Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಿಕ್ಷಣದ ಪ್ರಯೋಗಾಲಯವೇ ರಂಗಭೂಮಿ : ಬಾಬಾ ಸಾಹೇಬ ಕಾಂಬಳೆ

ಬೆಳಗಾವಿ : ಶುಕ್ರವಾರದಂದು ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಕನ್ನಡ ಸಂಘ ಹಾಗೂ ಐಕ್ಯೂಎಸಿ ಅಡಿಯಲ್ಲಿ ಪಠ್ಯದಲ್ಲಿ ರಂಗ ಚಟುವಟಿಕೆಗಳು - ಶಿಕ್ಷಣದಲ್ಲಿ ರಂಗಭೂಮಿಯ ಮಹತ್ವತೆ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಹಿರಿಯ ರಂಗಕರ್ಮಿ, ನಟ, ನಿರ್ದೇಶಕ ಹಾಗೂ ನಾಟಕ ರಚನಾಕಾರ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಬಾಬಾಸಾಹೇಬ ಕಾಂಬಳೆ ಅವರು,
ಸ್ವಾತಂತ್ರ್ಯ ಚಳವಳಿಗಳಿಗೆ ರಂಗಭೂಮಿ ಅಪಾರ ಕೊಡುಗೆಯನ್ನು ನೀಡಿದೆ. ರಂಗಭೂಮಿಯಲ್ಲಿ ಸತ್ಯದ ಹುಡುಕಾಟ ನಡೆಯುತ್ತಿರುತ್ತದೆ. ಈ ಹುಡುಕಾಟದ ಮಾರ್ಗವೇ ಶಿಕ್ಷಣ. ಶಿಕ್ಷಣ ಮತ್ತು ರಂಗಭೂಮಿ ಮೂಲಕ ಕ್ರಾಂತಿ ಮಾಡಿ ಪರಿಸರ ಸಂರಕ್ಷಣೆ ಮಾಡಲು ಸಾಧ್ಯವಿದೆ. ನಶಿಸಿ ಹೋಗುತ್ತಿರುವ ರಂಗಭೂಮಿ ಯ ಉಳಿಯುವಿಕೆ ಶಿಕ್ಷಣ ರಂಗದಲ್ಲಿದೆ. ರಂಗಕಲೆ ಎನ್ನುವುದು ಕೇವಲ ವೇದಿಕೆ ಮೇಲೆ ಸಂಭಾಷಣೆ ಹೇಳುವುದಲ್ಲ. ಅದು ಜೀವನದ ಎಲ್ಲ ಕ್ಷೇತ್ರದಲ್ಲಿ ಆವರಿಸಿರುತ್ತದೆ. ಶಿಕ್ಷಕರು ಪ್ರಪಂಚದ ಎಲ್ಲ ಸ್ತರದ ವ್ಯಕ್ತಿಗಳೊಡನೆ ಸಂವಾದಿಸಬೇಕು, ಆಳವಾದ ಅಧ್ಯಯನ ವ್ಯಾಪಕವಾದ ಸಂಚಾರ ಮಾಡ ಬೇಕು . ಶಿಕ್ಷಣದ ಮೂಲ ತತ್ವ ಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುವ ಅದ್ಭುತ ಶಕ್ತಿ ರಂಗಭೂಮಿಗೆ ಇದೆ. ರಂಗಭೂಮಿ ಶಿಕ್ಷಕರ ನಿಜವಾದ ಬದುಕಾಗಿದೆ. ರಂಗಭೂಮಿ ನಿಡುವ ಅಪಾರವಾದ ಸಾಹಿತ್ಯ ಹಾಗೂ ಅನುಭವವನ್ನು ಸ್ವೀಕರಿಸಿ ಒಬ್ಬ ಪರಿಪೂರ್ಣ ಶಿಕ್ಷಕರಾಗಬೇಕೆಂದು ಹೇಳಿದರು.

ಶಿಕ್ಷಕರಲ್ಲಿ ಅಂತರ್ಗತವಾಗಿರುವ ಕಲಾತ್ಮಕವಾಗಿರುವ ಪ್ರತಿಭೆಯನ್ನು ಪ್ರದರ್ಶಿಸಿದೇ ಇದ್ದರೆ ಅವರ ಜೀವನ ಕಾರ್ಯ ನಿರರ್ಥಕವಾಗುತ್ತದೆಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯೆ, ರಂಗಕರ್ಮಿ ಹಾಗೂ ಲೇಖಕಿ ಡಾ.ನಿರ್ಮಲಾ ಜಿ ಬಟ್ಟಲ ಅವರು, ಬಾಬಾ ಸಾಹೇಬ ಕಾಂಬಳೆ ಅವರ ಜೀವನ ಹಾಗೂ ಸಾಧನೆಗಳನ್ನು ಮುಕ್ತವಾಗಿ ಪ್ರಶಂಸಿಸಿದರು. ನಮ್ಮ ಅಂತರಂಗ ಹಾಗೂ ಬಹಿರಂಗ ಪರಿಶುದ್ಧಗೊಳ್ಳಬೇಕಾದರೆ ರಂಗಭೂಮಿಯ ಜ್ಞಾನ ಅವಶ್ಯಕ. ಶಿಕ್ಷಕರಲ್ಲಿ ಭಾಷೆ ಹಾಗೂ ಭಾವ ಪ್ರಕಾಶಿಕೆ ಸುಂದರಗೊಳ್ಳಬೇಕಾದರೆ ಶಿಕ್ಷಣದಲ್ಲಿ ರಂಗಭೂಮಿ ಮಹತ್ವ ಹೆಚ್ಚಾಗಿದೆಂದು ಹೇಳಿದರು.

ಬಾಬಾಸಾಹೇಬ ಕಾಂಬಳೆ ಅವರನ್ನು ಮಹಾವಿದ್ಯಾಲಯದ ಪರವಾಗಿ ಸನ್ಮಾನಿಸಲಾಯಿತು.
ಸಂಜೆಯವರೆಗೆ ಡಾ.ನಿರ್ಮಲಾ ಬಟ್ಟಲ ರವರ ನೇತೃತ್ವದಲ್ಲಿ ರಂಗಭೂಮಿ ಕುರಿತು ಕಾರ್ಯಾಗಾರ ನಡೆಯಿತು.
ಪ್ರಶಿಕ್ಷಣಾರ್ಥಿ ಮುಸ್ಕಾನ ಲಾಡನ್ನವರು ಪ್ರಾರ್ಥಿಸಿದರು, ಡಾ.ಎಸ್.ವಿ.ವಾಲಿಶೆಟ್ಟಿ ಸ್ವಾಗತಿಸಿ ಪರಿಚಯಿಸಿದರು. ಪ್ರೊ.ಮಂಜುನಾಥ ಕಲಾಲ ನಿರೂಪಿಸಿದರು. ಪ್ರೊ.ಸೋನಲ್ ಚಿನಿವಾಲ, ಡಾ. ಗೀತಾ ದಯಣ್ಣವರ, ಪ್ರೊ. ಸುನಿಲ ಪಾಣಿ, ಪ್ರೊ.ಮಲ್ಲಿಕಾರ್ಜುನ ಜಮಖಂಡಿ ಹಾಗೂ ದ್ವಿತೀಯ , ನಾಲ್ಕನೇ ಸೆಮಿಸ್ಟರ್ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ
ಎಂ.ಇಡಿ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ