Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೇವಸ್ಥಾನ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಬಂಧಿಸಿದ ಪೊಲೀಸರು

ಬೆಳಗಾವಿ: ದೇವಸ್ಥಾನಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿರುವ ಹಾರೂಗೇರಿ ಪೊಲೀಸರು ಒಟ್ಟು 11.52 ಲಕ್ಷ ರೂ. ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ದಿನಾಂಕ 09/10/2024 ರಂದು ಅನೀಲ ಶಂಕರ ದತ್ತವಾಡೆ, ಸಾ.ಅಳಗವಾಡಿ, ತಾ.ರಾಯಬಾಗ, ಇವರು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಕೊಟ್ಟಿದ್ದ ದೂರು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದರು.

ಕಳ್ಳರು ದಿನಾಂಕ: 05/10/2024 ರಂದು 1 ಗಂಟೆಯಿಂದ 6 ಗಂಟೆಯ ನಡುವಿನ ವೇಳೆಯಲ್ಲಿ ಅಳಗವಾಡಿ ಗ್ರಾಮದ ಹುಣಸಿಕೋಡಿ ತೋಟದಲ್ಲಿರುವ ಏಳು ಮಕ್ಕಳ ತಾಯಿ ದೇವಸ್ಥಾನದ ಬಾಗಿಲಿಗೆ ಹಾಕಿದ್ದ ಕೀಲಿ ಮುರಿದು ಗುಡಿಯ ಒಳಗಡೆ ಹೊಕ್ಕು ಮೈಮೇಲೆ ಇದ್ದ 1) ಗಂಟನ್ ಗುಳದಾಳಿ ಒಂದು 35 ಗ್ರಾಂ ಅ.ಕಿ.1.26.000/- ರೂಪಾಯಿ. 2) ಬೋರಮಾಳ ಒಂದು 10 ಗ್ರಾಂ ಅಂದಾಜು ಕಿಮ್ಮತ್ತು 36,000/-. 3) ಸಣ್ಣ ಗುಳದಾಳಿ 10 ಗ್ರಾಂ ಅಂದಾಜು ಕಿಮ್ಮತ್ತು 36,000/- 4) ಕಿವಿಯಲ್ಲಿರುವ ಹೂವು ಮತ್ತು ಜುಮಕಿ 5 ಗ್ರಾಂ, ಅಂದಾಜು ಕಿಮ್ಮತ್ತು 18.000/- ರೂಪಾಯಿ. 5) ಬೆಳ್ಳಿ ಗುಂಡಗಡಿಗೆ ಒಂದು 6) ಬೆಳ್ಳಿ ಕಿರೀಟ. 7) ಬೆಳ್ಳಿ ಮೂಗುತಿ ಒಂದು ಒಟ್ಟು ಬೆಳ್ಳಿ ಒಡವೆಗಳ ಅಂದಾಜು ಮೌಲ್ಯ 14.000/- ರೂ. ಹೀಗೆ ಒಟ್ಟು 2,16,000/- ರೂಪಾಯಿ ಕಿಮ್ಮತ್ತಿನ ಬಂಗಾರ ಮತ್ತು 14,000/- ರೂಪಾಯಿ ಕಿಮ್ಮತ್ತಿನ ಬೆಳ್ಳಿ ಒಡವೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ದೂರು ನೀಡಲಾಗಿತ್ತು. ಈ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿರುವ ಹಾರುಗೇರಿ ಪೊಲೀಸರು ನಾಲ್ವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ