Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯ ಕಾಕತಿ ಅರಣ್ಯ ಸಿಬ್ಬಂದಿಗಳಿಂದ ಇಬ್ಬರು ಕಾಡುಗಳ್ಳರ ಬಂಧನ..!

ಕಾಕತಿ ಅರಣ್ಯ ಸಿಬ್ಬಂದಿಗಳಿಂದ ಇಬ್ಬರು ಕಾಡುಗಳ್ಳರ ಬಂಧನ..!

ಮಧ್ಯರಾತ್ರಿ ಮರ ಕಡಿದು ಲಕ್ಷಾಂತರ ರೂ ಮಾಲಿನೊಂದಿಗೆ ಸಿಕ್ಕಿಬಿದ್ದ ರಾಜಕಟ್ಟಿ, ಬೆನಕೋಳಿ ಕಳ್ಳರು..!

ಬೆಳಗಾವಿ: ಕಾಕತಿ ವಲಯದ ಭೂತರಾಮನಹಟ್ಟಿ ಅರಣ್ಯದಲ್ಲಿ ತಡರಾತ್ರಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ನೀಲಗಿರಿ ಮರಗಳನ್ನು ಕಡಿಯುತ್ತಿದ್ದ ಇಬ್ಬರು ಕಿರಾತಕರನ್ನು ಕಾಕತಿ ಅರಣ್ಯ ಅಧಿಕಾರಿಗಳು ಬಲೆ ಬಿಸಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಕತಿ ಅರಣ್ಯ ವಲಯದ Beat Forester ರಾಹುಲ್ ಬೋಂಗಾಳೆ, ಶಂಕರ ಮನವಾಡಿ, ಚಾಮರಾಜ ಮುರುಗೋಡ, ರವಿ ಕಿಲಾರಿ ಸಿಬ್ಬಂದಿಗಳು ಸೇರಿಕೊಂಡು ನಡೆಸಿದ್ದ ಕಾರ್ಯಾಚರಣೆಯಲ್ಲಿ ರಾಜನಕಟ್ಟಿ ಗ್ರಾಮದ ಯಲ್ಲಪ್ಪಾ ಚಂದ್ರಪ್ಪಾ ಡುಮ್ಮನಾಯಕ ಹಾಗೂ ಬೆನಕನಹೊಳೆ ಗ್ರಾಮದ ಮಲ್ಲೇಶ ಮೇಖಲಿ ಎಂಬುವರು ನಿಲಗಿರಿ ಮರಗಳನ್ನು ಕಡಿದು TATA 407 ವಾಹನ ಸಂಖ್ಯೆ Ka22 B1533 ಯಲ್ಲಿ ಸಾಗಿಸುವಾಗ ನಿಲಗಿರಿ ಮಾಲಿನ ಸಮೇತ ವಾಹನವನ್ನು ಜಪ್ತಿ ಮಾಡಿಕೊಂಡಿದ್ದಾರೆ.

ನಂತರ ಕರ್ನಾಟಕ ಅರಣ್ಯ ಕಾಯ್ದೆ 1963 ಹಾಗೂ ಕರ್ನಾಟಕ ಅರಣ್ಯ ನಿಯಮಗಳು 1969 ರ ಪ್ರಕಾರ ಕಾಕತಿ ವಲಯದ ಅರಣ್ಯ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿ ಬೆನಕನಹೊಳೆ ಗ್ರಾಮದಲ್ಲಿ ದಾಸ್ತಾನು ಮಾಡಿದ ನಿಲಗಿರಿ ಮಾಲನ್ನು ಸಹ ಜಪ್ತಿ ಪಡಿಸಿಕೊಳ್ಳಲಾಗಿದೆ.

ವಾಹನ ಸೇರಿ ಸುಮಾರು 4 ಲಕ್ಷ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ.

ದಾಳಿಯಲ್ಲಿ ಬೆಳಗಾವಿಯ ACF ನಾಗರಾಜ ಬಾಳೆಹೊಸೂರು, RFO ಶಿವಕುಮಾರ ಮಾಳಿ, DRFO ಆನಂದ ಜಯಗೌಡರ, Beat Forester ರಾಹುಲ್ ಬೋಂಗಾಳೆ, ಶಂಕರ ಮನವಾಡಿ, ಚಾಮರಾಜ ಮುರುಗೋಡ, ರವಿ ಕಿಲಾರಿ, ಮಂಜುನಾಥ ಓಸಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಇವರ ಕಾರ್ಯಾಚರಣೆಗೆ DFO ಏನ್ ಎ ಕ್ರಾಂತಿ ಮೆಚ್ಚುಗೆ ವ್ಯಕ್ತಪಡಿಸಿ ಶ್ಲಾಘಿಸಿದ್ದಾರೆ.

ಇತ್ತೀಚಿಗೆ ನೀಲಗಿರಿ ಮರಗಳಿಗೆ ಬೇಡಿಕೆ ಅತಿ ಹೆಚ್ಚಾಗಿದ್ದು, ಖಾಸಗಿ ಜಮೀನಿನಲ್ಲಿ ನೀಲಗಿರಿ ಮರಗಳು ಇಲ್ಲದ ಕಾರಣ ಕಿರಾತಕರು ಅರಣ್ಯ ಪ್ರದೇಶದಲ್ಲಿ ಬೆಳೆದಿರುವ ಮರಗಳನ್ನು ಸಹ ಕದ್ದು ಮಾರುವ ಪ್ರವೃತ್ತಿಗೆ ಮುಂದಾಗಿದ್ದಾರೆ. ಈ ಕಾಡು ಕಳ್ಳ ಕಿರಾತಕರಿಗೆ ಕೆಲ ಯೂಟ್ಯೂಬರ್ಸ್ ಹಾಗೂ ಮರಿ ಪುಡಾರಿ ರಾಜಕಾರಣಿಗಳು ಬೆಂಬಲವಾಗಿ ನಿಂತಿದ್ದಾರೆಂದು ತಿಳಿದುಬಂದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ