Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಿಡಿಒಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಪಿಡಿಒಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು :
ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳಿಗೆ ರಾಜ್ಯವೃಂದಕ್ಕೆ ಸೇರಿಸುವ ತಿದ್ದುಪಡಿ ನಿಯಮಗಳ ಕರಡನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಬುಧವಾರ ಪ್ರಕಟಿಸಿದೆ.

ಇದರಿಂದ 1500 ಕ್ಕೂ ಹೆಚ್ಚು ಪಿಡಿಒಗಳಿಗೆ ಹಿರಿಯ ಪಿಡಿಒಗಳಾಗಿ ಬಡ್ತಿ ನೀಡುವುದಕ್ಕೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ಪಿಡಿಒ ಹುದ್ದೆ ಜಿಲ್ಲಾ ಮಟ್ಟದ ವೃಂದಕ್ಕೆ ಮಾತ್ರ ಸೀಮಿತವಾಗಿತ್ತು. ಈಗ ಅದನ್ನು ರಾಜ್ಯ ವೃಂದಕ್ಕೆ ಸೇರಿಸಬೇಕೆಂಬ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದಂತಾಗಿದೆ. ಅದಕ್ಕೆ ಪೂರಕವಾಗಿ ಕರ್ನಾಟಕ ಸಾಮಾನ್ಯ ಸೇವೆಗಳು (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ) (ವೃಂದ ಮತ್ತು ನೇಮಕಾತಿ) (ತಿದ್ದುಪಡಿ) ನಿಯಮಗಳು 2024 ನ್ನು ರೂಪಿಸಲಾಗಿದೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪೈಕಿ ಹಿರಿಯ ಪಿಡಿಒ ಹಾಗೂ ಪಿಡಿಒಗಳನ್ನು ರಾಜ್ಯ ವೃಂದಕ್ಕೆ ಸೇರಿಸಲಾಗಿದೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ ಒಂದು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಜಿಲ್ಲಾ ವೃಂದ ಎಂಬುದಾಗಿ ಪರಿಗಣಿಸಲಾಗಿದೆ. ಹಿರಿಯ ಪಿಡಿಒ ಮತ್ತು ಪಿಡಿಒಗಳನ್ನು ರಾಜ್ಯ ವೃಂದದ ಪಟ್ಟಿಯಲ್ಲಿ ಪತ್ರಾಂಕಿತ ವ್ಯವಸ್ಥಾಪಕರ (ಗೆಜೆಟೆಡ್ ಮ್ಯಾನೇಜರ್) ಹುದ್ದೆಯ ನಂತರ ಸೃಜಿಸಲಾಗಿದೆ.

ಪಿಡಿಒಗಳ ಪೈಕಿ 1500 ಜನರಿಗೆ ಬಡ್ತಿ ಮೂಲಕ ಮೂಲಕ ಹಿರಿಯ ಪಿಡಿಒ ಹುದ್ದೆ ನೀಡಲು ತಿದ್ದುಪಡಿ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. 4454 ಪಿಡಿಒ ಹುದ್ದೆ ಇರಲಿದ್ದು, ಶೇಕಡ 65 ರಷ್ಟನ್ನು ನೇರ ನೇಮಕಾತಿ ಮೂಲಕ ಮತ್ತು ಉಳಿದ ಶೇ 35 ರಷ್ಟನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ ಒಂದು ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ ಒಂದು ನೌಕರರಿಗೆ ಬಡ್ತಿ ನೀಡುವ ಮೂಲಕ ಭರ್ತಿ ಮಾಡಬೇಕಿದೆ.

1227 ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ ಒಂದು ಹುದ್ದೆ ಇರಲಿದೆ. ಅವುಗಳಲ್ಲಿ ಶೇ. 50ರಷ್ಟು ಬಡ್ತಿ ಮೂಲಕ ಭರ್ತಿ ಮಾಡಲು ನಿಯಮಗಳಲ್ಲಿ ಅವಕಾಶ ನೀಡಲಾಗುತ್ತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ