Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಕ್ಫ್ : ಕಡತವೇ ನಾಪತ್ತೆ

ಸುವರ್ಣ ವಿಧಾನಸಭೆ: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ವಕ್ಸ್ ಆಸ್ತಿಗಳ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿ ಈ ಹಿಂದೆ ಉಪಲೋಕಾಯುಕ್ತರು ನಡೆಸಿದ್ದ ತನಿಖಾ ವರದಿ ಸೇರಿ ಇತರೆ ಮಾಹಿತಿಗಳ ಮುಖ್ಯ ಕಡತವೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ನಾಪತ್ತೆಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ವಕ್ಫ್‌ ಆಸ್ತಿಗಳ ದುರುಪಯೋಗಕ್ಕೆ ಸಂಬಂಧಿಸಿ ಅನ್ವರ್‌ ಮಾಣಿಪ್ಪಾಡಿ ವರದಿ ಅನ್ವಯ ಮಾಜಿ ಉಪಲೋಕಾಯುಕ್ತ ಎನ್.ಆನಂದ್ ತನಿಖಾ ವರದಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ 150 ಕೋಟಿ ರು. ಆಮಿಷ ಪ್ರಕರಣ ಕುರಿತು ಇಲಾಖೆಯಲ್ಲಿ ಕಡತ ತೆರೆಯಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಆಡಳಿತ ನಡೆಸಿದ ಅವಧಿಯಲ್ಲಿ ಕಡತಗಳನ್ನು ಆರಂಭಿಸಲಾಗಿತ್ತು. ಆದರೆ, ಈಗ ಆ ಕಡತವೇ ಕಾಣೆಯಾಗಿದೆ ಎಂದು ಮೂಲಗಳು ತಿಳಿಸಿವೆ.

2014 ಏ.28ರಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಕಡತಗಳನ್ನು ಸಚಿವರ ಅವಗಾಹನೆಗೆ ಮತ್ತು ಆದೇಶಕ್ಕೆ ಕಳುಹಿಸಿತ್ತು.ರಾಜ್ಯ ಅಲ್ಪಸಂಖ್ಯಾತರ ಆಯೋಗದ ವರದಿ ಮೇಲೆ ಸಚಿವ ಸಂಪುಟ ಸಭೆ ಕೆಲ ಸಲಹೆಗಳನ್ನು ಅನುಮೋದಿಸಿ ಅಡ್ವಕೆಟ್ ಜನರಲ್ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ಮಾಹಿತಿ ಕಡತದಲ್ಲಿ ಅಡಕವಾಗಿತ್ತು ಎನ್ನಲಾಗಿದೆ.

ಸಚಿವರ ಕಚೇರಿಗೆ ಹೋಗಿತ್ತು:

ಕಡತವನ್ನು ಹಿಂತಿರುಗಿಸುವಂತೆ ಇಲಾಖೆಯಿಂದ ಸಚಿವರ ಕಚೇರಿಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಆದರೆ ಇಲಾಖೆಗೆ ಕಡತ ಹಿಂತಿರುಗಿಸಿಲ್ಲ. ಇಲಾಖೆಯ ಹಿರಿಯ ಅಧಿಕಾರಿಗಳು ಖುದ್ದಾಗಿ ಸಚಿವರ ಕಚೇರಿಗೆ ತೆರಳಿ ಕಡತ ಹುಡುಕಿದಾಗ ಪತ್ತೆಯಾಗಿರಲಿಲ್ಲ. ಸಚಿವರ ಕಚೇರಿಗೆ ಕಡತ ಕಳುಹಿಸಿರುವುದಕ್ಕೆ ದಾಖಲೆ ಇದೆ. ಆದರೆ, ಇಲಾಖೆಗೆ ಹಿಂತಿರುಗಿಸಿರುವುದಕ್ಕೆ ಯಾವುದೇ ದಾಖಲೆ ಇಲ್ಲ ಎಂದು ಹೇಳಲಾಗಿದೆ.

ಕಡತ ಈಗಲೂ ಹುಡುಕುತ್ತಿದ್ದು, ಲಭ್ಯವಾಗಿಲ್ಲ. ಕಡತ ನಾಪತ್ತೆಯಾಗಿದೆಯೋ? ಇಲ್ಲವೋ? ಎಂಬ ಮಾಹಿತಿ ಇಲ್ಲ ಎಂಬುದಾಗಿ ಇಲಾಖೆ ಮೂಲಗಳು ಹೇಳುತ್ತಿವೆ. ಪ್ರಸ್ತುತ ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಕಾರಣ ಕಡತದ ಅಗತ್ಯತೆ ಇದೆ. ಆದರೆ, ಇದೀಗ ಕಡತ ಇಲ್ಲದಿರುವುದು ಹಲವು ಅನುಮಾಗಳಿಗೆ ಎಡೆಮಾಡಿಕೊಟ್ಟಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ