ ಅಥವಾ ತಲೆಗವಸು, ಪೇಟ ಅಥವಾ ಟರ್ಬನ್, ಜನಿವಾರ, ಶಿವಧಾರ, ರುದ್ರಾಕ್ಷಿ  ಧರಿಸಲು ಅವಕಾಶ ನೀಡಲಾಗಿದೆ.
ಈ ಧಾರ್ಮಿಕ ಲಾಂಛನಗಳು ಸಮವಸ್ತ್ರದ ಘನತೆಗೆ ಧಕ್ಕೆ ತರಬಾರದು. ಅಲ್ಲದೆ, ವಿದ್ಯಾರ್ಥಿಗಳ ಗುರುತಿಸುವಿಕೆ (Identification), ಶಿಸ್ತು ಮತ್ತು ಸುರಕ್ಷತೆಗೆ ಯಾವುದೇ ಅಡ್ಡಿಯಾಗಬಾರದು ಎಂದು ಸ್ಪಷ್ಟಪಡಿಸಲಾಗಿದೆ. ಧಾರ್ಮಿಕ ಲಾಂಛನ ಧರಿಸಿದ್ದಾರೆ ಎಂಬ ಕಾರಣಕ್ಕೆ ಯಾವುದೇ ವಿದ್ಯಾರ್ಥಿಯನ್ನು ತರಗತಿ, ಪರೀಕ್ಷೆ ಅಥವಾ ಶೈಕ್ಷಣಿಕ ಚಟುವಟಿಕೆಗಳಿಂದ ಹೊರಗಿಡುವಂತಿಲ್ಲ. ಯಾವುದೇ ಧಾರ್ಮಿಕ ಸಂಕೇತಗಳನ್ನು ಧರಿಸುವಂತೆ ಅಥವಾ ಧರಿಸಿದವರನ್ನು ಅದನ್ನು ತೆಗೆಯುವಂತೆ ಒತ್ತಾಯಿಸುವಂತಿಲ್ಲ ಎಂದು ಸರ್ಕಾರ ಹೇಳಿದೆ.

ಶಿಕ್ಷಣ ಸಚಿವರ ಸಮರ್ಥನೆ
ಈ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ ಶಾಲಾ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ (Hijab) ಧರಿಸಲು ಅನುಮತಿ ಇರಲಿದೆ. ಜೊತೆಗೆ ಎಲ್ಲಾ ಎಲ್ಲ ಧರ್ಮಗಳ ಧಾರ್ಮಿಕ ಗುರುತುಗಳಿಗೆ ಅವಕಾಶ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Karnataka Government) ತಿಳಿಸಿದ್ದಾರೆ.
“ಕಳೆದ ಏಪ್ರಿಲ್‌ನಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿದ ಘಟನೆ ನಡೆದಿತ್ತು, ಇದರಿಂದ ಪೋಷಕರು ಮತ್ತು ಸಂಘಟನೆಗಳಿಗೆ ನೋವಾಗಿತ್ತು. ಇಂತಹ ಸಣ್ಣಪುಟ್ಟ ಧಾರ್ಮಿಕ ಆಚರಣೆಗಳು ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕೆ ಅಡ್ಡಿಯಾಗಬಾರದು ಎಂಬುದು ಸರ್ಕಾರದ ಉದ್ದೇಶ,” ಎಂದು ತಿಳಿಸಿದ್ದಾರೆ. ಸಂವಿಧಾನದ ಸಮಾನತೆ ಮತ್ತು ಜಾತ್ಯತೀತ ತತ್ವಗಳ ಅಡಿಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಪ್ರತಿಪಾದಿಸಿದರು.

ಸರ್ಕಾರದ ಈ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ಮತ್ತು ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಿಜೆಪಿ ಶಾಸಕ ಭರತ್ ಶೆಟ್ಟಿ: “ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಲು ಈ ರೀತಿ ಮಾಡುತ್ತಿದೆ. ಹಿಜಾಬ್‌ಗೆ ಅವಕಾಶ ನೀಡುವುದಾದರೆ, ಹಿಂದೂ ವಿದ್ಯಾರ್ಥಿಗಳಿಗೂ ಕೇಸರಿ ಶಾಲು ಧರಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ವಿಎಚ್‌ಪಿ ನಾಯಕ ಗಿರೀಶ ಭಾರದ್ವಾಜ್ ಅವರು,  “ಹೈಕೋರ್ಟ್ ಈಗಾಗಲೇ ಹಿಜಾಬ್ ಕಡ್ಡಾಯವಲ್ಲ ಎಂದು ತೀರ್ಪು ನೀಡಿದೆ ಮತ್ತು ವಿಷಯ ಸುಪ್ರೀಂ ಕೋರ್ಟ್‌ನಲ್ಲಿದೆ. ಇಂತಹ ಸಂದರ್ಭದಲ್ಲಿ ವಿವಾದವನ್ನು ಮತ್ತೆ ಜೀವಂತಗೊಳಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ,” ಎಂದು ಆಕ್ಷೇಪಿಸಿದ್ದಾರೆ.
2022ರಲ್ಲಿ ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದವು ಇಡೀ ರಾಜ್ಯಕ್ಕೆ ಹರಡಿತ್ತು. ಅಂದಿನ ಸರ್ಕಾರವು ಸಮವಸ್ತ್ರದ ಜೊತೆಗೆ ಯಾವುದೇ ಧಾರ್ಮಿಕ ಗುರುತುಗಳನ್ನು ಧರಿಸುವುದನ್ನು ನಿಷೇಧಿಸಿತ್ತು. ಆದರೆ ಪ್ರಸ್ತುತ ಸರ್ಕಾರವು ಕೇಂದ್ರೀಯ ವಿದ್ಯಾಲಯಗಳ (Kendriya Vidyalayas) ಮಾದರಿಯನ್ನು ಅಧ್ಯಯನ ಮಾಡಿ, ಶೈಕ್ಷಣಿಕ ಶಿಸ್ತಿನ ಜೊತೆಗೆ ಸಾಂಸ್ಕೃತಿಕ ವೈವಿಧ್ಯತೆಯನ್ನು ಗೌರವಿಸುವ ನಿಟ್ಟಿನಲ್ಲಿ ಈ ಹೊಸ ಮಾರ್ಗಸೂಚಿಯನ್ನು ಜಾರಿಗೆ ತಂದಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ