Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮದುವೆಯಾಗುವುದಾಗಿ ಹೇಳಿದ ಅತ್ಯಾಚಾರಿಗೆ ಕೊನೆಗೂ ಶಿಕ್ಷೆ ಪ್ರಕಟ : ಐದು ವರ್ಷಗಳ ಪ್ರೀತಿ-ಪ್ರೇಮ ಬರೀ ವಂಚನೆ...

ಬೆಳಗಾವಿ : ಐದು ವರ್ಷಗಳ ಕಾಲ ಪ್ರೀತಿ- ಪ್ರೇಮ ಎಂದು ನಟನೆ ಮಾಡಿದ್ದ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದೆ. ನಾನು ನಿನ್ನನ್ನು ಬಹಳ ಪ್ರೀತಿಸುತ್ತೇನೆ, ನಿನ್ನನ್ನೇ ನಾನು ಮದುವೆಯಾಗುತ್ತೇನೆ ಎಂದು ಪುಸಲಾಯಿಸಿ ಅತ್ಯಾಚಾರ ಎಸಗಿದ ವ್ಯಕ್ತಿಗೆ ಇಲ್ಲಿಯ 8 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ 10 ವರ್ಷ ಜೈಲು ಶಿಕ್ಷೆ, ರೂ. 10,000 ದಂಡ ವಿಧಿಸಿ, ಕಲಂ 420 ಐಪಿಸಿ ಅಪರಾಧಕ್ಕಾಗಿ 3 ವರ್ಷ ಜೈಲು ಶಿಕ್ಷೆ, ರೂ. 5,000 ದಂಡ, ಕಲಂ 506 ಐಪಿಸಿ ಅಪರಾಧಕ್ಕೆ 6 ತಿಂಗಳ ಜೈಲು ಶಿಕ್ಷೆ, ರೂ.5,000 ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಾಗರಾಜ ಧನಪಾಲ ಕ್ಯಾಮನ್ನವರ ಶಿಕ್ಷೆಗೊಳಗಾದ ಆರೋಪಿ. ಈತ ಮತ್ತು ದೂರುದಾರ ಮಹಿಳೆ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆರೋಪಿ ರಜೆ ಮೇಲೆ ಊರಿಗೆ ಬಂದಾಗ ಇಬ್ಬರು ಸುತ್ತಾಡುತ್ತಿದ್ದರು. 2022 ರ ಏಪ್ರಿಲ್ 8 ರಂದು ಸಂಜೆ 7 ಗಂಟೆ ಸುಮಾರಿಗೆ ಆರೋಪಿ ಮಹಿಳೆಯನ್ನು ಪುಸಲಾಯಿಸಿ ಅಮಟೂರು ಗ್ರಾಮದ ಹರಿಜನಕೇರಿಗೆ ಹೊಂದಿಕೊಂಡ ದಕ್ಷಿಣ ಬದಿಯ ಅಮಟೂರ-ಬೇವಿನಕೊಪ್ಪ ರಸ್ತೆ ಬಳಿ ಜಮೀನಿಗೆ ಕರೆದುಕೊಂಡು ಹೋಗಿ ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ನಡೆಸಿದ್ದ. ಆಗ ದೂರುದಾರ ಮಹಿಳೆ ಇದು ಸರಿ ಅಲ್ಲ, ಇನ್ನು ನಮ್ಮಿಬ್ಬರದ್ದು ಮದುವೆಯಾಗಿರುವುದಿಲ್ಲ ಎಂದು ಹೇಳಿದರೂ ಆರೋಪಿ ಅವಳ ಮಾತು ಕೇಳದೆ ದೈಹಿಕ ಸಂಪರ್ಕ ನಡೆಸಿದ್ದ. ಅಲ್ಲದೆ ಆರೋಪಿ ರಜೆ ಮೇಲೆ ಊರಿಗೆ ಬಂದಾಗ ಪದೆ ಪದೇ ಹಲವು ಬಾರಿ ದೈಹಿಕ ಸಂಪರ್ಕ ನಡೆಸಿದ್ದ. ನಂತರ ಮಹಿಳೆ ಆರೋಪಿಗೆ ನನ್ನನ್ನು ಮದುವೆ ಮಾಡಿಕೋ ಎಂದು ಹಲವು ಬಾರಿ ಹೇಳಿದರೂ ಆತ ಅವಳ ಮಾತಿಗೆ ಬೆಲೆ ಕೊಡದೆ ನೀನು ಈ ಬಗ್ಗೆ ಯಾರಿಗಾದರೂ ಹೇಳಿದರೆ ನಿನಗೆ ಜೀವಂತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದ. ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ನಡೆಸಿ ಮದುವೆ ಮಾಡಿಕೊಳ್ಳದ ಮೋಸ ಮಾಡಿದ ಆರೋಪಿ, ಶಿಕ್ಷಾರ್ಹ ಅಪರಾಧ ಎಸಗಿದ್ದಾನೆ. ಈ ಬಗ್ಗೆ ಪ್ರಕರಣದ ವಿಚಾರಣೆ ನಡೆಸಿದ 8 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಶಿವಪುತ್ರ ದಿಂಡಲಕೊಪ್ಪ ಅವರು, ಆರೋಪ ಸಾಬೀತಾಗಿರುವುದರಿಂದ ಆರೋಪಿ ನಾಗರಾಜ ಧನಪಾಲ ಕ್ಯಾಮನ್ನವರನಿಗೆ 2025 ರ ಡಿಸೆಂಬರ್ 22ರಂದು ಶಿಕ್ಷೆ ಪ್ರಮಾಣ ನಿಗದಿಪಡಿಸಿ ತೀರ್ಪು ಪ್ರಕಟಿಸಿ, ಸಂತ್ರಸ್ತಗೆ ಪರಿಹಾರ ನೀಡಲು ಸೂಚಿಸಿದ್ದಾರೆ. ಸರಕಾರದ ಪರವಾಗಿ 8 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರಕಾರಿ ಅಭಿಯೋಜಕ ಕಿರಣ್ ಎಸ್. ಪಾಟೀಲ ವಾದ ಮಂಡಿಸಿದ್ದರು. ಅಧಿಕಾರಿಗಳಾದ ಕೆ.ಜಿ.ದೀಪು ಮತ್ತು ಶಿವಶಂಕರ ಆರ್. ಗಣಾಚಾರಿ, ಆರಕ್ಷಕ ವೃತ್ತ ನಿರೀಕ್ಷಕರು, ಬೈಲಹೊಂಗಲ ತನಿಖೆ ಕೈಗೊಂಡಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ