Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೀರಿನ ಪೈಪ್ ದುರಸ್ತಿಗೆ ಬಂದ ಕಾರ್ಮಿಕನ ಮೇಲೆ ಹೆಬ್ಬಾವು ದಾಳಿ: 10 ನಿಮಿಷ ಬಿಗಿಯಾಗಿ ಸುತ್ತಿಕೊಂಡ ಹೆಬ್ಬಾವು

ಕೋಟಾ: ರಾಜಸ್ಥಾನದ ಕೋಟಾದ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಸುಮಾರು 12 ಅಡಿ ಉದ್ದದ ಹೆಬ್ಬಾವಿನ ಬಿಗಿ ಹಿಡಿತಕ್ಕೆ ಸಿಲುಕಿ ಒದ್ದಾಡಿದ ಆತಂಕಕಾರಿ ಘಟನೆ ಸೋಮವಾರ ನಡೆದಿದೆ.

ಕೃಷ್ಣ ಇಂಜಿನಿಯರಿಂಗ್ ಗುತ್ತಿಗೆ ಕಂಪನಿಯಲ್ಲಿ ಕೆಲಸ ಮಾಡುವ ನಂದ್‌ ಸಿಂಗ್ (53) ಎಂಬ ಕಾರ್ಮಿಕ ಬೆಳಿಗ್ಗೆ ಸುಮಾರು 11:30 ರ ಸುಮಾರಿಗೆ ವಿದ್ಯುತ್ ಸ್ಥಾವರದ ಯೂನಿಟ್-5 ರಲ್ಲಿ ಪೈಪ್‌ಲೈನ್ ದುರಸ್ತಿಗೆ ಹೋಗಿದ್ದರು. ಈ ಪ್ರದೇಶದಲ್ಲಿ ದಟ್ಟವಾಗಿ ಬೆಳೆದಿದ್ದ ಹುಲ್ಲು ಮತ್ತು ಪೊದೆಗಳ ನಡುವೆ ಅಡಗಿದ್ದ ಹೆಬ್ಬಾವು ದಿಢೀರನೆ ಅವರ ಮೇಲೆ ಎರಗಿ, ಅವರ ಕಾಲುಗಳನ್ನು ಸುತ್ತಿಕೊಂಡು ಬಲವಾಗಿ ಬಿಗಿ ಹಿಡಿದುಕೊಂಡಿದೆ.

ಹೆಬ್ಬಾವಿನ ಹಿಡಿತ ಎಷ್ಟು ಪ್ರಬಲವಾಗಿತ್ತೆಂದರೆ, ನಂದ್‌ ಸಿಂಗ್ ಅವರು ತಮ್ಮ ಕಾಲನ್ನು ಬಿಡಿಸಿಕೊಳ್ಳಲು ಸುಮಾರು 10 ನಿಮಿಷಗಳ ಕಾಲ ಹೋರಾಡಿದರು, ಆದರೆ ಹೆಬ್ಬಾವು ಅವರನ್ನು ಬಿಡಲಿಲ್ಲ. ನಂತರ ಅವರು ನೋವಿನಿಂದ ಅವರು ಜೋರಾಗಿ ಕಿರುಚಿಕೊಂಡಿದ್ದಾರೆ.

ನಂದ ಸಿಂಗ್ ಅವರ ಕಿರುಚಾಟ ಕೇಳಿದ ಸಮೀಪದ ಇತರ ಕಾರ್ಮಿಕರು ತಕ್ಷಣ ಸ್ಥಳಕ್ಕೆ ಧಾವಿಸಿದರು. ಅವರು ಸುಮಾರು 10 ನಿಮಿಷಗಳ ಕಾಲ ಕೋಲುಗಳು ಮತ್ತು ಹಗ್ಗಗಳನ್ನು ಬಳಸಿ ಹೆಬ್ಬಾವಿನ ಬಿಗಿ ಹಿಡಿತದಿಂದ ನಂದ ಸಿಂಗ್‌ ಅವರನ್ನು ಪಾರು ಮಾಡಿದರು. ರಕ್ಷಣೆ ಮಾಡಿದ ನಂತರ, ಜನರು ಹೆಬ್ಬಾವಿಗೆ ದೊಣ್ಣೆಗಳಿಂದ ಹೊಡೆದಿದ್ದು, ಅದು ಗಾಯಗೊಂಡು ಅರೆ-ಪ್ರಜ್ಞಾವಸ್ಥೆಯಲ್ಲಿತ್ತು.
ಗಂಭೀರವಾಗಿ ಗಾಯಗೊಂಡ ನಂದ್‌ ಸಿಂಗ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಎಂ.ಬಿ.ಎಸ್. ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಈ ಘಟನೆಯ ದೃಶ್ಯಾವಳಿಗಳ ವೀಡಿಯೋ ವೈರಲ್ ಆಗಿದೆ.

ಕೋಟಾ ಸೂಪರ್ ಥರ್ಮಲ್ ಪವರ್ ಸ್ಟೇಷನ್ ಸ್ಥಾವರದ ಬಿಳಿ ನೀರಿನ ಪೈಪ್‌ಲೈನ್ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ, ಅದನ್ನು ರಿಪೇರಿ ಮಾಡಲು ಹೋದಾಗ, ಅಲ್ಲೇ ಇದ್ದ ಹೆಬ್ಬಾವು ನನ್ನ ಮೇಲೆ ದಾಳಿ ಮಾಡಿದೆ. ಕಾಲನ್ನು ಬಿಗಿಯಾಗಿ ಹಿಡಿದು ಸುಮಾರು 10 ನಿಮಿಷಗಳ ಕಾಲ ಉಸಿರುಗಟ್ಟಿಸಿದೆ. ನಂತರ ನನ್ನ ಸಹೋದ್ಯೋಗಿಗಳು ಬಂದು ಬಿಡಿಸಿದ್ದಾರೆ” ಎಂದು ನಂದ್ ಸಿಂಗ್ ಹೇಳಿದ್ದಾರೆ.
ಸ್ಥಾವರದಲ್ಲಿ ಭದ್ರತಾ ವ್ಯವಸ್ಥೆಗಳ ಕೊರತೆ
ಉಷ್ಣ ವಿದ್ಯುತ್ ಸ್ಥಾವರದ ಸುತ್ತ ದಟ್ಟವಾದ ಅರಣ್ಯವಿರುವುದರಿಂದ ಈ ಹಿಂದೆ ಹಲವು ಬಾರಿ ಚಿರತೆ, ಕರಡಿ ಮತ್ತು ಇತರ ವನ್ಯಜೀವಿಗಳು ಕಾಣಿಸಿಕೊಂಡಿವೆ. ಆದರೆ ಇಲ್ಲಿ ಯಾವುದೇ ನಿರ್ದಿಷ್ಟ ಸುರಕ್ಷತಾ ವ್ಯವಸ್ಥೆಗಳನ್ನು ಮಾಡಿಲ್ಲ ಎಂದು ಹಲವು ಕಾರ್ಮಿಕರು ದೂರಿದ್ದಾರೆ. ಹಾಗೂ ಕೂಡಲೇ ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿಯ ಬಂಧನಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರಬೆಳಗಾವಿಗೆ ಮತ್ತೆ ಅನ್ಯಾಯ : ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಸಿದ್ಧತೆ : ಪ್ರಯಾಣದ ಅವಧಿ 16 ತಾಸುಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನʼಪ್ರತಿಭಟನೆ ಪ್ರತಿಧ್ವನಿಸಲಿಲ್ಲ….ʼ : ಕಾಂಗ್ರೆಸ್‌ ಸಂಸದ ಶಶಿ ತರೂರ ಹೇಳಿಕೆಗೆ ಕಾಂಗ್ರೆಸ್‌ ನಾಯಕ ವೇಣುಗೋಪಾಲ ಎಚ್ಚರಿಕೆಜೈಲಿನಲ್ಲಿದ್ದ ಪ್ರಿಯಕರನ ಭೇಟಿಗೆ ಬಂದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಸಿಕ್ಕಿತು 10 ಜೀವಂತ ಗುಂಡುಗಳು….!ಭಾರತದಲ್ಲಿ ʼಏಜ್ ವೆರಿಫಿಕೇಷನ್ʼ ಫೀಚರ್‌ ಪರೀಕ್ಷೆಗೆ ಮುಂದಾದ ವಾಟ್ಸ್ಆ್ಯಪ್‌ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!