ಕೊಪ್ಪಳ: ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮ ಸಮೀಪದ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಇಬ್ಬರು ಬಾಲಕಿಯರು ಬಟ್ಟೆ ತೊಳೆಯಲು ಹೋಗಿದ್ದಾಗ ಈದುರ್ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೃತ ಬಾಲಕಿಯರನ್ನು ಲಕ್ಷ್ಮವ್ವ ಹರಣಸಿಕಾರಿ (15) ಹಾಗೂ ಮುತ್ತುವ್ವ ಹರಣಸಿಕಾರಿ (8) ಎಂದು ಗುರುತಿಸಲಾಗಿದೆ. ಬಾಲಕಿಯರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
