Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

Twitter ಹೊಸ ಮೈಲಿಗಲ್ಲು ಸ್ಥಾಪಿಸಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ..!

Advertisement
ಲಕ್ನೋ :
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ 25 ಮಿಲಿಯನ್ ( 2.5 ಕೋಟಿ)ಹಿಂಬಾಲಕರನ್ನು ಪಡೆದು ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಅನುಸರಿಸುವವರ ವಿಷಯದಲ್ಲಿ ಹಲವಾರು ನಾಯಕರು ಮತ್ತು ಸೆಲೆಬ್ರಿಟಿಗಳು ಇನ್ನೂ 25 ಮಿಲಿಯನ್ ಅನ್ನು ತಲುಪಿಲ್ಲ.
ಯೋಗಿ ಆದಿತ್ಯನಾಥ್ ಅವರು ಸೆಪ್ಟೆಂಬರ್ 2015 ರಲ್ಲಿ ಟ್ವಿಟರ್‌ ನಲ್ಲಿ ತಮ್ಮ ಅಧಿಕೃತ ಹ್ಯಾಂಡಲ್ ಅನ್ನು ಪ್ರಾರಂಭಿಸಿದ್ದು, 2017 ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ಅವರು ರಾಜ್ಯದಲ್ಲಿ ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆಗಳನ್ನು ತೋರಿಸಿದ ರೀತಿಯಲ್ಲಿ, ಅವರ ಜನಪ್ರಿಯತೆಯು ಗುಣಾತ್ಮಕ ಹೆಚ್ಚಳವನ್ನು ಕಂಡಿದೆ.
ಟ್ವಿಟರ್‌ನಲ್ಲಿ 25 ಮಿಲಿಯನ್ ಅನುಯಾಯಿಗಳೊಂದಿಗೆ, ಯೋಗಿ ಅವರು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹ ಹಿರಿಯ ನಾಯಕರನ್ನು ಒಳಗೊಂಡಿರುವ ಕ್ಲಬ್‌ನ ಭಾಗವಾಗಿದ್ದಾರೆ.
ಅವರು ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ಕೂ ಆ್ಯಪ್‌ನಲ್ಲಿ ಅವರು ಹೆಚ್ಚಿನ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದ್ದಾರೆ.

89.2 ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್‌ನಲ್ಲಿ ಅತಿ ಹೆಚ್ಚು ಅನುಸರಿಸುವ ಭಾರತೀಯ ರಾಜಕಾರಣಿಯಾಗಿದ್ದಾರೆ. ಅಲ್ಲದೆ, ಟ್ವಟಿರಿನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ನಂತರ ಪ್ರಧಾನಿ ಮೋದಿ ವಿಶ್ವದ ಎರಡನೇ ಅತಿ ಹೆಚ್ಚು ಹಿಂಬಾಲಕರನ್ನು ರಾಜಕಾರಣಿಯಾಗಿದ್ದಾರೆ.
ಎಲೋನ್‌ ಮಸ್ಕ್ ಅವರು ಬರಾಕ್ ಒಬಾಮಾ ಅವರನ್ನು ಹಿಂದಿಕ್ಕಿ ‘ದ ಮೋಸ್ಟ್ ಫಾಲೋವ್ಡ್ ಟ್ವಿಟರ್ ಖಾತೆ ಹೊಂದಿದ್ದಾರೆ. ಪ್ರಸ್ತುತ 133 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದು, ವ್ಯಾಪಾರದ ಮ್ಯಾಗ್ನೇಟ್ ದಿನಕ್ಕೆ ಸರಾಸರಿ 1,00,000 ಅನುಯಾಯಿಗಳನ್ನು ಗಳಿಸುತ್ತಿದ್ದಾರೆ ಎಂದು ಹೇಳಲಾಗುತ್ತದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ