Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದಾಖಲೆ ಬರೆದ ಈ ಸಲದ ಬೆಳಗಾವಿ ಗಣೇಶೋತ್ಸವ ಮೆರವಣಿಗೆ !

ಬೆಳಗಾವಿ: ಮುಂಬೈ ಮತ್ತು ಪುಣೆ ಮಹಾನಗರಗಳ ಸಾರ್ವಜನಿಕ ಗಣಪತಿ ಉತ್ಸವಗಳ ಬಳಿಕ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಬೆಳಗಾವಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ನಡೆಯುವ ಇತಿಹಾಸ ಇದೆ. ಈ ಸಲವು 10 ದಿನಗಳ ಕಾಲ ವೈಭವದಿಂದ ನಡೆದ ಗಣೇಶೋತ್ಸವದ ಮೆರವಣಿಗೆ ಬುಧವಾರ ರಾತ್ರಿ ಮತ್ತೊಂದು ಹೊಸ ಇತಿಹಾಸವನ್ನು ನಿರ್ಮಿಸಿದೆ. ಬಹುದೀರ್ಘಕಾಲ ಮೆರವಣಿಗೆ ನಡೆಯುವ ಮೂಲಕ ಬೆಳಗಾವಿ ಗಣೇಶೋತ್ಸವ ಈ ಬಾರಿ ಮತ್ತೆ ಗಮನ ಸೆಳೆದಿದೆ.

ಬೆಳಗಾವಿಯ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ದಾಖಲೆ ಮೆರೆದಿದೆ. ಸತತ 32 ಗಂಟೆಗಳ ಕಾಲ ಮೆರವಣಿಗೆ ನಡೆದು ಒಟ್ಟು 386 ಸಾರ್ವಜನಿಕ ಗಣಪತಿಗಳ ವಿಸರ್ಜನೆಯಾಗಿದೆ.

ಸಾರ್ವಜನಿಕ ಗಣಪತಿ ಉತ್ಸವ ಎಂದರೆ ಬೆಳಗಾವಿ ಜನತೆಗೆ ಇನ್ನಿಲ್ಲದ ಉತ್ಸಾಹ. ಅದು ಈ ಸಲವು ಮತ್ತೆ ಸಾಬೀತುಗೊಂಡಿತು. ಮಂಗಳವಾರ ಸಂಜೆ 4:00 ಗಂಟೆಗೆ ಆರಂಭವಾದ ಸಾರ್ವಜನಿಕ ಗಣಪತಿಗಳ ಮೆರವಣಿಗೆ ಮರುದಿನ ಅಂದರೆ ಬುಧವಾರ ಮಧ್ಯರಾತ್ರಿ 12 ಗಂಟೆವರೆಗೂ ಸಾಗುವ ಮೂಲಕ ಬೆಳಗಾವಿಯ ಸಾರ್ವಜನಿಕ ಗಣೇಶೋತ್ಸವದಲ್ಲಿ ಬಹು ದೊಡ್ಡ ಇತಿಹಾಸ ಬರೆಯಿತು. ಕಪಿಲೇಶ್ವರದ ವಿಸರ್ಜನಾ ತಾಣಕ್ಕೆ ಸಾಗುವ ಮಾರ್ಗದಲ್ಲಿ ಸಾಲಾಗಿ ನಿಂತಿದ್ದ ಗಣಪತಿಗಳು ಒಂದಕ್ಕಿಂತ ಮತ್ತೊಂದು ನಯನ ಮನೋಹರವಾಗಿದ್ದವು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗಣಪತಿಗಳ ದರ್ಶನ ಪಡೆದು ಪುನೀತರಾದರು. ಸಾರ್ವಜನಿಕ ಗಣೇಶ ಮಂಡಳಿಗಳ ಪದಾಧಿಕಾರಿಗಳು ಎರಡು ದಿನಗಳ ಕಾಲ ಉತ್ಸಾಹದಿಂದ ಭಾಗವಹಿಸಿ ಭಕ್ತಿಯಿಂದ ಪೂಜಿಸಿದ್ದ ಗಣಪನನ್ನು ಬೀಳ್ಕೊಟ್ಟರು.

ಬೆಳಗಾವಿ ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಪೊಲೀಸರು ಭದ್ರತೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದರು. ಒಟ್ಟಾರೆ, ಈ ಸಲದ ಗಣೇಶೋತ್ಸವ ಉತ್ಸಾಹದಿಂದ ಸಂಪನ್ನಗೊಂಡಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ