Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ

ಬಾಗಲಕೋಟೆ : ಬಾಳೆಹೊನ್ನೂರು ಮಠದ ಜಗದ್ಗುರು ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆದಿರುವ ಘಟನೆ ಬಾಗಲಕೋಟೆ ಜಿಲ್ಲೆ ಕಲಾದಗಿ ಗ್ರಾಮದಲ್ಲಿ ನಡೆದಿದೆ. ಗಂಗಾಧರ ಸ್ವಾಮೀಜಿಯಿಂದ ಮಠದ ಉಳುಮೆಗೆ ವಿರೋಧಿಸಿ ಅಲ್ಲಿನ ಭಕ್ತರು, ಅವರ ಕಾರನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಆಗ ಮಹಿಳೆಯೊಬ್ಬರು ಚಪ್ಪಲಿ ಎಸೆದಿದ್ದಾರೆ. ಶ್ರೀಗಳು ಉಡಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಕಲಾದಗಿಯ ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿವಾದಕ್ಕೆ ಸಂಬಂಧಿಸಿ ಶನಿವಾರ ಈ ಘಟನೆ ನಡೆದಿದೆ. ಕೂಡಲೇ ಪೊಲೀಸರು ಮಧ್ಯ ಪ್ರವೇಶ ಮಾಡಿ ಮಹಿಳೆಯರನ್ನು ಚದುರಿಸಿದರು.‌

ಕಾರ್ಯಕ್ರಮವೊಂದರ ನಿಮಿತ್ತ ಬಾಗಲಕೋಟೆಗೆ ಬಂದಿದ್ದ ಶ್ರೀಶೈಲ ಪೀಠದ ರಂಭಾಪುರಿ ಶ್ರೀಗಳು ಕಲಾದಗಿಯಲ್ಲಿರುವ ಮಠಕ್ಕೆ ಹೊರಟಿದ್ದರು. ಆದರೆ, ಕಲಾದಗಿ ಮಠದ ವಿಚಾರಕ್ಕೆ ಸಂಬಂಧಿಸಿ ವಿವಾದ ಇರುವುದರಿಂದ ಅಲ್ಲಿಗೆ ಹೋಗಬಾರದು ಎಂದು ಭಕ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರ ಆಕ್ಷೇಪದ ಹೊರತಾಗಿಯೂ ಶ್ರೀಗಳು ಅಲ್ಲಿಗೆ ಹೋಗಿದ್ದನ್ನು‌ ಪ್ರತಿಭಟಿಸಿ ದಾಳಿ ನಡೆಸಲಾಗಿದೆ.

ಕಲಾದಗಿ ಗ್ರಾಮದ ರಂಭಾಪುರಿ ಜಗದ್ಗುರು ಪೀಠದ ಶಾಖಾ ಮಠವಾದ ಗುರುಲಿಂಗೇಶ್ವರ ಮಠದ ಪೀಠಾಧಿಪತಿಗಳು 2019ರಲ್ಲಿ ಲಿಂಗೈಕ್ಯರಾಗಿದ್ದರು. ಮುಂದೆ ಪೀಠಾಧಿಪತಿಗಳು ಯಾರಾಗಬೇಕು ಎಂಬ ವಿಚಾರದಲ್ಲಿ ವಿವಾದ ಹುಟ್ಟಿಕೊಂಡಿತ್ತು. ಇಬ್ಬರು ಶ್ರೀಗಳ ನಡುವೆ ವಿವಾದದಿಂದ ಗುರುಗಳ ಆಯ್ಕೆ ಆಗಿರಲಿಲ್ಲ. ಬದಲಾಗಿ ವಿವಾದ ಕೋರ್ಟ್‌ ಮೆಟ್ಟಿಲು ಹತ್ತಿತ್ತು.

ಈಗ ವಿವಾದ ಕೋರ್ಟ್‌ನಲ್ಲಿರುವುದರಿಂದ ರಂಭಾಪುರಿ ಶ್ರೀಗಳು ಕಲಾದಗಿ ಮಠಕ್ಕೆ ಭೇಟಿ ನೀಡುವುದು ಸರಿಯಲ್ಲ ಎನ್ನುವುದು ವಾದವಾಗಿದೆ. ಶ್ರೀಗಳು ಮಠಕ್ಕೆ ಭೇಟಿ ನೀಡುವುದಲ್ಲದೆ, ವಿವಾದ ಕೋರ್ಟ್ ನಲ್ಲಿರುವಾಗ ಕಟ್ಟಡ ದುರಸ್ತಿ ಹಾಗೂ ಜಮೀನು ಉಳುಮೆಗೆ ತಕರಾರು ಎದುರಾಗಿತ್ತು. ಇದೆಲ್ಲದರ ಒಟ್ಟು ಮೊತ್ತವಾಗಿ ಪ್ರತಿಭಟನೆ ಭುಗಿಲೆದ್ದಿತ್ತು.

ಶ್ರೀಗಳು ಕಲಾದಗಿಗೆ ಬರುತ್ತಾರೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆಯೇ ಅವರನ್ನು ತಡೆಯಲು ಊರಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಅದರಲ್ಲಿ ಮಹಿಳೆಯರೂ ಸೇರಿದ್ದರು. ಆದರೆ, ಈ ವಿಚಾರ ತಿಳಿದಿದ್ದರೂ ಜನರನ್ನು ಸಮಾಧಾನ ಮಾಡಬಹುದು ಎಂಬ ಉದ್ದೇಶದಿಂದ ಮತ್ತು ಅವರ ಜತೆ ಮಾತನಾಡುವ ಉದ್ದೇಶದಿಂದ ಶ್ರೀಗಳು ಅಲ್ಲಿಗೆ ತೆರಳಿದ್ದರು.

ಆದರೆ, ಕಲಾದಗಿಗೆ ಬರುತ್ತಿದ್ದಂತೆಯೇ ಅವರ ಕಾರನ್ನು ತಡೆಯುವ ಪ್ರಯತ್ನ ನಡೆಯಿತು. ಕಾರು ನಿಲ್ಲಿಸದೆ ಮುಂದೆ ಹೋದಾಗ ಮಹಿಳೆಯೊಬ್ಬರು ಚಪ್ಪಲಿ ತೆಗೆದು ಕಾರಿನ ಮೇಲೆ ಎಸೆದರು. ಕೂಡಲೇ ಅಲ್ಲಿದ್ದ ಭಕ್ತರು ಮಹಿಳೆಯನ್ನು ತಡೆದು ಪೊಲೀಸರ ವಶಕ್ಕೆ ಒಪ್ಪಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ