Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯೋತ್ಸವ ಅನುದಾನ ದುರ್ಬಳಕೆ : ಕನ್ನಡ ಸಂಘಟನೆಗಳ ಹೋರಾಟಕ್ಕೆ ಸಿಕ್ತು ಜಯ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದ 50 ಲಕ್ಷ ರೂ. ಅನುದಾನ ದುರ್ಬಳಕೆ ವಿರುದ್ಧ ಬೆಳಗಾವಿ ಕನ್ನಡ ಸಂಘಟನೆಗಳು ನಡೆಸಿದ್ದ ಹೋರಾಟಕ್ಕೆ ಜಯ ಸಿಕ್ಕಿದ್ದು ಈ ಹಣ ದುರ್ಬಳಕೆ

ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ರಾಜ್ಯ ಸರಕಾರ ಆದೇಶ ನೀಡಿದೆ.

ಸಮಾನ ಮನಸ್ಕ 12 ಕನ್ನಡ ಪರ ಸಂಘಟನೆಗಳು ಗಡಿ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ತ್ರಿಲೋಕಚಂದ್ರ ಅವರಿಗೆ ದೂರು ನೀಡಿದ್ದವು.

ಬೆಳಗಾವಿ ಜಿಲ್ಲಾಧಿಕಾರಿಗಳು ಈ ಅನುದಾನವನ್ನು
ಕನ್ನಡ ಸಂಘಟನೆಗಳ ಸಲಹೆ- ಸೂಚನೆಗಳನ್ನು ಧಿಕ್ಕರಿಸಿ, ಅನುದಾನ ಬಿಡುಗಡೆಯ ಸಂದರ್ಭದಲ್ಲಿ ಸರಕಾರ ವಿಧಿಸಿದ್ದ ಶರತ್ತುಗಳನ್ನು ಉಲ್ಲಂಘಸಿ ಕಾರ್ಯಕ್ರಮವನ್ನು
ಆಯೋಜಿಸಿದ್ದರು. ಈ ಕಾರ್ಯಕ್ರಮದ ಬಗ್ಗೆ ಬೆಳಗಾವಿ ಜನತೆಗೆ, ಮಾಧ್ಯಮಕ್ಕೆ ಎರಡು ದಿನಗಳ ಮೊದಲಷ್ಟೇ
ಗೊತ್ತಾಗಿತ್ತು. ಕಾರ್ಯಕ್ರಮಕ್ಕೆ ಸಚಿವರು, ಶಾಸಕರು ಬಂದಿರಲಿಲ್ಲ.

ಈ ದುರ್ಬಳಕೆಯನ್ನು ತೀವ್ರವಾಗಿ ವಿರೋಧಿಸಿದ್ದ ಸಮಾನ ಮನಸ್ಕ ಕನ್ನಡ ಸಂಘಟನೆಗಳು ರಾಜ್ಯ ಸರಕಾರಕ್ಕೆ ದೂರುಗಳ ಪ್ರವಾಹವನ್ನೇ ಹರಿಸಿದ್ದವು.

ದೂರುಗಳ ಬಗ್ಗೆ ಕ್ರಮ ಕೈಕೊಂಡ ರಾಜ್ಯ ಸರಕಾರಕ್ಕೆ ಸಮಾನ ಮನಸ್ಕ ಕನ್ನಡ ಸಂಘಟನೆಗಳು ಅಭಿನಂದನೆ ಮತ್ತು ಧನ್ಯವಾದ ತಿಳಿಸಿವೆ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ
ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ