ಬೆಳಗಾವಿ : ಕೆಎಲ್ಇ ಸಂಸ್ಥೆಯ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ವತಿಯಿಂದ ಮೇ 15 ಮತ್ತು 16 ರಂದು ಬೆಳಗಾವಿಯಲ್ಲಿ “ನ್ಯಾಷನಲ್ ಲಾ ಫೆಸ್ಟ್ 2026” ಆಯೋಜಿಸಲಾಗಿದ್ದು, ಇದರ ಅಂಗವಾಗಿ ಕ್ಲೈಂಟ್ ಕನ್ಸಲ್ಟೇಶನ್ ಹಾಗೂ ಲೀಗಲ್ ಕ್ವಿಜ್ ಸ್ಪರ್ಧೆಗಳು ನಡೆಯಲಿವೆ.
ದೇಶದ ವಿವಿಧ ಭಾಗಗಳಿಂದ 16 ಕ್ಕೂ ಹೆಚ್ಚು ಕಾನೂನು ಮಹಾವಿದ್ಯಾಲಯಗಳು ಈ ಉತ್ಸವದಲ್ಲಿ ಭಾಗವಹಿಸುತ್ತಿವೆ.
ಮೇ 15 ರಂದು ಉದ್ಘಾಟನಾ ಸಮಾರಂಭ ನಡೆಯಲಿದ್ದು ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಹಿರಿಯ ನ್ಯಾಯವಾದಿ ಆರ್. ಬಿ. ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ.
ಮೇ 16 ರಂದು ಬೆಳಗಾವಿಯ ಜೆಎನ್ಎಂಸಿ ಆವರಣದ ಡಾ.ಎಚ್.ಬಿ.ರಾಜಶೇಖರ ಕನ್ವೇಷನ್ ಸಭಾಂಗಣದಲ್ಲಿ ಕ್ಲೈಂಟ್ ಕನ್ಸಲ್ಟೇಶನ್ ಸ್ಪರ್ಧೆಯ ಅಂತಿಮ ಹಾಗೂ ಸಮಾರೋಪ ಸಮಾರಂಭ ಜರುಗಲಿದ್ದು,ಬೆಂಗಳೂರು ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ. ಎ. ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಗೋವಾದ ವಿಎಂ ಸಲಗಾಂವಕರ್ ಲಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಬಾಬಾಗೌಡ ಪಾಟೀಲ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸರ್ಕಾರದ ಮುಖ್ಯ ಸಚೇತಕರಾಗಿದ್ದ ಹಾಗೂ ಕೆಎಲ್ಇ ಆಡಳಿತ ಮಂಡಳಿ ಸದಸ್ಯ ಮಹಾಂತೇಶ ಎಂ. ಕವಟಗಿಮಠ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯೆ ಡಾ. ಜ್ಯೋತಿ ಜಿ. ಹಿರೇಮಠ ಹಾಗೂ ಸಂಯೋಜಕ ಡಾ. ಸಂತೋಷ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
