Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸರಕಾರದ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಹರಿಹರ (ದಾವಣಗೆರೆ): ಅಭಿವೃದ್ಧಿ ಹರಿಕಾರ ಸಿದ್ದರಾಮಯ್ಯ ಹಾಗೂ ಸಂಘಟನಾ ಚತುರ ಡಿ.ಕೆ.ಶಿವಕುಮಾರ್ ಸಾರಥ್ಯದ ರಾಜ್ಯ ಸರ್ಕಾರ ಚುನಾವಣೆ ಪೂರ್ವ ನೀಡಿದ್ದ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆಯುತ್ತಿದೆ. ಇದೀಗ ಸ್ವಾಭಿಮಾನದಿಂದ ಎರಡನೇ ವರ್ಷದ ಸಂಭ್ರಮಾಚರಣೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20 ರಂದು ಹೊಸಪೇಟೆಯಲ್ಲಿ ನಡೆಯಲಿರುವ 2ನೇ ವರ್ಷದ ಸಾಧನೆ ಸಮಾವೇಶ ಹಾಗೂ 1 ಲಕ್ಷ ಹಕ್ಕುಪತ್ರ ವಿತರಣೆ ಜೊತೆಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಕುರಿತಂತೆ ಹರಿಹರ ಹರಪನಹಳ್ಳಿ ಸರ್ಕಲ್ ನ ಕ್ರೀಡಾ ಕ್ಲಬ್ ನಲ್ಲಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಪ್ರಗತಿಯತ್ತ ಕರ್ನಾಟಕ ಹೆಸರಿನಲ್ಲಿ ನಡೆಯುತ್ತಿರುವ ಸಮಾವೇಶದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡ ನಮ್ಮದು ಸ್ವಾಭಿಮಾನಿ ಸರಕಾರವಾಗಿದೆ. 2028ರ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುವುದು ಗ್ಯಾರಂಟಿ, ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ನಮ್ಮ ಸರ್ಕಾರ ವಾರ್ಷಿಕ 52 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಪ್ರತಿ ಮನೆ ಮನೆಗೂ ನಮ್ಮ ಗ್ಯಾರಂಟಿ ಯೋಜನೆಗಳು ತಲುಪಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸರ್ಕಾರದ ಸಾಧನೆಯನ್ನು ಜನರ ಮುಂದೆ ಇಡುವ ಕೆಲಸವನ್ನು ಮಾಡಲಾಗುತ್ತಿದೆ. ಜೊತೆಗೆ, ತಲೆಮಾರುಗಳಿಂದಲೂ ನೆಲೆಯಿಲ್ಲದ ಹಾಗೂ ನಾಗರಿಕ ಮೂಲಸೌಕರ್ಯಗಳಿಂದ ವಂಚಿತರಾದ ಹಾಡಿ, ಹಟ್ಟಿ, ದೊಡ್ಡಿ, ತಾಂಡಾ ಹಾಗೂ ಕಾಲೋನಿಗಳ ಜನರಿಗೆ ಅವರು ವಾಸಿಸುತ್ತಿರುವ ಜಾಗದ ಮೇಲೆ ಹಕ್ಕು ನೀಡುವ ಮಹತ್ವದ ಉದ್ದೇಶದಿಂದ ಒಂದು ಲಕ್ಷ ಕುಟುಂಬಗಳಿಗೆ ಆಸ್ತಿ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಸ್ವಾತಂತ್ರ ಬಂದಾಗ ದೇಶದ ಪರಿಸ್ಥಿತಿ ಹೇಗಿತ್ತು. ಈಗ ಹೇಗಿದೆ. ಬ್ರಿಟಿಷರು ನಮಗೆ ಏನೂ ಬಿಟ್ಟುಹೋಗಿರಲ್ಲಿಲ್ಲ. ಶೂನ್ಯದಿಂದ ನಮ್ಮ ಭಾರತ ಇಂದು ಅಭಿವೃದ್ಧಿಯತ್ತ ಸಾಗುತ್ತಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಸುಭದ್ರ ಸರ್ಕಾರವನ್ನು ಕೊಟ್ಟಿದ್ದೀವಿ, ಅಭದ್ರತೆ ಇದ್ದಾಗ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ನಾವು ಅಧಿಕಾರಕ್ಕೆ ಬಂದಾಗಲೆಲ್ಲಾ ಜನ ಸಾಮಾನ್ಯರಿಗೆ ತಲುಪುವ ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಇದು ಬಡವರ ಬಗ್ಗೆ ಕಾಂಗ್ರೆಸ್ ಪಕ್ಷಕ್ಕಿರುವ ಬದ್ಧತೆ ಎಂದು ಸಚಿವರು ಹೇಳಿದರು.

* *ಯಾವ ಪುರುಷಾರ್ಥಕ್ಕೆ ಬಿಜೆಪಿ ಜನಾಕ್ರೋಶ*
ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಿಜೆಪಿಯವರಿಗೆ ಯಾವುದೇ ನೈತಿಕ ಹಕ್ಕಿಲ್ಲ. ನಾವು ಕಳೆದ ಎರಡು ವರ್ಷದಲ್ಲಿ, ಮತ್ತು ಅದಕ್ಕೂ ಮೊದಲು ಸಿದ್ದರಾಮಯ್ಯನವರ ಸರ್ಕಾರವಿದ್ದಾಗ ಸಾಕಷ್ಟು ಜನಪರ ಅಭಿವೃದ್ಧಿ ಕೆಲಸಗಳನ್ನು ಮಾಡಿ ತೋರಿಸಿದ್ದೇವೆ, ಬಿಜೆಪಿಯವರಿಗೆ ಹೇಳಿಕೊಳ್ಳಲು ಒಂದೇ ಒಂದು ಸಾಧನೆ ಇಲ್ಲ ಎಂದು ಸಚಿವರು ಕಿಡಿ ಕಾರಿದರು.

* *ಕಾರ್ಯಕ್ರಮದ ಯಶಸ್ಸಿಗೆ ಮನವಿ*
ಈ ಬೃಹತ್ ಸ್ವಾಭಿಮಾನಿ ಹಾಗೂ ಸಂಭ್ರಮಾಚರಣೆ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಹಕ್ಕುಪತ್ರ ವಿತರಣೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ಈ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರು ಪಾಲ್ಗೊಳ್ಳಲಿದ್ದು, ಎಲ್ಲರೂ ಸಮಾರಂಭದ ಯಶಸ್ಸಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು.

ಸಭೆಯಲ್ಲಿ ಮಾಜಿ ಶಾಸಕ ಎಸ್.ರಾಮಪ್ಪ, ಉಸ್ತುವಾರಿ ಕಾರ್ಯದರ್ಶಿ ಎಸ್.ವಿಜಯಕುಮಾರ, ನಂದಿಗಾವಿ ಶ್ರೀನಿವಾಸ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ, ಬ್ಲಾಕ್ ಅಧ್ಯಕ್ಷ ಎಲ್.ಬಿ.ಹನಮಂತಪ್ಪ, ಅಬೀದ್ ಅಲಿ, ಕೆಪಿಸಿಸಿ ಕಾರ್ಯದರ್ಶಿ ರೇವಣಸಿದ್ದಪ್ಪ, ನಿಖಿಲ್ ಕೊಂಡಜ್ಜಿ, ಇಮ್ತಿಯಾಜ್ ಜಲಾಲ, ಬಸವರಾಜ ಬೆಳ್ಳೊಡಿ, ಮುರಗೇಶಪ್ಪ, ತಾಹಿರ್, ಶ್ರೀಕಾಂತ ಟಿ, ಗೌಸಫಿರ್, ಶ್ರೀಕಾಂತ ಟಿ, ಸುನಿಲ್ ಎಚ್, ಕೆ.ಉಮರ್ ಬಾಷಾ, ಹಾಲೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

2ನೇ ವರ್ಷದ ಸಾಧನೆ ಸಮಾವೇಶ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಚಿವೆ:

ಹರಿಹರ (ದಾವಣಗೆರೆ): ಮೇ 20 ರಂದು ಹೊಸಪೇಟೆಯಲ್ಲಿ ನಡೆಯಲಿರುವ ಸರ್ಕಾರದ ಎರಡನೇ ವರ್ಷದ ಸಂಭ್ರಮಾಚರಣೆ ಹಾಗೂ ಹಕ್ಕುಪತ್ರ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹರಿಹರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಚಿವರು, ಆಹಾರ, ಔಷಧೋಪಚಾರ, ಕುಡಿಯುವ ನೀರು ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದು ತಿಳಿಸಿದರು.

ಫಲಾನುಭವಿಗಳನ್ನು ಮನೆಯ ಸದಸ್ಯರಂತೆ ಕಂಡು ಅವರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮ ಯಶಸ್ಸಿಗೆ ಪ್ರತಿಯೊಬ್ಬ ಅಧಿಕಾರಿಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಹೋಬಳಿ ಮಟ್ಟದಲ್ಲಿ ಅಧಿಕಾರಿಗಳನ್ನು ನಿಯೋಜಿಸಿ, ಫಲಾನುಭವಿಗಳಿಗೆ ನೆರವಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದರು.

* *ಪಕ್ಷಾತೀತವಾಗಿ ಕ್ಷೇತ್ರಗಳ ಅಭಿವೃದ್ಧಿ*
ಯಾವುದೇ ರಾಜಕಾರಣ ಮಾಡದೇ ಪಕ್ಷಾತೀತವಾಗಿ ಸಿದ್ದರಾಮಯ್ಯನವರ ಸರ್ಕಾರ ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡುತ್ತಿದೆ. ಬಹಳ ಕಾಳಜಿಯಿಂದ ಹರಿಹರ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಹರಿಹರ‌ ಕ್ಷೇತ್ರದ ಶಾಸಕ ಬಿ.ಪಿ.ಹರೀಶ್, ತಹಶೀಲ್ದಾರ್ ಬಸವರಾಜು, ತಾಲೂಕು ಪಂಚಾಯತ್ ಇಒ ಸುಮಲತಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಂದಗಾವಿ ಶ್ರೀನಿವಾಸ್ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ