Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೇಹ ತ್ಯಾಗ ವದಂತಿಗೆ ಕೊನೆಗೂ ಬಿತ್ತು ತೆರೆ : ಮಹಾರಾಜರ ಮಧ್ಯಸ್ಥಿಕೆಯಿಂದ ಇಡೀ ಪ್ರಕರಣ ಸುಖಾಂತ್ಯ

ಬೆಳಗಾವಿ : ದೇಹ ತ್ಯಾಗ ಮಾಡುತ್ತಾರೆ ಎಂಬ ವದಂತಿ ಕೊನೆಗೂ ಸುಖಾಂತ್ಯಗೊಂಡಿದೆ. ಆಧ್ಯಾತ್ಮಿಕ ಪಂಥವೊಂದಕ್ಕೆ ಮಾರು ಹೋಗಿ ಸೆಪ್ಟೆಂಬರ್ 8 ರಂದು ದೇಹತ್ಯಾಗ ಮಾಡಲು ಮುಂದಾಗಿದ್ದ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಕೆಲವರು ಕೊನೆಗೂ ತಮ್ಮ ನಿರ್ಧಾರದಿಂದ ಹಿಂದೆ ಸರಿದ ಬೆಳವಣಿಗೆ ವರದಿಯಾಗಿದೆ.

ಅನಂತಪುರ ಗ್ರಾಮದ ತುಕಾರಾಮ ಇರಕರ ಕುಟುಂಬದ ನಾಲ್ವರು ಮತ್ತು ನೆರೆಯ ಮಹಾರಾಷ್ಟ್ರದ ಐವರ ಮನವೊಲಿಸುವಲ್ಲಿ ಕವಲಗುಡ್ಡ ಅಮರೇಶ್ವರ ಮಹಾರಾಜರು ಹಾಗೂ ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ್ ಸಂಪಗಾವಿ ಯಶಸ್ವಿಯಾಗಿದ್ದಾರೆ.

ಹರಿಯಾಣದ ಸಂತ ಬಾಬಾ ರಾಮ್ ಪಾಲ್ ಅವರ ಪ್ರವಚನದಿಂದ ಪ್ರೇರೇಪಣೆಗೊಂಡಿದ್ದ ತುಕಾರಾಮ ಇರಕರ, ಅವರ ಧರ್ಮಪತ್ನಿ ಸಾವಿತ್ರಿ, ಮಗ ರಮೇಶ, ಸೊಸೆ ವೈಷ್ಣವಿ ಹಾಗೂ ಮಹಾರಾಷ್ಟ್ರದ ಕೆಲವರು ದೇಹಕ್ಕೆ ಮುಂದಾಗಿದ್ದರು. ಸೆಪ್ಟೆಂಬರ್ 8ಕ್ಕೆ ದಿನವನ್ನು ಸಹ ನಿಗದಿ ಮಾಡಿಕೊಂಡಿದ್ದರು.

ನಾವು ಇಲ್ಲಿ ಇರುವುದಿಲ್ಲ. ಬಾಬಾ ನಮ್ಮನ್ನು ಕೈಲಾಸಕ್ಕೆ ಕರೆದೊಯ್ಯುತ್ತಾರೆ. ನಮಗೆ ಮೋಕ್ಷವನ್ನು ಸಹ ಕೊಡಿಸುತ್ತಾರೆ
ಎಂದು ಇವರೆಲ್ಲ ಘೋಷಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಅಮರೇಶ್ವರ ಮಹಾರಾಜರು ಮತ್ತು ಸುಭಾಷ್ ಸಂಪಗಾವಿ ಅನಂತಪುರ ಗ್ರಾಮಕ್ಕೆ ತೆರಳಿ ಇವರೆಲ್ಲರ ಜೊತೆ ಮಾತುಕತೆ ನಡೆಸಿದ್ದಾರೆ. ತಹಸೀಲ್ದಾರ ಸಿದ್ದರಾಜ ಬೋಸಗಿ, ಡಿವೈಎಸ್ ಪಿ ಪ್ರಶಾಂತ ಮುನ್ನೊಳ್ಳಿ , ಸಿಪಿಐ ಸಂತೋಷ್ ಹಳ್ಳೂರ, ತಾಲೂಕು ಆರೋಗ್ಯ ಅಧಿಕಾರಿ ಬಸನಗೌಡ ಕಾಗೆ,ಅಥಣಿ ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇವರೆಲ್ಲರೂ
ದೇಹತ್ಯಾಗಕ್ಕೆ ಮುಂದಾದವರ ನಿರ್ಧಾರವನ್ನು ಬದಲಿಸುವಲ್ಲಿ ಸಫಲರಾದರು.

ಬಾಬಾ ರಾಮ್ ಪಾಲ್ ಮಹಾರಾಷ್ಟ್ರದಲ್ಲಿ ಪೊಲೀಸರ ವಶದಲ್ಲಿದ್ದಾರೆ. ಯಾವುದೇ ಮೌಲ್ಯಕ್ಕೆ ಬಲಿಯಾಗದೆ ಉತ್ತಮ ಜೀವನ ನಡೆಸಿ ಎಂದು ಬುದ್ದಿವಾದ ಹೇಳಿ ಯಾವುದೇ ಕಾರಣಕ್ಕೂ ದೇಹತ್ಯಾಗ ಮಾಡದಂತೆ ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ