Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿವಾದಕ್ಕೆ ವೇದಿಕೆಯಾಗುತ್ತ ಅಧಿವೇಶನ ?

 

ಬೆಳಗಾವಿ :
ಸೋಮವಾರ ಇಲ್ಲಿ ಆರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನದ ಮೊದಲ ದಿನವೇ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗುವ ಸಾಧ್ಯತೆ ಇದೆ.

ಸುವರ್ಣ ಸೌಧದಲ್ಲಿ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ವೀರ ಸಾವರ್ಕರ್ ಫೋಟೋ ಅಳವಡಿಸಲು ರಾಜ್ಯದ ಬಿಜೆಪಿ ಸರ್ಕಾರ ಮುಂದಾಗಿದೆ. 10 ಫೋಟೋಗಳನ್ನು ಹಾಕಲು ರಾಜ್ಯ ಸರಕಾರ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಅನಾವರಣ ಮಾಡಲಾಗುತ್ತದೆ ಎನ್ನಲಾಗಿದೆ.

ಈ ಮೊದಲಿನಿಂದಲೂ ವೀರ ಸಾವರ್ಕರ್ ಅವರನ್ನು ವಿರೋಧಿಸಿಕೊಂಡು ಬಂದಿರುವ ಕಾಂಗ್ರೆಸ್ ಅವರ ಫೋಟೋ ಹಾಕಲು ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಸೋಮವಾರ ಬೆಳಗ್ಗೆ 10:30 ಕ್ಕೆ ಮಹಾಪುರುಷರ ಫೋಟೋಗಳನ್ನು ಅನಾವರಣ ಮಾಡಲಾಗುತ್ತದೆ. ಅವು ಯಾವುವು ಎನ್ನುವುದು ಸೋಮವಾರ ಗೊತ್ತಾಗಲಿದೆ. ಚಳಿಗಾಲದ ಅಧಿವೇಶನಕ್ಕೆ ಅಗತ್ಯವಾದ ಪೂರಕ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಪ್ರತಿ ವರ್ಷ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಸಿದಂತೆ ಈ ಸಲವು ಕಲಾಪ ನಡೆಸಲಾಗುತ್ತದೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಸಿದ್ದು ಪ್ರತಿಕ್ರಿಯೆ : ಸಾವರ್ಕರ್ ಅವರ ಫೋಟೋ ಅನಾವರಣಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆಂದು ತಿಳಿಯಿತು. ಈ ಬಗ್ಗೆ ನೋಡಿ ಪ್ರತಿಕ್ರಿಯಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿ, ಸಾವರ್ಕರ್ ಮತ್ತು ಕರ್ನಾಟಕಕ್ಕೆ ಏನು ಸಂಬಂಧ ?
ಗಾಂಧಿ ಮತ್ತು ಅಂಬೇಡ್ಕರ್ ಫೋಟೋ ಅನಾವರಣ ಮಾಡುತ್ತಿವೆಂದು ಸ್ಪೀಕರ್ ಅವರ ಕಚೇರಿಯಿಂದ ಆಹ್ವಾನ ಬಂದಿದೆ. ಸಾವರ್ಕರ್ ಫೋಟೋ ಬಗ್ಗೆ ತಿಳಿದಿಲ್ಲ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ