Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿವಿಲ್ ವಾಜ್ಯಗಳಲ್ಲಿ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ:ಪೊಲೀಸ್ ಮಹಾನಿರ್ದೇಶಕರ ಸೂಚನೆ

ಬೆಂಗಳೂರು: ಸಿವಿಲ್ ವಾಜ್ಯಗಳಲ್ಲಿ , ಪೊಲೀಸರ ಹಸ್ತಕ್ಷೇಪ ಇನ್ನೂ ಮುಂದುವರಿದ ಹಿನ್ನೆಲೆಯಲ್ಲಿ, ಪೊಲೀಸ್ ಮಹಾನಿರ್ದೇಶಕ ಡಾ. ಎಂ ವಿ ಸಲೀಂ ಅವರು ರಾಜ್ಯದ ಎಲ್ಲಾ ಪೊಲೀಸ್‌ ಅಧಿಕಾರಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಅನಾವಶ್ಯಕವಾಗಿ ತಲೆ ಹಾಕುತ್ತಿರುವ ಕುರಿತು ಹಲವು ಬಾರಿ ಗಂಭೀರ ಆರೋಪಗಳು ಕೇಳಿಬಂದಿವೆ. ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳು ಹಲವು ತೀರ್ಪುಗಳನ್ನು ನೀಡುತ್ತಾ, ಸಿವಿಲ್ ಹಕ್ಕುಗಳ ವಿಚಾರದಲ್ಲಿ ನಿರ್ಣಯ ಮಾಡಲು ಪೊಲೀಸ್‌ ಇಲಾಖೆಗೂ ಅಧಿಕಾರವಿಲ್ಲ, ಕೇವಲ ಸಿವಿಲ್ ನ್ಯಾಯಾಲಯವೇ ತೀರ್ಮಾನಿಸಬಲ್ಲದು ಎಂದು ಸ್ಪಷ್ಟಪಡಿಸಿದ್ದವು.

ಮಾರ್ಗಸೂಚಿಯ ಪ್ರಕಾರ, ಕರಾರು ಉಲ್ಲಂಘನೆ, ಬಾಡಿಗೆ-ಮಾಲೀಕನ ವ್ಯಾಜ್ಯ, ಆಸ್ತಿ ಮಾಲೀಕತ್ವ-ಸ್ವಾಧೀನ ಹಕ್ಕುಗಳು, ಪೂಜಾ ಹಕ್ಕುಗಳ ವಿವಾದಗಳು, ವಾಣಿಜ್ಯ ವ್ಯಾಜ್ಯಗಳು ಮುಂತಾದವು ಕ್ರಿಮಿನಲ್ ಸ್ವರೂಪವಿಲ್ಲದ ಪ್ರಕರಣಗಳಲ್ಲಿ ಪೊಲೀಸರು ಮಧ್ಯ ಪ್ರವೇಶಿಸಬಾರದು. ಕಾನೂನು ಮತ್ತು ಸುವ್ಯವಸ್ಥೆ ಹದಗೆಡುವ ಪರಿಸ್ಥಿತಿ ಎದುರಾಗಿದಷ್ಟೇ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಮಾರ್ಗಸೂಚಿ ಹೇಳಿದೆ.

ದೂರಿದಾರರಿಗೆ ಸೂಕ್ತ ಸಿವಿಲ್ ನ್ಯಾಯಾಲಯವನ್ನು ಸಂಪರ್ಕಿಸಲು ಸೂಚಿಸಬೇಕು. ಮತ್ತಷ್ಟು ಮುಖ್ಯವಾಗಿ, ಯಾವುದೇ ಪೊಲೀಸ್ ಅಧಿಕಾರಿ ಸಿವಿಲ್ ವಿವಾದದಲ್ಲಿ ಒಂದು ಪಕ್ಷಕ್ಕೆ ಬೆಂಬಲ ನೀಡಿ ಅನ್ಯಾಯ ಮಾಡಿದರೆ, ಅದನ್ನು “ಅಪರಾಧಿಕ ದುರ್ನಡತೆ” ಎಂದು ಪರಿಗಣಿಸಲಾಗುವುದು ಮತ್ತು ಇಲಾಖೆ ಅವರ ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆ ಎಚ್ಚರಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!