Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದ ತಮ್ಮನನ್ನೇ ಹತ್ಯೆಗೈದ ಅಣ್ಣ

Advertisement
ಬೆಳಗಾವಿ: ಮೂಡಲಗಿ ತಾಲೂಕು ಕಲ್ಲೋಳಿ ಗ್ರಾಮದಲ್ಲಿ ತಮ್ಮನನ್ನು ಸ್ವತಃ ಅಣ್ಣನೆ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ವಿಠಲ್ ಚವಾಣ ಕೊಲೆಯಾದವ. ಭೀಮಪ್ಪ ಚವಾಣ ಕೊಲೆ ಮಾಡಿರುವ ಆರೋಪಿ. ಅಣ್ಣ ಭೀಮಪ್ಪನ ಮಗಳು ಪಕ್ಕದ ಊರಿನ ಯುವಕನನ್ನು ಪ್ರೀತಿಸಿದ್ದಳು. ಸರಕಾರಿ ನೌಕರಿಯಲ್ಲಿದ್ದಾನೆ ಎಂದು ನಂಬಿಸಲಾಗಿತ್ತು. ಆದರೆ ಮದುವೆಯಾದ ಮೂರು ತಿಂಗಳ ನಂತರ ಪತಿ ಸರಕಾರಿ ನೌಕರಿಯಲ್ಲಿ ಇಲ್ಲ, ಸುಳ್ಳು ಹೇಳಿ ಮದುವೆ ಆಗಿರುವುದು ಗೊತ್ತಾಗಿದೆ. ಇದರಿಂದ ನೊಂದು ಆಕೆ ಪತಿಯ ಮನೆ ಬಿಟ್ಟು ತವರಿಗೆ ಬಂದಿದ್ದಳು. ಆದರೆ, ತವರಿಗೆ ಬಂದಿದ್ದ ಮಗಳ ಬಗ್ಗೆ ಆಕೆಯ ಚಿಕ್ಕಪ್ಪ ವಿಠಲ್ ಊರಲ್ಲಿ ಅವಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ. ತನ್ನ ಅಣ್ಣನ ಮಗಳು ಗರ್ಭಿಣಿಯಾಗಿ ಬಂದಿದ್ದಾಳೆ ಎಂದು ಅಪಪ್ರಚಾರ ಮಾಡಲು ಆರಂಭಿಸಿದ್ದ. ಭೀಮಪ್ಪ ಸಹೋದರನ ಜೊತೆ ಜಗಳವಾಡಿ ಎಚ್ಚರಿಕೆಯನ್ನು ನೀಡಿದ್ದ. ಆದರೂ ತಮ್ಮ ವಿಠಲ್ ಅಪಪ್ರಚಾರ ನಿಲ್ಲಿಸಿರಲಿಲ್ಲ. ಕೆಲದಿನಗಳ ಹಿಂದೆ ಭೀಮಪ್ಪ ಗ್ಯಾಂಗ್ ಕಟ್ಟಿಕೊಂಡು ಬಂದು ವಿಠಲ್ ನನ್ನು ರಾಡಿನಿಂದ ಹೊಡೆದಿದ್ದಾನೆ. ತೀವ್ರ ಹಲ್ಲೆಗೊಳಗಾಗಿದ್ದ ವಿಠಲ್ ನನ್ನು ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭೀಮಪ್ಪ ಮತ್ತು ಲಕ್ಷ್ಮಣ ಪಡತಾರೆ ವಿರುದ್ಧ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಅವರನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ