Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಉತ್ತರಕ್ಕೆ ಕೇಳಿ ಬಂತು ಈ ಅಚ್ಚರಿ ಹೆಸರು..!

 

ಬೆಳಗಾವಿ :
ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರಕ್ಕೆ ಇದೀಗ ಅಚ್ಚರಿ ಹೆಸರು ಕೇಳಿ ಬಂದಿದೆ. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ(ಬುಡಾ)ದ ಮಾಜಿ ಅಧ್ಯಕ್ಷ ಗೂಳಪ್ಪ ಹೊಸಮನಿ ಅವರು ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆ ಜೋರಾಗಿ ಕೇಳಿ ಬಂದಿದೆ.

ಯಡಿಯೂರಪ್ಪ ಅವರ ಕೆಜೆಪಿಯಿಂದ ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದಿಂದ ಈ ಹಿಂದೆ ಸ್ಪರ್ಧೆ ನಡೆಸಿದ್ದ ಅವರು ಬೆಳಗಾವಿಯಲ್ಲಿ ಚಿರಪರಿಚಿತರಾಗಿದ್ದಾರೆ. ಹೀಗಾಗಿ ಇದೀಗ ಕೆಲವೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ ಎಂಬ ಚರ್ಚೆ ಜೋರಾಗಿ ಶುರುವಾಗಿದೆ.

ಘೂಳಪ್ಪ ಹೊಸಮನಿ ಅವರು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಅಧ್ಯಕ್ಷರಾಗಿ ಕೈಗೊಂಡಿದ್ದ ಕೆಲಸ ಕಾರ್ಯಗಳಿಂದ ಬೆಳಗಾವಿಯ ಜನಮಾನಸದಲ್ಲಿ ನೆಲೆಯಾದವರು. ಹೀಗಾಗಿ ಅವರೇನು ಬೆಳಗಾವಿಗೆ ಹೊಸಬರಲ್ಲ. ಲಿಂಗಾಯತ ಸಮಾಜದ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿರುವ ಘೂಳಪ್ಪ ಹೊಸಮನಿ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಕೃಪಾಶೀರ್ವಾದವಿದೆ. ಯಡಿಯೂರಪ್ಪ ಅವರ ಅತ್ಯಂತ ನಿಕಟವರ್ತಿ ಎಂದೇ ಘೂಳಪ್ಪ ಹೊಸಮನಿ ಮೊದಲಿನಿಂದಲೂ ಗುರುತಿಸಿಕೊಂಡಿದ್ದಾರೆ. ಆದ್ದರಿಂದ ಈ ಬಾರಿ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದಿಂದ ಲಿಂಗಾಯತ ಮತಗಳ ಆಧಾರದ ಮೇಲೆ ಬಿಜೆಪಿ ಟಿಕೆಟ್ ನೀಡಿದರು ಅಚ್ಚರಿ ಪಡಬೇಕಾಗಿಲ್ಲ.

ಒಟ್ಟಾರೆ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಹೊಸಬರಿಗೆ ಟಿಕೆಟ್ ನೀಡುವ ನೀಡಿ ಗೆಲ್ಲಿಸುವ ಸವಾಲು ಹೊಂದಿರುವ ಬಿಜೆಪಿ ಗೂಳಪ್ಪ ಹೊಸಮನಿ ಅವರಂತಹ ಹಿರಿಯ ನಾಯಕರಿಗೆ ಮಣೆ ಹಾಕಿ ಲಿಂಗಾಯಿತ ಮತಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವ ಭಾರೀ ಲೆಕ್ಕಾಚಾರದಲ್ಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ