Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಕ್ಷ್ಮಣ ಸವದಿ ಹುಟ್ಟುಹಬ್ಬದ ಫೋಟೋದಲ್ಲಿ ಕಾಂಗ್ರೆಸ್ ಚಿಹ್ನೆಯೇ ಇಲ್ಲ !

 

ಅಥಣಿ :
ಮಾಜಿ ಮುಖ್ಯಮಂತ್ರಿ
ಜಗದೀಶ್ ಶೆಟ್ಟ‌ರ್ ವಾಪಸ್ ಬಿಜೆಪಿ ಸೇರ್ಪಡೆ ಸಹ ಮಾತೃ ಪಕ್ಷಕ್ಕೆ ವಾಪಸ್ ಆಗುತ್ತಾರೆ ಎನ್ನುವ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಸವದಿ ಹುಟ್ಟುಹಬ್ಬದ ಬ್ಯಾನರ್‌ನಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಇರದಿರುವುದು ಸವದಿ ಬಿಜೆಪಿ ಮರುಸೇರ್ಪಡೆ ಗಾಸಿಪ್ ಗಳಿಗೆ ಮತ್ತೆ ರೆಕ್ಕೆಪುಕ್ಕ ಬಂದಂತಾಗಿದೆ.

ಫೆಬ್ರವರಿ 16 ರಂದು ಲಕ್ಷ್ಮಣ ಸವದಿ ಅವರು 64 ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹೀಗಾಗಿ ಸವದಿ ಆಪ್ತರು, ಕಾಂಗ್ರೆಸ್ ಮುಖಂಡರು ಅಥಣಿ ಪಟ್ಟಣದಲ್ಲಿ ಬ್ಯಾನರ್‌ ಗಳನ್ನು ಹಾಕಿದ್ದಾರೆ. ಆದರೆ, ಶಾಸಕರಿಗೆ ಶುಭ ಕೋರುವ ಬ್ಯಾನರ್‌ನಲ್ಲಿ ಕಾಂಗ್ರೆಸ್ ಚಿಹ್ನೆಯೇ ಮಾಯವಾಗಿದೆ. ಇದು ಸವದಿ ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರಾ ಅನ್ನೋ ಚರ್ಚೆಗೆ ಕಾರಣವಾಗಿದೆ. ಅಂತರ ಕಾಯ್ದುಕೊಳ್ಳುತ್ತಿದ್ದಾರಾ ಎಂಬ ಚರ್ಚೆ ಮೊಳಗಿದೆ.

ಈ ಬಗ್ಗೆ ದೆಹಲಿಯಲ್ಲಿ ಸ್ಪಷ್ಟನೆ ನೀಡಿದ ಲಕ್ಷ್ಮಣ ಸವದಿ, ನಾನು ಎಂದೂ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ. ಬಿಜೆಪಿಯಲ್ಲಿ ಇದ್ದಾಗಲೂ ಅಷ್ಟೇ ಈಗಲೂ ಅಷ್ಟೆ, ಹುಟ್ಟುಹಬ್ಬ ಆಚರಿಸಲ್ಲ. ಅಭಿಮಾನಿಗಳಿಗೂ ಬ್ಯಾನ‌ರ್ ಹಾಕದಂತೆ ಹೇಳುತ್ತೇನೆ. ಆದರೆ ಅಭಿಮಾನಿಗಳು, ಬೆಂಬಲಿಗರು ಬ್ಯಾನ‌ರ್ ಹಾಕಿಕೊಳ್ಳುತ್ತಾರೆ. ಜಗದೀಶ್ ಶೆಟ್ಟ‌ರ್ ಬೇರೆ, ನಾನು ಬೇರೆ ಎಂದ ಸವದಿ, ನನ್ನ ವಿಚಾರಗಳು ಬೇರೆ, ಶೆಟ್ಟರ್ ವಿಚಾರಗಳು ಬೇರೆ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ ಎಂದರು.

ಸವದಿ ದೇಹದಲ್ಲಿ ಬಿಜೆಪಿ ಡಿಎನ್ಎ ಇದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಸವದಿ, ನನ್ನ ಮೈಯಲ್ಲಿ ಇರುವುದು ನನ್ನ ತಂದೆಯ ಡಿಎನ್‌ಎ. ಅಲ್ಲಿ ಅವಮಾನ ಆಗಿದ್ದಕ್ಕೆ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರಿದ್ದೇನೆ. ನಾನು ಮತ್ತೆ ಬಿಜೆಪಿಗೆ ಹೋಗುವುದಕ್ಕೆ ಹುಚ್ಚಾ ಎಂದು ಹೇಳಿದರು.

ಕೇಂದ್ರದ ತಾರತಮ್ಯ ಧೋರಣೆ ಖಂಡಿಸಿ ನಾಳೆ ದೆಹಲಿಯಲ್ಲಿ ಪ್ರತಿಭಟನೆ ಆಯೋಜಿಸಿರುವ ಬಗ್ಗೆ ಮಾತನಾಡಿದ ಸವದಿ, ರಾಜ್ಯಕ್ಕೆ ಕೇಂದ್ರ ಸರ್ಕಾರ ನ್ಯಾಯಸಮ್ಮತ ಅನುದಾನ ನೀಡುತ್ತಿಲ್ಲ. ಸಂಕಷ್ಟ ಸಂದರ್ಭದಲ್ಲಿ ರಾಜ್ಯಕ್ಕೆ ಬರಬೇಕಿರುವ ಅನುದಾನ ನೀಡಬೇಕು. ಕರ್ನಾಟಕದಿಂದ ಎಷ್ಟು ಜಿಎಸ್ ಟಿ ಸಂಗ್ರಹ ಆಗುತ್ತೆ ಎಂಬ ಬಗ್ಗೆ ಚರ್ಚಿಸಲಿ ಎಂದರು.

ರಾಜ್ಯದ ಸಂಸದರಿಗೆ ನಾನು ಪ್ರಶ್ನೆ ಮಾಡುತ್ತೇನೆ. ನೀವು ಗುಜರಾತ್‌ನಿಂದ ಗೆದ್ದಿದ್ದೀರಾ? ಇಲ್ಲ ಕರ್ನಾಟಕದಿಂದ ಗೆದ್ದಿದ್ದೀರಾ? ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಯಾಕೆ ಪ್ರಶ್ನೆ ಮಾಡುತ್ತಿಲ್ಲ ಎಂದು ಸವದಿ ಪ್ರಶ್ನಿಸಿದರು.

ಡಿ.ಕೆ. ಶಿವಕುಮಾ‌ರ್ ಜೈಲಿಗೆ ಹೋಗಿ ಬಂದಿರುವ ಬಗ್ಗೆ ಕೆ.ಎಸ್.ಈಶ್ವರಪ್ಪ ಮಾತಾಡುತ್ತಾರೆ. ಹಾಗಾದರೆ ಬಿಎಸ್ ಯಡಿಯೂರಪ್ಪ ಜೈಲಿಗೆ ಹೋಗಿಲ್ವಾ ಎಂದು ಪ್ರಶ್ನಿಸಬೇಕಾಗುತ್ತದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ