Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಗೆ ವಂದೇ ಮಾತರಂ ರೈಲು ತರಲು ಸಿಡಿದೆದ್ದ ಕರವೇ....!!

 

ಬೆಳಗಾವಿ- ಕೇಂದ್ರ ಸರ್ಕಾರದ ಯೋಜನೆಗಳು ಕೇವಲ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಿಗೆ ಸೀಮೀತವಾಗುತ್ತಿದ್ದು,ಸ್ಥಳೀಯ ಜನಪ್ರತಿನಿಧಿಗಳು ಕೂಡಲೇ ವಂದೇ ಮಾತರಂ ರೈಲನ್ನು ದಾರವಾಡದಿಂದ ಬೆಳಗಾವಿ ವರೆಗೂ ಓಡಿಸಲು ಕ್ರಮ ಕೈಗೊಳ್ಳಬೇಕೆಂದು ಕರವೇ ಒತ್ತಾಯಿಸಿ ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ.

ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರ ನೇತ್ರತ್ವದಲ್ಲಿ ಬೆಳಗಾವಿಯ ಚನ್ನಮ್ಮ ವೃತ್ತದಿಂದ ಜಿಲ್ಕಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಕೇಂದ್ರ ಸರ್ಕಾರದ ಯೋಜನೆಗಳ ಹಂಚಿಕೆಯಲ್ಲಿ ವಿಮಾನ,ಹಾಗು ರೈಲು ಸೇವೆಗಳ ವಿಚಾರದಲ್ಲಿ ಬೆಳಗಾವಿಗೆ ನಿರಂತರವಾಗಿ ಅನ್ಯಾಯವಾಗುತ್ತಿದ್ದು ಇದಕ್ಕೆ ಬೆಳಗಾವಿ ಜಿಲ್ಲೆಯ ಇಬ್ಬರು ಸಂಸದರು ಹಾಗು ರಾಜ್ಯಸಭಾ ಸದಸ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕರವೇ ಆರೋಪಸಿದೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಅನೇಕ ವಿಮಾನ ಸೇವೆಗಳು ರದ್ದಾಗಿವೆ,ಈಗ ವಂದೇ ಮಾತರಂ ರೈಲು ಧಾರವಾಡ- ಹುಬ್ಬಳ್ಳಿ ನಗರಗಳ ಪಾಲಾಗಿದ್ದು ಸ್ಥಳೀಯ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವಂತೆ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಡಿ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ವಿದ್ಯುತ್ ದರವನ್ನು ಹೆಚ್ಚಿಸಿ ರಾಜ್ಯದ ಬಡಜನರಿಗೆ ಮೋಸ ಮಾಡಿದೆ.ಅಂಗೈಯಲ್ಲಿ ಅರಮನೆ ತೋರಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಬಡವರ್ಗದವರನ್ನು ಸುಲಿಗೆ ಮಾಡುತ್ತಿದೆ.ಸರ್ಕಾರ ನುಡಿದಂತೆ ನಡೆಯಬೇಕು, ವಿದ್ಯುತ್ ದರ ಹೆಚ್ಚಳದ ನಿರ್ಧಾರ ವಾಪಸ್ ಪಡೆದು ರಾಜ್ಯದ ಎಲ್ಲ ಬಡ ಕುಟುಂಬಳಿಗೆ ಕೊಟ್ಟ ಮಾತಿನಂತೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ವಚನ ನಿಭಾಯಿಸಬೇಕು ಎಂದು ದೀಪಕ ಗುಡಗನಟ್ಟಿ ಅವರು ಒತ್ತಾಯಿಸಿದ್ದಾರೆ.

ವಂದೇ ಮಾತರಂ ರೈಲು ಬೆಳಗಾವಿಗೆ ಬರಬೇಕು,ವಿದ್ಯುತ್ ದರ ಹೆಚ್ಚಳ ಮಾಡುವ ನಿರ್ಧಾರ ವಾಪಸ್ ಪಡೆಯಬೇಕು ಎಂದು ಬೆಳಗಾವಿ ಜಿಲ್ಲೆಯ ಕರವೇ ಕಾರ್ಯಕರ್ತರು ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದ್ದಾರೆ.

ಕರವೇ ರಾಜ್ಯ ಸಂಚಾಲಕ,ಮಹಾದೇವ ತಳವಾರ,ಸುರೇಶ್ ಗವಣ್ಣವರ,ಹೊಳೆಪ್ಪಾ ಸುಲದಾಳ,ಬಾಳು ಜಡಗಿ,ಗಣೇಶ್ ರೋಕಡೆ,ರಮೇಶ್ ಯರಗಣ್ಣವರ,ದಶರಥ ಬನೋಶಿ,ಕೃಷ್ಣಾ ಪಾಟೀಲ ( ಕಿಟ್ಟು) ಸೇರದಂತೆ ಹಲವಾರು ಜನ ಕರವೇ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ